ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾದ ಮಂಗಳೂರಿನ ಶಿಕ್ಷಕಿ ಶ್ರೀಮತಿ ಐರಿನ್ ಲೀನಾ ಸಿಕ್ವೇರಾ ಇವರು ದಕ್ಷಿಣಕನ್ನಡ ಜಿಲ್ಲೆಯ ಕೆಥೋಲಿಕ್ ವಿದ್ಯಾ ಮಂಡಳಿಯ ಆಡಳಿತಕ್ಕೊಳಪಟ್ಟ ನಂತೂರು ಕೆಲ್ವರಿ ಸಂತ ಜೋಸೆಫರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕಿ ಶ್ರೀಮತಿ ಐರಿನ್ ಲೀನಾ ಸಿಕ್ವೇರಾ ಇವರು ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಿಕ್ಷಕ ಸಂಘ ಬೆಗಳೂರು ಇವರಿಂದ ನೀಡಲ್ಪಡುವ 2025-26ನೇಯ ಸಾಲಿನ ರಾಜ್ಯ ಮಟ್ಟದ ಉತ್ತಮ ಪ್ರಶಸ್ತಿಗೆ ಭಾಜನರಾಗಿದ್ದಾರೆ.ಇತ್ತೀಚೆಗೆ ಹಾವೇರಿ ಜಿಲ್ಲೆಯ ರಾಣಿಬೆನ್ನೂರುನಲ್ಲಿ ನಡೆದ ಶಿಕ್ಷಕ ದಿನಾಚರಣೆ ಕಾರ್ಯಕ್ರಮದಲ್ಲಿ ಕರ್ನಾಟಕ ವಿಧಾನಸಭೆಯ ಉಪಸಭಾಧ್ಯಕ್ಷರಾದ ಗೌರವಾನ್ವಿತ ಶ್ರೀರುದ್ರಪ್ಪ ಲಮಾಣಿˌ ಸ್ಥಳೀಯ ಶಾಸಕರುˌ ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಾಗೂ ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಆಗಮಿಸಿದ ಸಾವಿರಾರು ಶಿಕ್ಷಕರ ಸಮ್ಮುಖದಲ್ಲಿ ಕರ್ನಾಟಕ ರಾಜ್ಯ ಸರ್ಕಾರದ ಶಾಲಾ ಶಿಕ್ಷಣ ಹಾಗೂ ಸಾಕ್ಷರತೆ ಇಲಾಖೆಯ ರಚಿವರಾದ ಸನ್ಮಾನ್ಯ ಶ್ರೀ ಮಧು ಬಂಗಾರಪ್ಪನವರು ಪ್ರದಾನ ಮಾಡಿ ಶಿಕ್ಷಕಿ ನಿಸ್ವಾರ್ಥ ಸೇವೆಯನ್ನು ಶ್ಲಾಘಿಸಿ ಗೌರವಿಸಿದರು. ಶ್ರೀಮತಿ ಐರಿನ್ ಲೀನಾ ಸಿಕ್ವೇರಾ ಇವರು ಹಲವಾರು ವರ್ಷಗಳಿಂದ ಈ ಶಾಲೆಯ ಸರ್ವಾಂಗೀಣ ಬೆಳವಣಿಗೆಗಾಗಿ ನಿಸ್ವಾರ್ಥ ಸೇವೆಯನ್ನು ಸಲ್ಲಿಸಿದ್ದಾರೆ.ಇವರು ಕದ್ರಿ ಕೈಬಟ್ಟಲು ಎಂಬಲ್ಲಿಯ ನಿವಾಸಿಯಾಗಿದ್ದು ಫರ್ನ್ಸ್ ಸರ್ವಿಸ್ ಸಂಸ್ಥೆಯ ಮಾಲಕ ಶ್ರೀ ಟೈಟಸ್ ಫೆರ್ನಾಂಡಿಸ್ ಇವರ ಧರ್ಮಪತ್ನಿಯಾಗಿರುತ್ತಾರೆ.





















































































































































































