ರಾಜ್ಯ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಭಾಜನರಾದ ಮಂಗಳೂರಿನ ಶಿಕ್ಷಕಿ ಶ್ರೀಮತಿ ಐರಿನ್ ಲೀನಾ ಸಿಕ್ವೇರಾ

118K Views 20 Sep 2025

ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾದ ಮಂಗಳೂರಿನ ಶಿಕ್ಷಕಿ ಶ್ರೀಮತಿ ಐರಿನ್ ಲೀನಾ ಸಿಕ್ವೇರಾ ಇವರು ದಕ್ಷಿಣಕನ್ನಡ ಜಿಲ್ಲೆಯ ಕೆಥೋಲಿಕ್ ವಿದ್ಯಾ ಮಂಡಳಿಯ ಆಡಳಿತಕ್ಕೊಳಪಟ್ಟ ನಂತೂರು ಕೆಲ್ವರಿ ಸಂತ ಜೋಸೆಫರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕಿ ಶ್ರೀಮತಿ ಐರಿನ್ ಲೀನಾ ಸಿಕ್ವೇರಾ ಇವರು ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಿಕ್ಷಕ ಸಂಘ ಬೆಗಳೂರು ಇವರಿಂದ ನೀಡಲ್ಪಡುವ 2025-26ನೇಯ ಸಾಲಿನ ರಾಜ್ಯ ಮಟ್ಟದ ಉತ್ತಮ ಪ್ರಶಸ್ತಿಗೆ ಭಾಜನರಾಗಿದ್ದಾರೆ.ಇತ್ತೀಚೆಗೆ ಹಾವೇರಿ ಜಿಲ್ಲೆಯ ರಾಣಿಬೆನ್ನೂರುನಲ್ಲಿ ನಡೆದ ಶಿಕ್ಷಕ ದಿನಾಚರಣೆ ಕಾರ್ಯಕ್ರಮದಲ್ಲಿ ಕರ್ನಾಟಕ ವಿಧಾನಸಭೆಯ ಉಪಸಭಾಧ್ಯಕ್ಷರಾದ ಗೌರವಾನ್ವಿತ ಶ್ರೀರುದ್ರಪ್ಪ ಲಮಾಣಿˌ ಸ್ಥಳೀಯ ಶಾಸಕರುˌ ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಾಗೂ ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಆಗಮಿಸಿದ ಸಾವಿರಾರು ಶಿಕ್ಷಕರ ಸಮ್ಮುಖದಲ್ಲಿ ಕರ್ನಾಟಕ ರಾಜ್ಯ ಸರ್ಕಾರದ ಶಾಲಾ ಶಿಕ್ಷಣ ಹಾಗೂ ಸಾಕ್ಷರತೆ ಇಲಾಖೆಯ ರಚಿವರಾದ ಸನ್ಮಾನ್ಯ ಶ್ರೀ ಮಧು ಬಂಗಾರಪ್ಪನವರು ಪ್ರದಾನ ಮಾಡಿ ಶಿಕ್ಷಕಿ ನಿಸ್ವಾರ್ಥ ಸೇವೆಯನ್ನು ಶ್ಲಾಘಿಸಿ ಗೌರವಿಸಿದರು. ಶ್ರೀಮತಿ ಐರಿನ್ ಲೀನಾ ಸಿಕ್ವೇರಾ ಇವರು ಹಲವಾರು ವರ್ಷಗಳಿಂದ ಈ ಶಾಲೆಯ ಸರ್ವಾಂಗೀಣ ಬೆಳವಣಿಗೆಗಾಗಿ ನಿಸ್ವಾರ್ಥ ಸೇವೆಯನ್ನು ಸಲ್ಲಿಸಿದ್ದಾರೆ.ಇವರು ಕದ್ರಿ ಕೈಬಟ್ಟಲು ಎಂಬಲ್ಲಿಯ ನಿವಾಸಿಯಾಗಿದ್ದು ಫರ್ನ್ಸ್ ಸರ್ವಿಸ್ ಸಂಸ್ಥೆಯ ಮಾಲಕ ಶ್ರೀ ಟೈಟಸ್ ಫೆರ್ನಾಂಡಿಸ್ ಇವರ ಧರ್ಮಪತ್ನಿಯಾಗಿರುತ್ತಾರೆ.

Read More News

ವಿದೇಶಿ ನೆಲ ಅಬುಧಾಬಿಯಲ್ಲಿ ಕನ್ನಡದ ಬಾವುಟ ಹಾರಿಸಿ, ಕನ್ನಡಿಗರೆಲ್ಲರನ್ನೂ ಒಗ್ಗೂಡಿಸಿ ಕನ್ನಡದ ಕಂಪು ಪಸರಿಸಿದ ಸಮಾಜ ಸೇವೆ, ಸಾಂಸ್ಕೃತಿಕ ರಾಯಭಾರಿಯಾಗಿ ಅಂತಾರಾಷ್ಟ್ರೀಯ ಮನ್ನಣೆಗೆ ಪಾತ್ರರಾದ ಭಾರತದ ಕುವರ. ಕರಾವಳಿ ಕರ್ನಾಟಕದ ಅಮೂಲ್ಯ ಬಂಟ ರತ್ನ, ತುಳುನಾಡಿನ ಬಹುಮುಖ ಪ್ರತಿಭೆ, ಜಾತ್ಯತೀತ ಸೇವಾ ಮನೋಭಾವದ ವಿಶ್ವ ಮಾನವ, ಅಜಾತ ಶತ್ರು, ಮಹಾನ್ ಸಾಧಕ, ಹೆಮ್ಮೆಯ ತುಳುವ, ಮಂಗಳೂರು ಸ್ಟಾರ್ ಸರ್ವೋತ್ತಮ ಶೆಟ್ಟಿಯವರ ಕುರಿತು Mp MLA’s News ಅಂತಾರಾಷ್ಟ್ರೀಯ ವಿಶೇಷ ಸಂದರ್ಶನ. INTERNATIONAL ACHIEVERS Special Interview By: Dr Ashok shetty B N.

Scroll to Top