ಸಿದ್ದಕಟ್ಟೆ ಸಹಕಾರ ಸಂಘಕ್ಕೆ 5.70 ಕೋಟಿ ಬೆಳೆ ವಿಮಾ ಪರಿಹಾರ ಮೊತ್ತ ಬಿಡುಗಡೆ :ಪ್ರಭಾಕರ ಪ್ರಭು

112.8K Views 9 Dec 2025

ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯಡಿಯಲ್ಲಿ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಲ್ಲಿ 2024-25 ನೇ ಸಾಲಿಗೆ ಸಂಬಂಧಿಸಿದಂತೆ ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವ್ಯಾಪ್ತಿಯ 1771 ರೈತರ 2037 ಎಕ್ರೆ ಅಡಿಕೆ ಬೆಳೆಗೆ ಅಂದಾಜು ಒಟ್ಟಿಗೆ 5.70 ಕೋಟಿ ವಿಮಾ ಪರಿಹಾರ ಬಿಡುಗಡೆಗೊಂಡಿದ್ದು ಹಂತ ಹಂತವಾಗಿ ರೈತರ ಬ್ಯಾಂಕ್ ಖಾತೆಗೆ ಜಮೆಯಾಗುತ್ತಿದೆ ಎಂದೂ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
2024- 25 ನೇ ಸಾಲಿನಲ್ಲಿ ಸಂಘದ ವ್ಯಾಪ್ತಿಯ ರೈತರು ಒಟ್ಟಿಗೆ 53 ಲಕ್ಷ ವಿಮೆ ಪ್ರಿಮಿಯಂ ಪಾವತಿಸಿದ್ದು ಗ್ರಾಮವಾರು ಬಿದ್ದ ಮಳೆಯ ಪ್ರಮಾಣ ಹಾಗೂ ಹವಾಮಾನ ವೈಫರಿತ್ಯದ ಆಧಾರದಲ್ಲಿ ಪರಿಹಾರ ಮೊತ್ತ ನಿಗದಿಯಾಗುತ್ತಿದ್ದು ಸಿದ್ದಕಟ್ಟೆ ಸಂಫದ ವ್ಯಾಪ್ತಿಯಲ್ಲಿ 28 ಸಾವಿರ ದಿಂದ 30 ಸಾವಿರವರೆಗೂ ಪರಿಹಾರ ಬಿಡುಗಡೆ ಗೊಂಡಿರುತ್ತದೆ. ಈ ಕುರಿತು ಪ್ರಿಮಿಯಂ ಪಾವತಿಸಿದ ರೈತರು ತಮ್ಮ ಬ್ಯಾಂಕ್ ಖಾತೆಯನ್ನು ಪರೀಕ್ಸಿ ಸಬಹುದಾಗಿದೆ ಎಂದೂ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.

Read More News

ಮೇರಿಹಿಲ್ ಪಾಲೆಮಾರ್ ಕನ್ವೆನ್ಷನ್ ಸೆಂಟರ್ ನಲ್ಲಿ ಇಂದು (ಮೇ. 23 ರಂದು) ಮಾಜಿ ಸಚಿವ ಜೆ. ಕೃಷ್ಣ ಪಾಲೆಮಾರ್ ಮಾಲಕತ್ವದ ಲ್ಯಾಂಡ್ ಲಿಂಕ್ಸ್ ಸಂಸ್ಥೆಯು ಮಂಗಳೂರಿನ ಪ್ರಮುಖ ನಾಲ್ಕು ಸ್ಥಳಗಳಲ್ಲಿ ನಿರ್ಮಿಸಿದ ಅತ್ಯಾಧುನಿಕ ಸೌಲಭ್ಯಗಳನ್ನೊಳಗೊಂಡ ಭವ್ಯ ಸಭಾ ಭವನಗಳನ್ನು ಲೋಕಾರ್ಪಣೆ ಮಾಡಿದ ಆಂಧ್ರ ಪ್ರದೇಶದ ರಾಜ್ಯಪಾಲ ಜಸ್ಟಿಸ್ ಎಸ್. ಅಬ್ದುಲ್ ನಜೀರ್. ಪಾಲೆಮಾರ್ ಅವರನ್ನು ಕೋಟಿಗೊಬ್ಬರು ಎಂದು ಗುಣಗಾನ ಮಾಡಿದ ಜಸ್ಟಿಸ್ ಅಬ್ದುಲ್ ನಜೀರ್.

ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್ ಅವರಿಂದ ಕರಾವಳಿ ಜನತೆಗೆ ವಿಶಿಷ್ಟ ಕೊಡುಗೆ: ಕರಾವಳಿ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಮಂಗಳೂರಿನ ನಾಲ್ಕು ಪ್ರಮುಖ ಸ್ಥಳಗಳಲ್ಲಿ ಏಕಕಾಲಕ್ಕೆ ನಾಲ್ಕು ಅತ್ಯಾಧುನಿಕ ಅದ್ದೂರಿ ಸಭಾಭವನಗಳ ಲೋಕಾರ್ಪಣೆ

Scroll to Top