ಅ.17ರಿಂದ ಸೃಜನಶೀಲ ಬರೆವಣಿಗೆ ಕಾರ್ಯಾಗಾರ

119.1K Views 15 Oct 2025

ಮಂಗಳೂರು: ಅಖಿಲ ಭಾರತೀಯ ಸಾಹಿತ್ಯ ಪರಿಷದ್ ದ.ಕ.ಜಿಲ್ಲಾ ಸಮಿತಿ ಮತ್ತು ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು ಇದರ ಮಂಗಳಗಂಗೆ ವಾರ್ಷಿಕ ಸಂಚಿಕೆ ವತಿಯಿಂದ ಅ.17 ಮತ್ತು 18 ರಂದು ವಿ.ವಿ.ಕಾಲೇಜಿನ ಶಿವರಾಮ ಕಾರಂತ‌ ಸಭಾಂಗಣದಲ್ಲಿ
ಸೃಜನೇತರ ಬರೆವಣಿಗೆ
ಕಾರ್ಯಾಗಾರ ನಡೆಯಲಿದೆ.
ಅ.17ರಂದು ಮಧ್ಯಾಹ್ನ 2ಕ್ಕೆ ಬೆಂಗಳೂರು ಉತ್ತರ ವಿ.ವಿ.ಯ ಕುಲಪತಿ ಪ್ರೊ.ನಿರಂಜನ ವಾನಳ್ಳಿ ಕಾರ್ಯಾಗಾರ ಉದ್ಘಾಟಿಸಲಿದ್ದಾರೆ. ಮಂಗಳೂರು ವಿ.ವಿ.ಯ ಕುಲಪತಿ ಪ್ರೊ. ಪಿ. ಎಲ್ ಧರ್ಮ ಅಧ್ಯಕ್ಷತೆ ವಹಿಸಲಿದ್ದಾರೆ.
ಮಂಗಳೂರು ವಿ.ವಿ.ಯ ಕುಲ‌ಸಚಿವ ಕೆ.ರಾಜು‌ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ವಿ.ವಿ.ಕಾಲೇಜು ಪ್ರಾಂಶುಪಾಲ ಪ್ರೊ.ಗಣಪತಿ ಗೌಡ, ಅಭಾಸಾಪ‌ ದ.ಕ.ಜಿಲ್ಲಾಧ್ಯಕ್ಷ ಪಿ. ಬಿ. ಹರೀಶ್ ರೈ‌ ಉಪಸ್ಥಿತರಿರುವರು.
ಹಿರಿಯ‌ ಲೇಖಕ‌ ಡಾ.ಚ.ನ. ಶಂಕರ್ ರಾವ್, ‌ಪತ್ರಕರ್ತರಾದ ಆರ್.ಸಿ.ಭಟ್ , ಗುರುಪ್ರಸಾದ್ ಟಿ.ಎನ್. ಸಂಪನ್ಮೂಲ‌ ವ್ಯಕ್ತಿಗಳಾಗಿ ಭಾಗವಹಿಸಲಿದ್ದಾರೆ.
ಅಭಾಸಾಪ‌ ರಾಜ್ಯ ಪ್ರಧಾನ ಕಾರ್ಯದರ್ಶಿ ರಘುನಂದನ್ ಭಟ್ ನರೂರು ಸಮಾರೋಪ ಭಾಷಣ ಮಾಡಲಿದ್ದಾರೆ‌ ಎಂದು ಪ್ರಕಟಣೆ ತಿಳಿಸಿದೆ.

Read More News

ವಿದೇಶಿ ನೆಲ ಅಬುಧಾಬಿಯಲ್ಲಿ ಕನ್ನಡದ ಬಾವುಟ ಹಾರಿಸಿ, ಕನ್ನಡಿಗರೆಲ್ಲರನ್ನೂ ಒಗ್ಗೂಡಿಸಿ ಕನ್ನಡದ ಕಂಪು ಪಸರಿಸಿದ ಸಮಾಜ ಸೇವೆ, ಸಾಂಸ್ಕೃತಿಕ ರಾಯಭಾರಿಯಾಗಿ ಅಂತಾರಾಷ್ಟ್ರೀಯ ಮನ್ನಣೆಗೆ ಪಾತ್ರರಾದ ಭಾರತದ ಕುವರ. ಕರಾವಳಿ ಕರ್ನಾಟಕದ ಅಮೂಲ್ಯ ಬಂಟ ರತ್ನ, ತುಳುನಾಡಿನ ಬಹುಮುಖ ಪ್ರತಿಭೆ, ಜಾತ್ಯತೀತ ಸೇವಾ ಮನೋಭಾವದ ವಿಶ್ವ ಮಾನವ, ಅಜಾತ ಶತ್ರು, ಮಹಾನ್ ಸಾಧಕ, ಹೆಮ್ಮೆಯ ತುಳುವ, ಮಂಗಳೂರು ಸ್ಟಾರ್ ಸರ್ವೋತ್ತಮ ಶೆಟ್ಟಿಯವರ ಕುರಿತು Mp MLA’s News ಅಂತಾರಾಷ್ಟ್ರೀಯ ವಿಶೇಷ ಸಂದರ್ಶನ. INTERNATIONAL ACHIEVERS Special Interview By: Dr Ashok shetty B N.

Scroll to Top