ನಗರದಲ್ಲಿ ಹೆಚ್ಚುತ್ತಿರುವ ಹೆಬ್ಬಾವುಗಳ ಹಾವಳಿ

102.2K Views 18 Dec 2025

ಮಂಗಳೂರು-2 ದಿನಗಳ ಹಿಂದೆ ನಸುಕಿನ ಜಾವ 4.30ಕ್ಕೆ ಮಂಗಳೂರು ಸ್ಟೇಟ್ ಬ್ಯಾಂಕ್ ನ ಹ್ಯಾಮಿಲ್ಟನ್ ವೃತ್ತದ ಬಳಿ ಹೆಬ್ಬಾವೊಂದು ರಸ್ತೆ ಮಧ್ಯೆ ಹಾದು ಹೋಯಿತು.

ನಾವು ಡ್ಯೂಟಿ ಮುಗಿಸಿ ಬೈಕಲ್ಲಿ ಬರುವಾಗ ಕಂಡೆವು. ನಾವೆಲ್ಲ ಅದು ರಸ್ತೆ ದಾಟುವ ತನಕ ಕಾದು ಕುಳಿತು ಬೈಕ್ ನಿಲ್ಲಿಸಿ ನಂತರ ಹೊರಟೆವೆಂದು ಹೊಗೈ ಬಜಾರ್ ನಿವಾಸಿಯೊಬ್ಬರು ಹೇಳಿದ್ದಾರೆ. ನಗರದಲ್ಲಿ ಹೆಬ್ಬಾವುಗಳು ಹೆಚ್ಚುತ್ತಿದ್ದು, ನಿನ್ನೆ ರಾತ್ರಿ ಕೊಟ್ಟಾರ ಕ್ರಾಸ್ ನ ಪೂವರಿ ಫಾಸ್ಟ್ ಫುಡ್ ಬಳಿ ಹೆಬ್ಬಾವೊಂದು ಪತ್ತೆಯಾದಾಗ ತುಳುನಾಡು ಪ್ರತಿಷ್ಠಾನದ ಅಧ್ಯಕ್ಷ ರಾಜೇಶ್ ಅಮಿನ್ ಮೂಲ್ಕಿ ಮತ್ತು ಸ್ಥಳೀಯರಾದ ರಾಕೇಶ್ ಕೊಟ್ಟಾರ ಕ್ರಾಸ್ ಅವರು ಅದನ್ನು ಹಿಡಿದು ಸುರಕ್ಷಿತ ಜಾಗಕ್ಕೆ ತಲುಪಿಸಿದರು. ಇದನ್ನು ಈ ಕೆಳಗಿನ ಲಿಂಕ್ ಬಳಸಿ ನೋಡಬಹುದಾಗಿದೆ.

Read More News

ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಮತ್ತು ನಮ್ಮ ಟಿವಿ ಚಾನೆಲ್ ನ ಆಡಳಿತ ನಿರ್ದೇಶಕ ಡಾ. ಶಿವಶರಣ್ ಶೆಟ್ಟಿ ಮತ್ತು ಅವರ ಸಹೋದರರಾದ ದೇವಿಚರಣ್ ಶೆಟ್ಟಿ, ಹರಿಕಿಶನ್ ಶೆಟ್ಟಿ ಯವರ ಮಾತೃಶ್ರೀ,ಶಿಕ್ಷಣ ಇಲಾಖೆಯ ನಿವೃತ್ತ ಪ್ರಾದೇಶಿಕ ನಿರ್ದೇಶಕಿ ಹಾಗೂ ಡಾ. ಎ. ಸದಾನಂದ ಶೆಟ್ಟಿಯವರ ಸಹೋದರಿ ಎಂ. ರತ್ನಕಾಂತಿ ಶೆಟ್ಟಿ ಅವರಿಗೆ ಗಣ್ಯರಿಂದ ಶ್ರದ್ದಾಂಜಲಿ

ಕಸ್ತೂರಿ ರಂಗನ್ ವರದಿ ಆಧಾರಿತ ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶಗಳ 7 ನೇ ಕರಡು ಅಧಿಸೂಚನೆ ಬಗ್ಗೆ ಸದನದ ಗಮನ ಸೆಳೆದ ಶಾಸಕ ಗಂಟಿಹೊಳೆ. ಗ್ರಾಮೀಣ ಜನರ ಆತಂಕ ನಿವಾರಣೆ ಹಾಗೂ ಜೀವನೋಪಾಯಗಳಿಗೆ ಆಗಬಹುದಾದ ಸಂಭವನಿಯ ಅಪಾಯಗಳ ಬಗ್ಗೆ ಪ್ರಸ್ತಾಪಿಸಿದ ಬೈಂದೂರು ಶಾಸಕರು. ಜನರಿಗೆ ಸ್ಪಷ್ಟ ಮಾಹಿತಿ ಹಾಗೂ ಅಧಿಸೂಚನೆ ವಿರುದ್ಧ ಸ್ಪಷ್ಟ ವಾದ ಮಂಡನೆ ಸಲುವಾಗಿ ಒಂದು ಬಾರಿ ಅಧಿಸೂಚಿತ ಗ್ರಾಮಗಳನ್ನು ಭೌತಿಕ ಸರ್ವೇಗೆ ಒಳಪಡಿಸಲು ಆಗ್ರಹ. 7 ನೇ ಕರಡು ಅಧಿಸೂಚನೆ ಸರಕಾರದ ಹಂತದಲ್ಲಿ ಪರಿಶೀಲನೆಯಲ್ಲಿದೆ ಎಂದ ಅರಣ್ಯ, ಜೀವಿಶಾಸ್ತ್ರ ಹಾಗೂ ಪರಿಸರ ಸಚಿವರು.

Scroll to Top