ನ್ಯಾಯಾಂಗ ವ್ಯವಸ್ಥೆಯಲ್ಲಿ ನಂಬಿಕೆ ಮುಖ್ಯ: ಶ್ರೀ ಚಂದ್ರಶೇಖರ ಸ್ವಾಮೀಜಿ

111.2K Views 21 Nov 2025

ಬೆಂಗಳೂರು: ನಮ್ಮ ಪ್ರಜಾಪ್ರಭುತ್ವ ದೇಶದಲ್ಲಿನ ನ್ಯಾಯಾಂಗ ವ್ಯವಸ್ಥೆಯಲ್ಲಿ ನಂಬಿಕೆಯೊಂದಿಗೆ ಕಾನೂನಿನ ಮೇಲೆ ವಿಶ್ವಾಸವನ್ನು ಹೊಂದಿರಬೇಕು, ಸತ್ಯ, ನಿಷ್ಠೆ, ಪ್ರಾಮಾಣಿಕತೆಯಿಂದ ಇದ್ದವನಿಗೆ ನ್ಯಾಯದ ಮೇಲಿನ ಭರವಸೆ ಎಂದಿಗೂ ಹುಸಿಯಾಗುವುದಿಲ್ಲ, ಇಂದು ನಮ್ಮ ನಡುವೆ ನ್ಯಾಯಾಧೀಶರಾದವರು ತಮ್ಮ ಸರಳ ವ್ಯಕ್ತಿತ್ವದಿಂದ ಸಮಾಜದಲ್ಲಿ ಗುರುತಿಸಿಕೊಂಡವರಲ್ಲಿ ನಾಗಲಿಂಗನ ಗೌಡ ಅವರೂ ಸಹ ಒಬ್ಬರಾಗಿದ್ದಾರೆ. ಅವರ ತೀರ್ಪುಗಳೇ ಅವರನ್ನು ಗೌರವಿಸಿದೆ ಎಂದು ಆಧ್ಯಾತ್ಮಿಕ ವಿಶ್ವಗುರು, ಅಂತಾರಾಷ್ಟ್ರೀಯ ವಾಸ್ತುತಜ್ಞರು, ಜ್ಯೋತಿಷ್ಯರಾದ ಶ್ರೀ ಚಂದ್ರಶೇಖರ ಸ್ವಾಮೀಜಿ ನುಡಿದರು.
ಅವರು ಬೆಂಗಳೂರಿನ ಶ್ರೀ ಚಂದ್ರಶೇಖರ ಸ್ವಾಮೀಜಿ ಸೇವಾಶ್ರಮದಲ್ಲಿ ನಡೆದ ಕರುನಾಡ ಸಾಧಕರು ಎಂಬ ಸರಣಿ ಕಾರ್ಯಕ್ರಮದಲ್ಲಿ ನಿವೃತ್ತ ಜಸ್ಟಿಸ್ ಹಾಗೂ ಕರ್ನಾಟಕ ಭೂ ಕಬಳಿಕೆ ವಿಶೇಷ ನ್ಯಾಯಾಲಯ ಬೆಂಗಳೂರು. ಕರ್ನಾಟಕ ಸರಕಾರ ಇದರ ಅಧ್ಯಕ್ಷರಾಗಿರುವ ನಾಗಲಿಂಗನ ಗೌಡ ಅವರನ್ನು ಸನ್ಮಾನಿಸಿ ಮಾತನಾಡಿದರು.
ಸನ್ಮಾನವನ್ನು ಸ್ವೀಕರಿಸಿ ನಾಗಲಿಂಗನ ಗೌಡ ಮಾತನಾಡಿ, ಸ್ವಾಮೀಜಿಯವರ ಸೇವಾ ಕಾರ್ಯ ನಿರಂತರವಾಗಿ ಮುಂದುವರಿಯಲಿ, ಸಮಾಜದಲ್ಲಿ ಅಶಕ್ತರಿಗೆ ಆಸರೆಯಾಗಿ, ಸದಾ ಸನ್ಮಾರ್ಗದಲ್ಲಿ ಸಾಗುವವರನ್ನು ಗೌರವಿಸುವ ಅವರ ಗುಣ ವಿಶೇಷತೆಯಿಂದ ಅವರ ನೇತೃತ್ವದ ಸೇವಾ ಶ್ರಮವನ್ನು ನಾಡಿನ ಜನತೆ ಗುರುತಿಸುತ್ತಿದೆ ಎಂದರು.
ಸೇವಾಶ್ರಮದ ನಿರ್ದೇಶಕಿ ರಜನಿ ಸಿ. ಭಟ್, ರಾಘವ ಸೂರ್ಯ, ನ್ಯಾಯವಾದಿ ರೋಶನಿ ಚಂದ್ರಶೇಖರ್, ರಾಹುಲ್ ಚಂದ್ರಶೇಖರ್ ಮತ್ತಿತರರು ಉಪಸ್ಥಿತರಿದ್ದರು.
ಆಶ್ರಮದ ವಕ್ತಾರ ನರೇಂದ್ರ ಕೆರೆಕಾಡು ಕಾರ್ಯಕ್ರಮ ನಿರೂಪಿಸಿದರು.

Read More News

ಮೇರಿಹಿಲ್ ಪಾಲೆಮಾರ್ ಕನ್ವೆನ್ಷನ್ ಸೆಂಟರ್ ನಲ್ಲಿ ಇಂದು (ಮೇ. 23 ರಂದು) ಮಾಜಿ ಸಚಿವ ಜೆ. ಕೃಷ್ಣ ಪಾಲೆಮಾರ್ ಮಾಲಕತ್ವದ ಲ್ಯಾಂಡ್ ಲಿಂಕ್ಸ್ ಸಂಸ್ಥೆಯು ಮಂಗಳೂರಿನ ಪ್ರಮುಖ ನಾಲ್ಕು ಸ್ಥಳಗಳಲ್ಲಿ ನಿರ್ಮಿಸಿದ ಅತ್ಯಾಧುನಿಕ ಸೌಲಭ್ಯಗಳನ್ನೊಳಗೊಂಡ ಭವ್ಯ ಸಭಾ ಭವನಗಳನ್ನು ಲೋಕಾರ್ಪಣೆ ಮಾಡಿದ ಆಂಧ್ರ ಪ್ರದೇಶದ ರಾಜ್ಯಪಾಲ ಜಸ್ಟಿಸ್ ಎಸ್. ಅಬ್ದುಲ್ ನಜೀರ್. ಪಾಲೆಮಾರ್ ಅವರನ್ನು ಕೋಟಿಗೊಬ್ಬರು ಎಂದು ಗುಣಗಾನ ಮಾಡಿದ ಜಸ್ಟಿಸ್ ಅಬ್ದುಲ್ ನಜೀರ್.

ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್ ಅವರಿಂದ ಕರಾವಳಿ ಜನತೆಗೆ ವಿಶಿಷ್ಟ ಕೊಡುಗೆ: ಕರಾವಳಿ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಮಂಗಳೂರಿನ ನಾಲ್ಕು ಪ್ರಮುಖ ಸ್ಥಳಗಳಲ್ಲಿ ಏಕಕಾಲಕ್ಕೆ ನಾಲ್ಕು ಅತ್ಯಾಧುನಿಕ ಅದ್ದೂರಿ ಸಭಾಭವನಗಳ ಲೋಕಾರ್ಪಣೆ

Scroll to Top