ಕೊಂಕಣಿ ಕ್ಯಾಥೋಲಿಕ್ ಲಾಯರ್ಸ್ ಗಿಲ್ಡ್: ಸೆ. 5 ರಂದು ವಾರ್ಷಿಕ ವಿಶೇಷ ಬಲಿಪೂಜೆ – ರೆಡ್ ಮಾಸ್

110.8K Views 5 Sep 2025

ಮಂಗಳೂರು: ಕಾನೂನು ಸಂಬಂಧಿತ ವೃತ್ತಿಗಳಲ್ಲಿ ನಿರತರಾಗಿರುವ ಕ್ಯಾಥೋಲಿಕ್ ಕ್ರೈಸ್ತ ಸಮುದಾಯದ ಜನರಿಗಾಗಿ ನಡೆಸುವ ವಾರ್ಷಿಕ ವಿಶೇಷ ಬಲಿ ಪೂಜೆ – ರೆಡ್ ಮಾಸ್ ಮಂಗಳೂರಿನ ಜಪ್ಪು ಸಂತ ಅಂತೋನಿ ಚಾಪೆಲ್ ನಲ್ಲಿ ಸಪ್ಟೆಂಬರ್ 5 ರಂದು ಬೆಳಗ್ಗೆ 10.30 ಕ್ಕೆ ಜರಗಲಿದೆ. ಮಂಗಳೂರು ಧರ್ಮ ಪ್ರಾಂತ್ಯದ ಬಿಷಪ್ ಅತಿ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ದಾನ್ಹಾ ಅವರು ಬಲಿ ಪೂಜೆಯನ್ನು ನೆರವೇರಿಸಲಿದ್ದಾರೆ.
ಬಲಿ ಪೂಜೆಯ ಬಳಿಕ 11.45 ಕ್ಕೆ ಸಂತ ಅಂತೋನಿ ಆಶ್ರಮದ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಕೊಂಕಣಿ ಕ್ಯಾಥೋಲಿಕ್ ಲಾಯರ್ಸ್ ಗಿಲ್ಡ್ ನ ನೂತನ ಪದಾಧಿಕಾರಿಗಳ ಪದಗ್ರಹಣ ನೆರವೇರಲಿದೆ. ಬಿಷಪ್ ಅತಿ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ದಾನ್ಹಾ, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ, ಲೇ ಫೈತ್ ಫುಲ್ ಕಮಿಶನ್ ಕಾರ್ಯದರ್ಶಿ ವಂದನೀಯ ಫಾ. ಜೆ.ಬಿ. ಕ್ರಾಸ್ತಾ, ಕೊಂಕಣಿ ಕ್ಯಾಥೋಲಿಕ್ ಲಾಯರ್ಸ್ ಗಿಲ್ಡ್ ನ ಸ್ಥಾಪಕ ಅಧ್ಯಕ್ಷ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಪ್ರಧಾನ ಸರಕಾರಿ ವಕೀಲ ಎಂ. ಪಿ. ನೊರೊನ್ಹಾ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Read More News

ವಿದೇಶಿ ನೆಲ ಅಬುಧಾಬಿಯಲ್ಲಿ ಕನ್ನಡದ ಬಾವುಟ ಹಾರಿಸಿ, ಕನ್ನಡಿಗರೆಲ್ಲರನ್ನೂ ಒಗ್ಗೂಡಿಸಿ ಕನ್ನಡದ ಕಂಪು ಪಸರಿಸಿದ ಸಮಾಜ ಸೇವೆ, ಸಾಂಸ್ಕೃತಿಕ ರಾಯಭಾರಿಯಾಗಿ ಅಂತಾರಾಷ್ಟ್ರೀಯ ಮನ್ನಣೆಗೆ ಪಾತ್ರರಾದ ಭಾರತದ ಕುವರ. ಕರಾವಳಿ ಕರ್ನಾಟಕದ ಅಮೂಲ್ಯ ಬಂಟ ರತ್ನ, ತುಳುನಾಡಿನ ಬಹುಮುಖ ಪ್ರತಿಭೆ, ಜಾತ್ಯತೀತ ಸೇವಾ ಮನೋಭಾವದ ವಿಶ್ವ ಮಾನವ, ಅಜಾತ ಶತ್ರು, ಮಹಾನ್ ಸಾಧಕ, ಹೆಮ್ಮೆಯ ತುಳುವ, ಮಂಗಳೂರು ಸ್ಟಾರ್ ಸರ್ವೋತ್ತಮ ಶೆಟ್ಟಿಯವರ ಕುರಿತು Mp MLA’s News ಅಂತಾರಾಷ್ಟ್ರೀಯ ವಿಶೇಷ ಸಂದರ್ಶನ. INTERNATIONAL ACHIEVERS Special Interview By: Dr Ashok shetty B N.

Scroll to Top