ಹಿರಿಯ ಪತ್ರಿಕಾ ವಿತರಕ ರಮೇಶ್ ಯಾದವ್ ಅವರಿಗೆ ಸನ್ಮಾನ

100.7K Views 4 Sep 2025

ಮಂಗಳೂರು, ಪತ್ರಿಕಾ ವಿತರಕರ ದಿನದ ಅಂಗವಾಗಿ ಹಿರಿಯ ಪತ್ರಿಕಾ ವಿತರಕರಾಗಿರುವ ಅತ್ತಾವರದ ರಮೇಶ್ ಯಾದವ್ ಅವರನ್ನು ಕಂಕನಾಡಿ ರೇಣುಕಾರಾಜ್ ನ್ಯೂಸ್ ಏಜನ್ಸಿ ಅವರ ವತಿಯಿಂದ ಸನ್ಮಾನಿಸಲಾಯಿತು.
ಕಳೆದ 62 ವರ್ಷಗಳಿಂದ ಪತ್ರಿಕಾ ವಿತರಕನಾಗಿ ಕೆಲಸ ಮಾಡುತ್ತಿದ್ದು, ಎಲ್ಲಾ ಪತ್ರಿಕೆ ಮಾಲೀಕರು ನೀಡಿದ ಸಹಕಾರಕ್ಕೆ ಧನ್ಯವಾದ ಸಲ್ಲಿಸಿದರು.
ಮಹಾರಾಷ್ಟ್ರಕನ್ನಡಿಗ ಪತ್ರಕರ್ತರ ಸಂಘದ ಅಧ್ಯಕ್ಷ ರೋನ್ಸ್ ಬಂಟ್ವಾಳ್ ಶುಭ ಹಾರೈಸಿದರು. ಪತ್ರಿಕಾ ವಿತರಕರೇ ಪತ್ರಿಕೆಯ ಜೀವಾಳವಾಗಿದ್ದಾರೆ. ಅತೀ ಶೀಘ್ರವೇ ರಮೇಶ್ ಯಾದವ್ ಅವರಿಗೆ ದ್ವಿಚಕ್ರ ವಾಹನ ಕೊಡಿಸುವುದಾಗಿ ಭರವಸೆ ನೀಡಿದರು.
ಈ ವೇಳೆ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರ ಶ್ರೀನಿವಾಸ್ ನಾಯಕ್ ಇಂದಾಜೆ, ರೇಣುಕಾರಾಜ್ ನ್ಯೂಸ್ ಏಜನ್ಸಿ ಮಾಲೀಕ ನಾಗರಾಜ್ ಉಪಸ್ಥಿತರಿದ್ದರು.

Read More News

ಮೇರಿಹಿಲ್ ಪಾಲೆಮಾರ್ ಕನ್ವೆನ್ಷನ್ ಸೆಂಟರ್ ನಲ್ಲಿ ಇಂದು (ಮೇ. 23 ರಂದು) ಮಾಜಿ ಸಚಿವ ಜೆ. ಕೃಷ್ಣ ಪಾಲೆಮಾರ್ ಮಾಲಕತ್ವದ ಲ್ಯಾಂಡ್ ಲಿಂಕ್ಸ್ ಸಂಸ್ಥೆಯು ಮಂಗಳೂರಿನ ಪ್ರಮುಖ ನಾಲ್ಕು ಸ್ಥಳಗಳಲ್ಲಿ ನಿರ್ಮಿಸಿದ ಅತ್ಯಾಧುನಿಕ ಸೌಲಭ್ಯಗಳನ್ನೊಳಗೊಂಡ ಭವ್ಯ ಸಭಾ ಭವನಗಳನ್ನು ಲೋಕಾರ್ಪಣೆ ಮಾಡಿದ ಆಂಧ್ರ ಪ್ರದೇಶದ ರಾಜ್ಯಪಾಲ ಜಸ್ಟಿಸ್ ಎಸ್. ಅಬ್ದುಲ್ ನಜೀರ್. ಪಾಲೆಮಾರ್ ಅವರನ್ನು ಕೋಟಿಗೊಬ್ಬರು ಎಂದು ಗುಣಗಾನ ಮಾಡಿದ ಜಸ್ಟಿಸ್ ಅಬ್ದುಲ್ ನಜೀರ್.

ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್ ಅವರಿಂದ ಕರಾವಳಿ ಜನತೆಗೆ ವಿಶಿಷ್ಟ ಕೊಡುಗೆ: ಕರಾವಳಿ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಮಂಗಳೂರಿನ ನಾಲ್ಕು ಪ್ರಮುಖ ಸ್ಥಳಗಳಲ್ಲಿ ಏಕಕಾಲಕ್ಕೆ ನಾಲ್ಕು ಅತ್ಯಾಧುನಿಕ ಅದ್ದೂರಿ ಸಭಾಭವನಗಳ ಲೋಕಾರ್ಪಣೆ

Scroll to Top