ಅಡ್ಡೂರು ಸೆಂಟ್ರಲ್ ಕಮಿಟಿ ಅಧ್ಯಕ್ಷರಾಗಿ ಅಬ್ದುಲ್ ರಝಾಕ್ ಆಯ್ಕೆ

119.4K Views 24 Nov 2025

ಮಂಗಳೂರು: ಅಡ್ಡೂರು ಸೆಂಟ್ರಲ್ ಕಮಿಟಿಯ ೨೦೨೫-೨೬ನೇ ಸಾಲಿನ ಮಹಾಸಭೆಯು ಸೆಂಟ್ರಲ್ ಕಮಿಟಿಯ ಅಧ್ಯಕ್ಷರಾಗಿ ಅಬ್ದುಲ್ ರಝಾಕ್ ನಂದ್ಯ ಆಯ್ಕೆಯಾದರು.
ಎಂ.ಎಸ್.ರಫೀಕ್ ಅಧ್ಯಕ್ಷತೆಯಲ್ಲಿ ಎ.ಎಸ್.ಅಶ್ರಫ್ ಉಸ್ತುವಾರಿಯಲ್ಲಿ ಸಫ್ವಾ ದಮ್ಮಾಮ್ ಮವಾದಿ ರೆಸಾರ್ಟ್‌ನಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಈ ಆಯ್ಕೆ ನಡೆಯಿತು. ಉಪಾಧ್ಯಕ್ಷರಾಗಿ ಶರೀಫ್ ಜಿ.ಎ., ಶಮೀರ್ ಅಳಕೆ ಗೌರವಾಧ್ಯಕ್ಷರಾಗಿ ಎಂ.ಎಸ್.ರಫೀಕ್, ಪ್ರಧಾನ ಕಾರ್ಯದರ್ಶಿಯಾಗಿ ಮನ್ಸೂರ್ ತೋಕೂರ್, ಜೊತೆ ಕಾರ್ಯದರ್ಶಿಯಾಗಿ ಶರೀಫ್ ಗೋಳಿಪಡ್ಪು ಹಾಗೂ ನವಾಝ್ ತೋಕೂರ್, ಕೋಶಾಧಿಕಾರಿಯಾಗಿ ನೂರ್ ತೋಕೂರ್, ಲೆಕ್ಕ ಪರಿಶೋಧಕರಾಗಿ ಕಲಂದರ್ ಗುತ್ತು, ಎಲ್ಲಾ ವಲಯ ಸಮಿತಿಗಳಿಂದ ತಲಾ ಐವರು ಸದಸ್ಯರನ್ನು ಕಾರ್ಯಕಾರಿ ಸಮಿತಿಗೆ ಆಯ್ಕೆ ಮಾಡಲಾಯಿತು.
ಸಲಹೆಗಾರರಾದ ಎ.ಪಿ.ಮುಹಮ್ಮದ್ ಕಿರಾಅತ್ ಪಠಿಸಿದರು. ಜುಬೈಲ್ ಸಮಿತಿಯ ಕಾರ್ಯದರ್ಶಿ ರಶೀದ್ ಎ.ಕೆ ಸ್ವಾಗತಿಸಿದರು. ಪ್ರದಾನ ಕಾರ್ಯದರ್ಶಿ ಮನ್ಸೂರ್ ವಾರ್ಷಿಕ ವರದಿ ಮಂಡಿಸಿದರು. ಜೊತೆ ಕಾರ್ಯದರ್ಶಿ ಖಲಂದರ್ ಗುತ್ತು ಹಣಕಾಸು ವರದಿ ಮಂಡಿಸಿದರು.

Read More News

ವಿದೇಶಿ ನೆಲ ಅಬುಧಾಬಿಯಲ್ಲಿ ಕನ್ನಡದ ಬಾವುಟ ಹಾರಿಸಿ, ಕನ್ನಡಿಗರೆಲ್ಲರನ್ನೂ ಒಗ್ಗೂಡಿಸಿ ಕನ್ನಡದ ಕಂಪು ಪಸರಿಸಿದ ಸಮಾಜ ಸೇವೆ, ಸಾಂಸ್ಕೃತಿಕ ರಾಯಭಾರಿಯಾಗಿ ಅಂತಾರಾಷ್ಟ್ರೀಯ ಮನ್ನಣೆಗೆ ಪಾತ್ರರಾದ ಭಾರತದ ಕುವರ. ಕರಾವಳಿ ಕರ್ನಾಟಕದ ಅಮೂಲ್ಯ ಬಂಟ ರತ್ನ, ತುಳುನಾಡಿನ ಬಹುಮುಖ ಪ್ರತಿಭೆ, ಜಾತ್ಯತೀತ ಸೇವಾ ಮನೋಭಾವದ ವಿಶ್ವ ಮಾನವ, ಅಜಾತ ಶತ್ರು, ಮಹಾನ್ ಸಾಧಕ, ಹೆಮ್ಮೆಯ ತುಳುವ, ಮಂಗಳೂರು ಸ್ಟಾರ್ ಸರ್ವೋತ್ತಮ ಶೆಟ್ಟಿಯವರ ಕುರಿತು Mp MLA’s News ಅಂತಾರಾಷ್ಟ್ರೀಯ ವಿಶೇಷ ಸಂದರ್ಶನ. INTERNATIONAL ACHIEVERS Special Interview By: Dr Ashok shetty B N.

Scroll to Top