ಮೊಂತಿ ಹಬ್ಬಕ್ಕೆ ಮಂಗಳೂರು ಧರ್ಮ ಪ್ರಾಂತ್ಯದ ಬಿಷಪ್ ಅತಿ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ದಾನ್ಹಾ ಅವರ ಸಂದೇಶ

117.6K Views 8 Sep 2025

ಸಪ್ಟೆಂಬರ್ 8 ಮೇರಿ ಮಾತೆಯ ಜನನದ ಹಬ್ಬದ ದಿನವಾಗಿದೆ. ಇದು ನಮ್ಮ ಮಾತೆಯ ದಿನ. ನಮಗೆ ಸಂತಸ,ಸಡಗರ, ಸಂಭ್ರಮದ ದಿನ. ಈ ದಿನದಂದು ಪುಟಾಣಿ ಮಕ್ಕಳು ಹೂವುಗಳನ್ನು ತಂದು, ನಾವು ನಮ್ಮ ಹೊಲ ಗದ್ದೆಗಳಲ್ಲಿ ಬೆಳೆದ ಬೆಳೆಯನ್ನು ತಂದು ದೇವರಿಗೆ ಅರ್ಪಿಸುವಾಗ ದೇವರು ನಮಗೆ ನೀಡಿದ ಹೊಸ ಬೆಳೆ ಮತ್ತು ನಮ್ಮ ಮನೆಗಳಲ್ಲಿ ಇರುವ ಹೆಣ್ಮಕ್ಕಳು ಹಾಗೂ ಮಹಿಳೆಯರು ನಿಜವಾಗಿಯೂ ನಮ್ಮ ಕುಟುಂಬದ ಭಂಡಾರ.
ಹೊಸ ಬೆಳೆ, ಮೇರಿ ಮಾತೆಯ ಜನ್ಮ ದಿನ ಹಾಗೂ ನಮ್ಮ ಕುಟುಂಬದ ಹೆಣ್ಮಕ್ಕಳು- ಈ ಮೂವರ ಆರೈಕೆ ಮಾಡಲು ದೇವರು ನಮಗೆ ವಿಶೇಷ ಆಹ್ವಾನ ನೀಡಿದ್ದಾರೆ. ಈ ಆಹ್ವಾನಕ್ಕೆ ಓಗೊಟ್ಟು ಮೇರಿ ಮಾತೆಯ ಜನ್ಮ ದಿನ ಆಚರಿಸುವ ಸಂದರ್ಭ ಮಾತೆಗೆ ನೀಡುವ ಗೌರವ ಮರಳಿ ನಮಗೆ ಲಭಿಸುತ್ತದೆ.
ಈ ಹಬ್ಬದ ಜತೆಗೆ ಕ್ಯಾಥೋಲಿಕ್ ಧರ್ಮ ಸಭೆಯು ಇನ್ನೊಂದು ವಿಶೇಷ ಹಬ್ಬವನ್ನು ಆಚರಿಸುತ್ತಿದೆ. ಸಪ್ಟೆಂಬರ್ 1 ರಿಂದ ಅಕ್ಟೋಬರ್ 4 ರ ವರೆಗೆ ಸಂತ ಫ್ರಾನ್ಸಿಸ್ ಆಸಿಸಿ ಅವರ ಹಬ್ಬದ ತನಕದ ಕಾಲವನ್ನು ಸೃಷ್ಟಿಯ ಕಾಲ ಎಂದು ಆಚರಿಸಲಾಗುತ್ತದೆ. ಈ ಸೃಷ್ಟಿಯ ಕಾಲದ ಆಚರಣೆಯ ಸಂದರ್ಭದಲ್ಲಿಯೇ ಮೇರಿ ಮಾತೆಯ ಜನ್ಮ ದಿನಾಚರಣೆ ಕೂಡಾ ಬರುವುದರಿಂದ ನಮ್ಮ ಮಂಗಳೂರಿನ ಸಂಸ್ಕೃತಿ ಮತ್ತು ಸಂಪ್ರದಾಯದಲ್ಲಿ ಹೊಸ ಬೆಳೆಗೆ, ಹೆಣ್ಮಕ್ಕಳಿಗೆ ಹಾಗೂ ಕುಟುಂಬದ ಏಕತೆಗೆ ಗಮನ ಹರಿಸುವುದರಿಂದ ನಮ್ಮ ಸಂಭ್ರಮ ಎರಡು ಪಟ್ಟಾಗುತ್ತದೆ.
ಈ ಹಬ್ಬದ ಸಂದರ್ಭ ವಿಶೇಷವಾಗಿ ಸಮಗ್ರ ಸೃಷ್ಟಿಯ ಸಂರಕ್ಷಣೆ ಮಾಡಲು, ಪ್ರಾರ್ಥನೆ ಸಲ್ಲಿಸಲು, ಬಲಿ ಪೂಜೆಯನ್ನು ಅರ್ಪಿಸಲು ಕ್ರೈಸ್ತ ಧರ್ಮ ಸಭೆ ಕರೆ ನೀಡಿರುವುದರಿಂದ ನಾವು ಪ್ರಾರ್ಥನೆಯ ಮೂಲಕ ಹಾಗೂ ನಮ್ಮ ಸೃಷ್ಟಿಯ ಸಂರಕ್ಷಣೆಯ ಮೂಲಕ ಪರಸ್ಪರರ ಸೇವೆ ಮಾಡಲು , ಗೌರವಿಸಲು , ಪ್ರೀತಿಯಿಂದ ಸೃಷ್ಟಿಯನ್ನು ಉಳಿಸಲು ಹಾಗೂ ಇನ್ನಷ್ಟು ಅಧಿಕ ಪ್ರಮಾಣದಲ್ಲಿ ಅದರ ಆರೈಕೆ ಮಾಡಲು ದೇವರು ನಮಗೆ ಅನುಗ್ರಹಿಸಲಿ. ಸೃಷ್ಟಿಯನ್ನು ಉಳಿಸೋಣ ಹಾಗೂ ಈ ಸೃಷ್ಟಿಯನ್ನು ಪ್ರೀತಿಸೋಣ ಮತ್ತು ಈ ಸೃಷ್ಟಿಗಾಗಿ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸೋಣ.
-ಅತಿ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ದಾನ್ಹಾ
ಧರ್ಮಾಧ್ಯಕ್ಷರು,
ಮಂಗಳೂರು ಧರ್ಮ ಪ್ರಾಂತ್ಯ.

Read More News

ವಿದೇಶಿ ನೆಲ ಅಬುಧಾಬಿಯಲ್ಲಿ ಕನ್ನಡದ ಬಾವುಟ ಹಾರಿಸಿ, ಕನ್ನಡಿಗರೆಲ್ಲರನ್ನೂ ಒಗ್ಗೂಡಿಸಿ ಕನ್ನಡದ ಕಂಪು ಪಸರಿಸಿದ ಸಮಾಜ ಸೇವೆ, ಸಾಂಸ್ಕೃತಿಕ ರಾಯಭಾರಿಯಾಗಿ ಅಂತಾರಾಷ್ಟ್ರೀಯ ಮನ್ನಣೆಗೆ ಪಾತ್ರರಾದ ಭಾರತದ ಕುವರ. ಕರಾವಳಿ ಕರ್ನಾಟಕದ ಅಮೂಲ್ಯ ಬಂಟ ರತ್ನ, ತುಳುನಾಡಿನ ಬಹುಮುಖ ಪ್ರತಿಭೆ, ಜಾತ್ಯತೀತ ಸೇವಾ ಮನೋಭಾವದ ವಿಶ್ವ ಮಾನವ, ಅಜಾತ ಶತ್ರು, ಮಹಾನ್ ಸಾಧಕ, ಹೆಮ್ಮೆಯ ತುಳುವ, ಮಂಗಳೂರು ಸ್ಟಾರ್ ಸರ್ವೋತ್ತಮ ಶೆಟ್ಟಿಯವರ ಕುರಿತು Mp MLA’s News ಅಂತಾರಾಷ್ಟ್ರೀಯ ವಿಶೇಷ ಸಂದರ್ಶನ. INTERNATIONAL ACHIEVERS Special Interview By: Dr Ashok shetty B N.

Scroll to Top