ಅ.17ರಿಂದ ಸೃಜನಶೀಲ ಬರೆವಣಿಗೆ ಕಾರ್ಯಾಗಾರ

104.4K Views 15 Oct 2025

ಮಂಗಳೂರು: ಅಖಿಲ ಭಾರತೀಯ ಸಾಹಿತ್ಯ ಪರಿಷದ್ ದ.ಕ.ಜಿಲ್ಲಾ ಸಮಿತಿ ಮತ್ತು ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು ಇದರ ಮಂಗಳಗಂಗೆ ವಾರ್ಷಿಕ ಸಂಚಿಕೆ ವತಿಯಿಂದ ಅ.17 ಮತ್ತು 18 ರಂದು ವಿ.ವಿ.ಕಾಲೇಜಿನ ಶಿವರಾಮ ಕಾರಂತ‌ ಸಭಾಂಗಣದಲ್ಲಿ
ಸೃಜನೇತರ ಬರೆವಣಿಗೆ
ಕಾರ್ಯಾಗಾರ ನಡೆಯಲಿದೆ.
ಅ.17ರಂದು ಮಧ್ಯಾಹ್ನ 2ಕ್ಕೆ ಬೆಂಗಳೂರು ಉತ್ತರ ವಿ.ವಿ.ಯ ಕುಲಪತಿ ಪ್ರೊ.ನಿರಂಜನ ವಾನಳ್ಳಿ ಕಾರ್ಯಾಗಾರ ಉದ್ಘಾಟಿಸಲಿದ್ದಾರೆ. ಮಂಗಳೂರು ವಿ.ವಿ.ಯ ಕುಲಪತಿ ಪ್ರೊ. ಪಿ. ಎಲ್ ಧರ್ಮ ಅಧ್ಯಕ್ಷತೆ ವಹಿಸಲಿದ್ದಾರೆ.
ಮಂಗಳೂರು ವಿ.ವಿ.ಯ ಕುಲ‌ಸಚಿವ ಕೆ.ರಾಜು‌ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ವಿ.ವಿ.ಕಾಲೇಜು ಪ್ರಾಂಶುಪಾಲ ಪ್ರೊ.ಗಣಪತಿ ಗೌಡ, ಅಭಾಸಾಪ‌ ದ.ಕ.ಜಿಲ್ಲಾಧ್ಯಕ್ಷ ಪಿ. ಬಿ. ಹರೀಶ್ ರೈ‌ ಉಪಸ್ಥಿತರಿರುವರು.
ಹಿರಿಯ‌ ಲೇಖಕ‌ ಡಾ.ಚ.ನ. ಶಂಕರ್ ರಾವ್, ‌ಪತ್ರಕರ್ತರಾದ ಆರ್.ಸಿ.ಭಟ್ , ಗುರುಪ್ರಸಾದ್ ಟಿ.ಎನ್. ಸಂಪನ್ಮೂಲ‌ ವ್ಯಕ್ತಿಗಳಾಗಿ ಭಾಗವಹಿಸಲಿದ್ದಾರೆ.
ಅಭಾಸಾಪ‌ ರಾಜ್ಯ ಪ್ರಧಾನ ಕಾರ್ಯದರ್ಶಿ ರಘುನಂದನ್ ಭಟ್ ನರೂರು ಸಮಾರೋಪ ಭಾಷಣ ಮಾಡಲಿದ್ದಾರೆ‌ ಎಂದು ಪ್ರಕಟಣೆ ತಿಳಿಸಿದೆ.

Read More News

ಮೇರಿಹಿಲ್ ಪಾಲೆಮಾರ್ ಕನ್ವೆನ್ಷನ್ ಸೆಂಟರ್ ನಲ್ಲಿ ಇಂದು (ಮೇ. 23 ರಂದು) ಮಾಜಿ ಸಚಿವ ಜೆ. ಕೃಷ್ಣ ಪಾಲೆಮಾರ್ ಮಾಲಕತ್ವದ ಲ್ಯಾಂಡ್ ಲಿಂಕ್ಸ್ ಸಂಸ್ಥೆಯು ಮಂಗಳೂರಿನ ಪ್ರಮುಖ ನಾಲ್ಕು ಸ್ಥಳಗಳಲ್ಲಿ ನಿರ್ಮಿಸಿದ ಅತ್ಯಾಧುನಿಕ ಸೌಲಭ್ಯಗಳನ್ನೊಳಗೊಂಡ ಭವ್ಯ ಸಭಾ ಭವನಗಳನ್ನು ಲೋಕಾರ್ಪಣೆ ಮಾಡಿದ ಆಂಧ್ರ ಪ್ರದೇಶದ ರಾಜ್ಯಪಾಲ ಜಸ್ಟಿಸ್ ಎಸ್. ಅಬ್ದುಲ್ ನಜೀರ್. ಪಾಲೆಮಾರ್ ಅವರನ್ನು ಕೋಟಿಗೊಬ್ಬರು ಎಂದು ಗುಣಗಾನ ಮಾಡಿದ ಜಸ್ಟಿಸ್ ಅಬ್ದುಲ್ ನಜೀರ್.

ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್ ಅವರಿಂದ ಕರಾವಳಿ ಜನತೆಗೆ ವಿಶಿಷ್ಟ ಕೊಡುಗೆ: ಕರಾವಳಿ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಮಂಗಳೂರಿನ ನಾಲ್ಕು ಪ್ರಮುಖ ಸ್ಥಳಗಳಲ್ಲಿ ಏಕಕಾಲಕ್ಕೆ ನಾಲ್ಕು ಅತ್ಯಾಧುನಿಕ ಅದ್ದೂರಿ ಸಭಾಭವನಗಳ ಲೋಕಾರ್ಪಣೆ

Scroll to Top