ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ನೇತೃತ್ವದಲ್ಲಿ ಗೋಲ್ಡ್ ಫಿಂಚ್ ಸಿಟಿ ಯಲ್ಲಿ ಡಿ.27 ಮತ್ತು ಡಿ.28ರಂದು ಸಂಭ್ರಮದ ಜನ ಮೆಚ್ಚುಗೆ ಪಡೆದಿರುವ 9ನೇ ವರ್ಷದ ಮಂಗಳೂರು ಕಂಬಳ.

111.4K Views 24 Dec 2025

ಮಂಗಳೂರು: ಇದೇ ಬರುವ ಡಿ.27ರಂದು ಬಂಗ್ರ ಕೂಳೂರಿನ ಗೋಲ್ಡ್ ಪಿಂಚ್ ಸಿಟಿಯಲ್ಲಿ 9ನೇ ವರ್ಷದ ರಾಮ – ಲಕ್ಷ್ಮಣ ಜೋಡುಕರೆ ಕಂಬಳವು ನಡೆಯಲಿದೆ”
ಕಂಬಳವನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ದೇಶ ವಿದೇಶದ ಮಕ್ಕಳಿಗೆ ತುಳುನಾಡಿನ ಸಂಸ್ಕೃತಿಯ ಪರಿಚಯ ಆಗಬೇಕು ಎಂಬ ನಿಟ್ಟಿನಲ್ಲಿ ಪ್ರಾರಂಭಗೊಂಡ ಕಂಬಳ 9ನೇ ವರ್ಷಕ್ಕೆ ಕಾಲಿಟ್ಟಿದ್ದು ಸಂತಸದ ವಿಚಾರವಾಗಿದೆ ಎಂದು ಕಂಬಳ ಸಮಿತಿಯ ಅಧ್ಯಕ್ಷರು ಹಾಗೂ ದ.ಕ ಜಿಲ್ಲೆಯ ಸಂಸದರಾದ ಕ್ಯಾ.ಬ್ರಿಜೇಶ್ ಚೌಟ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಡಿ.27ರ ಬೆಳಗ್ಗೆ 8 ಗಂಟೆಗೆ ಕಂಬಳದ ಉದ್ಘಾಟನೆ ನಡೆಯಲಿದ್ದು ಉದ್ಘಾಟನೆಯನ್ನು ಗರೋಡಿ ಬ್ರಹ್ಮ ಬೈದರ್ಕಳ ಕ್ಷೇತ್ರದ ಮೊಕ್ತೇಸರರಾದ ಚಿತ್ತರಂಜನ್ ಅವರು ದೀಪ ಬೆಳಗಿಸುವ ಮೂಲಕ ಕಂಬಳಕ್ಕೆ ಚಾಲನೆ ನೀಡಲಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ.ವಿಜಯೆಂದ್ರ ಸಹಿತ ಶಾಸಕರು, ಸಾಮಾಜಿಕ,ರಾಜಕೀಯ ನೇತಾರರು ಭಾಗವಹಿಸಲಿದ್ದಾರೆ.
ನಗರ ಪ್ರದೇಶದಲ್ಲಿ ನೆಲೆಸಿರುವ ಜನರಿಗೆ ನಮ್ಮ ತುಳುನಾಡಿನ ಕಂಬಳದ ಪರಿಚಯವಾಗಬೇಕು ಎಂದು ವಿಶೇಷವಾಗಿ ಈ ಬಾರಿ 9 ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ತುಳುನಾಡಿನ ಹೆಮ್ಮೆಯ ರಾಣಿ ಅಬ್ಬಕ್ಕ ಚಿತ್ರಕಲಾ ಸ್ಪರ್ಧೆಯನ್ನು ಮಕ್ಕಳಿಗಾಗಿ ಆಯೋಜಿಸಲಾಗಿದೆ.ವಂದೇ ಮಾತರಂ150ನೇ ವರ್ಷ ಆಚರಣೆಯ ನಿಮಿತ್ತ ಕಂಬಳದಲ್ಲಿ ವಂದೇ ಮಾತರಂ ಗಾಯನ ಮತ್ತು 150 ವಿದ್ಯಾರ್ಥಿನಿಯರಿಂದ ಸಾಮೂಹಿಕ ವಂದೇ ಮಾತರಂ ಗಾಯನದೊಂದಿಗೆ ಕಾರ್ಯಕ್ರಮ ಪ್ರಾರಂಭವಾಗಲಿದೆ. ಪ್ರಧಾನಿ ಮೋದಿಯವರ ಆಶಯದಂತೆ ಗಿಡ ನೆಟ್ಟು ಬೆಳೆಸುವ ಕಾರ್ಯಕ್ರಮದ ಅಂಗವಾಗಿ ಗಿಡ ವಿತರಣೆಯನ್ನು ಹಮ್ಮಿಕೊಳ್ಳಲಾಗಿದೆ. ಬ್ಯಾಕ್ ಟು ಊರು ಅಭಿಯಾನದಡಿ 9 ಮಂದಿಯನ್ನು ಅಭಿನಂದಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.


ಮಂಗಳೂರು ನಗರದಲ್ಲಿರುವ ವ್ಯದ್ಯಾಶ್ರಮದ ಹಿರಿಯ ಜೀವಗಳಿಗೆ ಕಂಬಳ ತೋರಿಸುವ ಕಾರ್ಯಕ್ರಮ, ಪೇಂಟಿಂಗ್, ರೀಲ್ಸ್ ಸ್ಪರ್ಧೆ, ಫೋಟೋಗ್ರಾಫಿ, Al ಮುಖಾಂತರ ಮಂಗಳೂರು ಕಂಬಳ ಕ್ರಿಯೇಟ್ ಮಾಡುವ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಮಕ್ಕಳು, ಹಿರಿಯರು, ಯುವಕರು ಹೀಗೆ ಎಲ್ಲರನ್ನೂ ಸೇರಿಸಿಕೊಂಡು ಕಂಬಳವನ್ನು ಸದಾಕಾಲ ನೆನಪಲ್ಲಿ ಉಳಿಸುವ ಹಿನ್ನೆಲೆಯಲ್ಲಿ ಕಾರ್ಯಕ್ರಮ ನಡೆಸಲಾಗುತ್ತದೆ” ಎಂದು ಮಾಹಿತಿ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ಪ್ರಸಾದ್ ಕುಮಾರ್ ಶೆಟ್ಟಿ, ಕಿರಣ್ ಕೋಡಿಕಲ್, ಸಂಜಯ್ ಪ್ರಭು, ವಿಜಯ ಕುಮಾರ್ ,ವಸಂತ ಪೂಜಾರಿ, ಸುಜಿತ್ ಕುಮಾರ್ ಮಂಗಲ್ಮಾಡಿ ನಂದನ್ ಮಲ್ಯ , ಸಚಿನ್ ಶೆಟ್ಟಿ, ಈಶ್ವರ್, ಮತ್ತಿತರರು ಉಪಸ್ಥಿತರಿದ್ದರು.
ಚಿತ್ರಗಳು- ಸತೀಶ್ ಕಾಪಿಕಾಡ್

Read More News

Scroll to Top