ಉರ್ವ: ನವಾಕ್ಷರಿ ಯಾಗದ ಪ್ರಚಾರ ರಥಕ್ಕೆ ಚಾಲನೆ

94.8K Views 4 Dec 2025

ಮಂಗಳೂರು : ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ಡಿ. ತಾ. 25 ಹಾಗೂ 26 ರಂದು ನಡೆಯಲಿರುವ ಶ್ರೀ ಮಾರಿಯಮ್ಮ ನವಾಕ್ಷರಿ ಮಹಾ ಮಂತ್ರ ಯಾಗದ ಪ್ರಚಾರ ರಥಕ್ಕೆ ಶುಕ್ರವಾರ ಚಾಲನೆ ನೀಡಲಾಯಿತು.
ಆರಂಭದಲ್ಲಿ ಸಾನಿಧ್ಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಬಳಿಕ ಪ್ರಚಾರ ವಾಹನಕ್ಕೆ ಆರತಿ ಬೆಳಗಿಸಲಾಯಿತು. ವಾಹನದ ಮುಂದೆ ದೀಪ ಪ್ರಜ್ವಲನೆ ನೆರವೇರಿಸಿ ಶುಭ ಹಾರೈಸಲಾಯಿತು.
ಕ್ಷೇತ್ರದ ಆಡಳಿತ ಮೊಕ್ತೇಸರ ಲಕ್ಷ್ಮಣ್ ಅಮೀನ್, ಕೋಡಿಕಲ್, ಮೊಗವೀರ ಏಳು ಪಟ್ಟಣ ಸಂಯುಕ್ತ ಸಭಾ ಅಧ್ಯಕ್ಷ ಲೋಕೇಶ್ ಸುವರ್ಣ, ಮುಖ್ಯ ಅರ್ಚಕ ಶಿವಾನಂದ ಕನಡ, ಏಳು ಪಟ್ಟಣ ಸಂಯುಕ್ತ ಸಭಾ ಪ್ರಧಾನ ಕಾರ್ಯದರ್ಶಿ ಜಗದೀಶ ಬಂಗೇರ, ಯಾಗ ಸಮಿತಿ ಸಂಚಾಲಕ ಗೌತಮ್ ಸಾಲ್ಯಾನ್, ಕೋಡಿಕಲ್, ನಿಕಟ ಪೂರ್ವ ಕಾರ್ಪೊರೇಟರ್ ಗಣೇಶ್ ಕುಲಾಲ್, ಕರ್ನಾಟಕ ಪರ್ಸಿನ್ ಮೀನುಗಾರರ ಸಂಘದ ಅಧ್ಯಕ್ಷ ಅನಿಲ್ ಕುಮಾರ್ ಕರ್ಕೇರ, ಕ್ಷೇತ್ರದ ಮೊಕ್ತೇಸರರು ಹಾಗೂ ಬೋಳೂರು ಮೊಗವೀರ ಸಭಾದ ಅಧ್ಯಕ್ಷ ಸುಭಾಸ್ ಕುಂದರ್, ಬೈಕಂಪಾಡಿ ಮೊಗವೀರ ಸಭಾದ ಅಧ್ಯಕರು ಕುಮಾರ್ ಮೆಂಡನ್, ಕುದ್ರೋಳಿ ೧ನೇ ಮೊಗವೀರ ಸಭಾದ ಅಧ್ಯಕ ದೇವದಾಸ್ ಕರ್ಕೇರ, ವಿವಿಧ ಗ್ರಾಮಗಳ ಗುರಿಕಾರರು, ಪದಾಧಿಕಾರಿಗಳು ಮತ್ತು ಕ್ಷೇತ್ರದ ಭಕ್ತರು ಉಪಸ್ಥಿತರಿದ್ದರು.

Read More News

ಮೇರಿಹಿಲ್ ಪಾಲೆಮಾರ್ ಕನ್ವೆನ್ಷನ್ ಸೆಂಟರ್ ನಲ್ಲಿ ಇಂದು (ಮೇ. 23 ರಂದು) ಮಾಜಿ ಸಚಿವ ಜೆ. ಕೃಷ್ಣ ಪಾಲೆಮಾರ್ ಮಾಲಕತ್ವದ ಲ್ಯಾಂಡ್ ಲಿಂಕ್ಸ್ ಸಂಸ್ಥೆಯು ಮಂಗಳೂರಿನ ಪ್ರಮುಖ ನಾಲ್ಕು ಸ್ಥಳಗಳಲ್ಲಿ ನಿರ್ಮಿಸಿದ ಅತ್ಯಾಧುನಿಕ ಸೌಲಭ್ಯಗಳನ್ನೊಳಗೊಂಡ ಭವ್ಯ ಸಭಾ ಭವನಗಳನ್ನು ಲೋಕಾರ್ಪಣೆ ಮಾಡಿದ ಆಂಧ್ರ ಪ್ರದೇಶದ ರಾಜ್ಯಪಾಲ ಜಸ್ಟಿಸ್ ಎಸ್. ಅಬ್ದುಲ್ ನಜೀರ್. ಪಾಲೆಮಾರ್ ಅವರನ್ನು ಕೋಟಿಗೊಬ್ಬರು ಎಂದು ಗುಣಗಾನ ಮಾಡಿದ ಜಸ್ಟಿಸ್ ಅಬ್ದುಲ್ ನಜೀರ್.

ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್ ಅವರಿಂದ ಕರಾವಳಿ ಜನತೆಗೆ ವಿಶಿಷ್ಟ ಕೊಡುಗೆ: ಕರಾವಳಿ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಮಂಗಳೂರಿನ ನಾಲ್ಕು ಪ್ರಮುಖ ಸ್ಥಳಗಳಲ್ಲಿ ಏಕಕಾಲಕ್ಕೆ ನಾಲ್ಕು ಅತ್ಯಾಧುನಿಕ ಅದ್ದೂರಿ ಸಭಾಭವನಗಳ ಲೋಕಾರ್ಪಣೆ

Scroll to Top