ನಾಳೆ(ಸೆ.11) ಯೇನೆಪೊಯ ಕಾಲೇಜಿನಲ್ಲಿ ಪ್ರಥಮ‌ ಚಿಕಿತ್ಸೆ ತರಬೇತಿ ಶಿಬಿರ

104.2K Views 10 Sep 2025

ಮಂಗಳೂರು: ನಗರದ ಕೂಳೂರಿನ ಯೇನೆಪೊಯ ಇನ್ ಸ್ಟಿಟ್ಯೂಟ್ ಆಫ್ ಆರ್ಟ್ಸ್ , ಸೈನ್ಸ್, ಕಾಮರ್ಸ್ ಮತ್ತು ಮ್ಯಾನೇಜ್ ಮೆಂಟ್ ಇದರ ಯೂತ್ ರೆಡ್ ಕ್ರಾಸ್ ಘಟಕದ ವತಿಯಿಂದ ಸೆ.11 ರಂದು ಬೆಳಗ್ಗೆ 9.30ಕ್ಕೆ ಸಂಸ್ಥೆಯ ಸೆಮಿನಾರ್ ಹಾಲ್ ನಲ್ಲಿ ಯೂತ್ ರೆಡ್ ಕ್ರಾಸ್ ಓರಿಯೆಂಟೇಶನ್ ಹಾಗೂ ಪ್ರಥಮ ಚಿಕಿತ್ಸೆ ತರಬೇತಿ ಕಾರ್ಯಕ್ರಮ ನಡೆಯಲಿದೆ.
ರೆಡ್ ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ನಿರ್ದೇಶಕ ಪಿ.ಬಿ.ಹರೀಶ್ ರೈ, ಯೇನೆಪೊಯ ಪರಿಗಣಿತ ವಿ.
ವಿ.ಯ ಯೂತ್ ರೆಡ್ ಕ್ರಾಸ್ ನೋಡಲ್ ಅಧಿಕಾರಿ ನಿತ್ಯಶ್ರೀ.ಬಿ.ವಿ. ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸಂಸ್ಥೆಯ ಪ್ರಾಂಶುಪಾಲ ಪ್ರೊ.ಜೀವನ್ ರಾಜ್ ಅಧ್ಯಕ್ಷತೆ ವಹಿಸಲಿದ್ದಾರೆ. ಯೇನೆಪೊಯ ನರ್ಸಿಂಗ್ ಕಾಲೇಜಿನ ಯೂತ್ ರೆಡ್ ಕ್ರಾಸ್ ಅಧಿಕಾರಿ ಜ್ಯೋತಿ, ಯೇನೆಪೊಯ ಸ್ಕೂಲ್ ಆಫ್ ಅಲೈಡ್ ಹೆಲ್ತ್ ಸೈನ್ಸ್ ನ ಅಸಿಸ್ಟೆಂಟ್ ಪ್ರೊಫೆಸರ್ ವಿಕ್ಕಿ ಜೋಸ್ವಿಟ ಡಿಸೋಜ ಸಂಪನ್ಮೂಲ‌ ವ್ಯಕ್ತಿಗಳಾಗಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Read More News

ಮೇರಿಹಿಲ್ ಪಾಲೆಮಾರ್ ಕನ್ವೆನ್ಷನ್ ಸೆಂಟರ್ ನಲ್ಲಿ ಇಂದು (ಮೇ. 23 ರಂದು) ಮಾಜಿ ಸಚಿವ ಜೆ. ಕೃಷ್ಣ ಪಾಲೆಮಾರ್ ಮಾಲಕತ್ವದ ಲ್ಯಾಂಡ್ ಲಿಂಕ್ಸ್ ಸಂಸ್ಥೆಯು ಮಂಗಳೂರಿನ ಪ್ರಮುಖ ನಾಲ್ಕು ಸ್ಥಳಗಳಲ್ಲಿ ನಿರ್ಮಿಸಿದ ಅತ್ಯಾಧುನಿಕ ಸೌಲಭ್ಯಗಳನ್ನೊಳಗೊಂಡ ಭವ್ಯ ಸಭಾ ಭವನಗಳನ್ನು ಲೋಕಾರ್ಪಣೆ ಮಾಡಿದ ಆಂಧ್ರ ಪ್ರದೇಶದ ರಾಜ್ಯಪಾಲ ಜಸ್ಟಿಸ್ ಎಸ್. ಅಬ್ದುಲ್ ನಜೀರ್. ಪಾಲೆಮಾರ್ ಅವರನ್ನು ಕೋಟಿಗೊಬ್ಬರು ಎಂದು ಗುಣಗಾನ ಮಾಡಿದ ಜಸ್ಟಿಸ್ ಅಬ್ದುಲ್ ನಜೀರ್.

ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್ ಅವರಿಂದ ಕರಾವಳಿ ಜನತೆಗೆ ವಿಶಿಷ್ಟ ಕೊಡುಗೆ: ಕರಾವಳಿ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಮಂಗಳೂರಿನ ನಾಲ್ಕು ಪ್ರಮುಖ ಸ್ಥಳಗಳಲ್ಲಿ ಏಕಕಾಲಕ್ಕೆ ನಾಲ್ಕು ಅತ್ಯಾಧುನಿಕ ಅದ್ದೂರಿ ಸಭಾಭವನಗಳ ಲೋಕಾರ್ಪಣೆ

Scroll to Top