ಮಂಗಳೂರು: ಕೆಲರಾಯ್ ಚರ್ಚ್ ನಲ್ಲಿ ಕ್ರೈಸ್ತ ಸಮುದಾಯದ ಜನೋತ್ಸವ

102.4K Views 21 Sep 2025

ಮಂಗಳೂರು: ಮಂಗಳೂರಿನ ಕೆಲರಾಯ್ ಸೈಂಟ್ ಆನ್ಸ್ ಚರ್ಚ್ ಮತ್ತು ಕ್ಯಾಥೊಲಿಕ್ ಸಭಾ ಕೆಲರಾಯ್ ಘಟಕದ ಜಂಟಿ ಆಶ್ರಯದಲ್ಲಿ ಕ್ರೈಸ್ತ ಸಮುದಾಯದ ಜನೋತ್ಸವ (ಲಾಯಿಕೋತ್ಸವ್ – 2025) ಸಪ್ಟೆಂಬರ್ 21 ರಂದು ಕೆಲರಾಯ್ ಗೋಲ್ಡನ್ ಜುಬಿಲಿ ಸಭಾಂಗಣದಲ್ಲಿ ನಡೆಯಲಿದೆ.
ವಿವಿಧ ಸಂಘಟನೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಸಮಾಜ ಮುಖಿ ಕಾರ್ಯಕ್ರಮಗಳನ್ನು ನಡೆಸಲು ಮುಂದಾಳುತ್ವ ವಹಿಸಲು ಆಸಕ್ತಿ ಇರುವ ಕ್ರೈಸ್ತ ಸಮುದಾಯದ ಮುಖಂಡರಿಗೆ, ಯುವ ಜನರಿಗೆ ಮತ್ತು ರಾಜಕೀಯ ಕ್ಷೇತ್ರದಲ್ಲಿ ಆಸಕ್ತಿ ಇರುವವರಿಗೆ ತರಬೇತಿ, ಮಾಹಿತಿ ನೀಡುವುದು, ಸಮಾಲೋಚನೆ ನಡೆಸುವುದು ಮತ್ತು ಏಕತೆಯ ಬಗ್ಗೆ ಮಾಹಿತಿ ನೀಡುವುದು ಇದರ ಉದ್ದೇಶವಾಗಿದೆ.


ಬೆಳಗ್ಗೆ 8.30 ರಿಂದ ಮಧ್ಯಾಹ್ನ 1 ಗಂಟೆ ತನಕ ನಡೆಯುವ ಈ ಕಾರ್ಯಕ್ರಮದಲ್ಲಿ ನೀರುಮಾರ್ಗ, ಬೊಂಡಂತಿಲ, ಉಳಾಯಿಬೆಟ್ಟು, ಮಲ್ಲೂರು, ಅಡ್ಯಾರ್, ಅರ್ಕುಳ, ಮೂಡುಶೆಡ್ಡೆ ಗ್ರಾಮ ಪಂಚಾಯತ್ ವ್ಯಾಪ್ತಿ ಹಾಗೂ ಮಂಗಳೂರು ಮಹಾ ನಗರ ಪಾಲಿಕೆಯ ಪದವು, ವಾಮಂಜೂರು ವಾರ್ಡ್ ಗಳ ವ್ಯಾಪ್ತಿಗೆ ಬರುವ 5 ಚರ್ಚು ಗಳ (ಕೆಲರಾಯ್, ನೀರುಮಾರ್ಗ, ಪೆರ್ಮಾಯ್, ಪಾಲ್ದನೆ, ವಾಮಂಜೂರು) ಕ್ರೈಸ್ತ ಸಮುದಾಯದ ಚರ್ಚ್ ಪಾಲನಾ ಸಮಿತಿಯ ಸದಸ್ಯರು, ಕ್ಯಾಥೊಲಿಕ್ ಸಭಾ ಘಟಕಗಳ ಸದಸ್ಯರು, ಐ. ಸಿ. ವೈ. ಎಂ. ಸದಸ್ಯರು, ವಿವಿಧ ಮುಖಂಡರು ಹಾಗೂ ಆಸಕ್ತರು ಸೇರಿದಂತೆ ಸುಮಾರು 700 ಕ್ಕಿಂತ ಅಧಿಕ ಮಂದಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ಕೆಲರಾಯ್ ಚರ್ಚ್ ಧರ್ಮಗುರು ವಂದನೀಯ ಫಾ. ಸಿಲ್ವೆಸ್ಟರ್ ಡಿ’ ಕೋಸ್ಟಾ ಮತ್ತು ಕ್ಯಾಥೋಲಿಕ್ ಸಭಾ ಅಧ್ಯಕ್ಷ ಡೊಟ್ಟಿ ಬ್ರಾಗ್ಸ್ ಅವರು ತಿಳಿಸಿದ್ದಾರೆ. ಫಾದರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆಗಳ ನಿರ್ದೇಶಕ ವಂದನೀಯ ಫಾ. ಫೌಸ್ಟಿನ್ ಲೋಬೊ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.

Read More News

ಮೇರಿಹಿಲ್ ಪಾಲೆಮಾರ್ ಕನ್ವೆನ್ಷನ್ ಸೆಂಟರ್ ನಲ್ಲಿ ಇಂದು (ಮೇ. 23 ರಂದು) ಮಾಜಿ ಸಚಿವ ಜೆ. ಕೃಷ್ಣ ಪಾಲೆಮಾರ್ ಮಾಲಕತ್ವದ ಲ್ಯಾಂಡ್ ಲಿಂಕ್ಸ್ ಸಂಸ್ಥೆಯು ಮಂಗಳೂರಿನ ಪ್ರಮುಖ ನಾಲ್ಕು ಸ್ಥಳಗಳಲ್ಲಿ ನಿರ್ಮಿಸಿದ ಅತ್ಯಾಧುನಿಕ ಸೌಲಭ್ಯಗಳನ್ನೊಳಗೊಂಡ ಭವ್ಯ ಸಭಾ ಭವನಗಳನ್ನು ಲೋಕಾರ್ಪಣೆ ಮಾಡಿದ ಆಂಧ್ರ ಪ್ರದೇಶದ ರಾಜ್ಯಪಾಲ ಜಸ್ಟಿಸ್ ಎಸ್. ಅಬ್ದುಲ್ ನಜೀರ್. ಪಾಲೆಮಾರ್ ಅವರನ್ನು ಕೋಟಿಗೊಬ್ಬರು ಎಂದು ಗುಣಗಾನ ಮಾಡಿದ ಜಸ್ಟಿಸ್ ಅಬ್ದುಲ್ ನಜೀರ್.

ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್ ಅವರಿಂದ ಕರಾವಳಿ ಜನತೆಗೆ ವಿಶಿಷ್ಟ ಕೊಡುಗೆ: ಕರಾವಳಿ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಮಂಗಳೂರಿನ ನಾಲ್ಕು ಪ್ರಮುಖ ಸ್ಥಳಗಳಲ್ಲಿ ಏಕಕಾಲಕ್ಕೆ ನಾಲ್ಕು ಅತ್ಯಾಧುನಿಕ ಅದ್ದೂರಿ ಸಭಾಭವನಗಳ ಲೋಕಾರ್ಪಣೆ

Scroll to Top