ದಿನಾಂಕ 12/09/2025ರಂದು ಬಂಟ್ವಾಳ ತಾಲೂಕು ಪಂಚಾಯತ್ ನ ಎಸ್ ಜಿ ಎಸ್ ವೈ ಸಭಾಂಗಣದಲ್ಲಿ ಬಂಟ್ವಾಳ ನಗರ ಯೋಜನಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಗಾಯತ್ರಿ ದೊಂಬರ, ಗುರುಪ್ರಸಾದ್ ಸಹಾಯಕ ನಿರ್ದೇಶಕರು ನಗರ ಯೋಜನಾ ಪ್ರಾಧಿಕಾರ ಮಹಾನಗರ ಪಾಲಿಕೆ ಮಂಗಳೂರು ಇವರು ಏಕ ನಿವೇಶನ ವಿನ್ಯಾಸ ನಕ್ಷೆ ಅನುಮೋದನೆ ಮತ್ತು ಕಟ್ಟಡ ಪರವಾನಿಗೆಯ ಕಟ್ಟಡದ ವಿನ್ಯಾಸನಕ್ಷೆಗೆ ತಾಂತ್ರಿಕ ಅನುಮೋದನೆ ಹಾಗೂ ಸ್ವಾಧೀನ ಪತ್ರ ವಿತರಣೆ, ಸರ್ಕಾರದ ಇತ್ತೀಚಿನ ಆದೇಶ ಮತ್ತು ಸುತ್ತೋಲೆಗಳ ಕುರಿತು ಮಾಹಿತಿ ನೀಡಿದರು.
ಬಂಟ್ವಾಳ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ಬೇಬಿ ಕುಂದರ್, ಜಿಪಂ ಯೋಜನಾ ನಿರ್ದೇಶಕರಾದ ಜಯರಾಂ ಕೆ.ಇ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಾದ ಸಚಿನ್ ಕುಮಾರ್, ಸಹಾಯಕ ಕಾರ್ಯಪಾಲಕ ಅಭಿಯಂತರರಾದ ತಾರಾನಾಥ್ ಸಾಲ್ಯಾನ್, ಸಹಾಯಕ ನಿರ್ದೇಶಕರಾದ ವಿಶ್ವನಾಥ್ ಬಿ.(ಗ್ರಾ.ಉ), ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಾಗೂ ತಾಲೂಕು ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.







































































































































































































