ಪಾಲಿಕೆ ವ್ಯಾಪ್ತಿಯಲ್ಲಿ ಜಾಗೃತಿ ಸಮಿತಿಗೆ ಡಾ.ರಾಜೇಶ್ ಕದ್ರಿ ನೇಮಕ

108.6K Views 25 Sep 2025

ಮಂಗಳೂರು : ಕರ್ನಾಟಕ ಸರಕಾರವು ರಾಜ್ಯದಲ್ಲಿ ಕನ್ನಡ ಅಭಿವೃದ್ಧಿಗಾಗಿ ಹಾಕಿಕೊಂಡಿರುವ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಅನುಕೂಲವಾಗುವಂತೆ ರಾಜ್ಯದ ಪ್ರತಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕನ್ನಡ ಜಾಗೃತಿ ಸಮಿತಿಯನ್ನು ರಚಿಸಿದ್ದು , ದಕ್ಷಿಣ ಕನ್ನಡ ಜಿಲ್ಲೆಯಲ್ಲಿನ ಮಹಾನಗರ ಪಾಲಿಕಾ ವ್ಯಾಪ್ತಿಗೆ ಸಂಬಂಧಿಸಿದಂತೆ ಒಟ್ಟು 6 ಮಂದಿ ಸದಸ್ಯರನ್ನು ನಾಮನಿರ್ದೇಶನ ಮಾಡಿರುತ್ತದೆ. ಇವರಲ್ಲಿ ಡಾ.ರಾಜೇಶ್ ಕದ್ರಿ ಕೂಡ ಒಬ್ಬರು.
ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾಗಿರುವ ಇವರು ಪತ್ರಕರ್ತ,
ಪತ್ರಿಕೋದ್ಯಮಿಯಾಗಿದ್ದು,ಶಿಕ್ಷಣ ಹಾಗೂ ಸಾಮಾಜಿಕ ಕ್ಷೇತ್ರದಲ್ಲೂ ತಮ್ಮನ್ನು ಸಕ್ರೀಯವಾಗಿ ತೊಡಗಿಸಿಕೊಂಡು ಬಂದಿರುತ್ತಾರೆ.

Read More News

ವಿದೇಶಿ ನೆಲ ಅಬುಧಾಬಿಯಲ್ಲಿ ಕನ್ನಡದ ಬಾವುಟ ಹಾರಿಸಿ, ಕನ್ನಡಿಗರೆಲ್ಲರನ್ನೂ ಒಗ್ಗೂಡಿಸಿ ಕನ್ನಡದ ಕಂಪು ಪಸರಿಸಿದ ಸಮಾಜ ಸೇವೆ, ಸಾಂಸ್ಕೃತಿಕ ರಾಯಭಾರಿಯಾಗಿ ಅಂತಾರಾಷ್ಟ್ರೀಯ ಮನ್ನಣೆಗೆ ಪಾತ್ರರಾದ ಭಾರತದ ಕುವರ. ಕರಾವಳಿ ಕರ್ನಾಟಕದ ಅಮೂಲ್ಯ ಬಂಟ ರತ್ನ, ತುಳುನಾಡಿನ ಬಹುಮುಖ ಪ್ರತಿಭೆ, ಜಾತ್ಯತೀತ ಸೇವಾ ಮನೋಭಾವದ ವಿಶ್ವ ಮಾನವ, ಅಜಾತ ಶತ್ರು, ಮಹಾನ್ ಸಾಧಕ, ಹೆಮ್ಮೆಯ ತುಳುವ, ಮಂಗಳೂರು ಸ್ಟಾರ್ ಸರ್ವೋತ್ತಮ ಶೆಟ್ಟಿಯವರ ಕುರಿತು Mp MLA’s News ಅಂತಾರಾಷ್ಟ್ರೀಯ ವಿಶೇಷ ಸಂದರ್ಶನ. INTERNATIONAL ACHIEVERS Special Interview By: Dr Ashok shetty B N.

Scroll to Top