ನಾಳೆ(ಸೆ.11) ಯೇನೆಪೊಯ ಕಾಲೇಜಿನಲ್ಲಿ ಪ್ರಥಮ‌ ಚಿಕಿತ್ಸೆ ತರಬೇತಿ ಶಿಬಿರ

106.7K Views 10 Sep 2025

ಮಂಗಳೂರು: ನಗರದ ಕೂಳೂರಿನ ಯೇನೆಪೊಯ ಇನ್ ಸ್ಟಿಟ್ಯೂಟ್ ಆಫ್ ಆರ್ಟ್ಸ್ , ಸೈನ್ಸ್, ಕಾಮರ್ಸ್ ಮತ್ತು ಮ್ಯಾನೇಜ್ ಮೆಂಟ್ ಇದರ ಯೂತ್ ರೆಡ್ ಕ್ರಾಸ್ ಘಟಕದ ವತಿಯಿಂದ ಸೆ.11 ರಂದು ಬೆಳಗ್ಗೆ 9.30ಕ್ಕೆ ಸಂಸ್ಥೆಯ ಸೆಮಿನಾರ್ ಹಾಲ್ ನಲ್ಲಿ ಯೂತ್ ರೆಡ್ ಕ್ರಾಸ್ ಓರಿಯೆಂಟೇಶನ್ ಹಾಗೂ ಪ್ರಥಮ ಚಿಕಿತ್ಸೆ ತರಬೇತಿ ಕಾರ್ಯಕ್ರಮ ನಡೆಯಲಿದೆ.
ರೆಡ್ ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ನಿರ್ದೇಶಕ ಪಿ.ಬಿ.ಹರೀಶ್ ರೈ, ಯೇನೆಪೊಯ ಪರಿಗಣಿತ ವಿ.
ವಿ.ಯ ಯೂತ್ ರೆಡ್ ಕ್ರಾಸ್ ನೋಡಲ್ ಅಧಿಕಾರಿ ನಿತ್ಯಶ್ರೀ.ಬಿ.ವಿ. ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸಂಸ್ಥೆಯ ಪ್ರಾಂಶುಪಾಲ ಪ್ರೊ.ಜೀವನ್ ರಾಜ್ ಅಧ್ಯಕ್ಷತೆ ವಹಿಸಲಿದ್ದಾರೆ. ಯೇನೆಪೊಯ ನರ್ಸಿಂಗ್ ಕಾಲೇಜಿನ ಯೂತ್ ರೆಡ್ ಕ್ರಾಸ್ ಅಧಿಕಾರಿ ಜ್ಯೋತಿ, ಯೇನೆಪೊಯ ಸ್ಕೂಲ್ ಆಫ್ ಅಲೈಡ್ ಹೆಲ್ತ್ ಸೈನ್ಸ್ ನ ಅಸಿಸ್ಟೆಂಟ್ ಪ್ರೊಫೆಸರ್ ವಿಕ್ಕಿ ಜೋಸ್ವಿಟ ಡಿಸೋಜ ಸಂಪನ್ಮೂಲ‌ ವ್ಯಕ್ತಿಗಳಾಗಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Read More News

ವಿದೇಶಿ ನೆಲ ಅಬುಧಾಬಿಯಲ್ಲಿ ಕನ್ನಡದ ಬಾವುಟ ಹಾರಿಸಿ, ಕನ್ನಡಿಗರೆಲ್ಲರನ್ನೂ ಒಗ್ಗೂಡಿಸಿ ಕನ್ನಡದ ಕಂಪು ಪಸರಿಸಿದ ಸಮಾಜ ಸೇವೆ, ಸಾಂಸ್ಕೃತಿಕ ರಾಯಭಾರಿಯಾಗಿ ಅಂತಾರಾಷ್ಟ್ರೀಯ ಮನ್ನಣೆಗೆ ಪಾತ್ರರಾದ ಭಾರತದ ಕುವರ. ಕರಾವಳಿ ಕರ್ನಾಟಕದ ಅಮೂಲ್ಯ ಬಂಟ ರತ್ನ, ತುಳುನಾಡಿನ ಬಹುಮುಖ ಪ್ರತಿಭೆ, ಜಾತ್ಯತೀತ ಸೇವಾ ಮನೋಭಾವದ ವಿಶ್ವ ಮಾನವ, ಅಜಾತ ಶತ್ರು, ಮಹಾನ್ ಸಾಧಕ, ಹೆಮ್ಮೆಯ ತುಳುವ, ಮಂಗಳೂರು ಸ್ಟಾರ್ ಸರ್ವೋತ್ತಮ ಶೆಟ್ಟಿಯವರ ಕುರಿತು Mp MLA’s News ಅಂತಾರಾಷ್ಟ್ರೀಯ ವಿಶೇಷ ಸಂದರ್ಶನ. INTERNATIONAL ACHIEVERS Special Interview By: Dr Ashok shetty B N.

Scroll to Top