ಕಾರ್ಕಳ- ಕಾರ್ಕಳ ಡಿವೈ ಎಸ್ಪಿಯಾಗಿ ಬೆಳ್ಳಿಯಪ್ಪ ಕೆ . ಯು.ಅವರು ನೇಮಕಗೊಂಡಿದ್ದಾರೆ. ಅವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿವಿಧ ಪೊಲೀಸ್ ಠಾಣೆಗಳಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಆಗಿ ನಿರ್ಭೀತ ಪೊಲೀಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿ ಸಾರ್ವಜನಿಕ ಪ್ರಶಂಸೆಗೆ ಪಾತ್ರರಾಗಿದ್ದರು. ಅವರು ಭಟ್ಕಳದಲ್ಲೂ ಪೊಲೀಸ್ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಕುಂದಾಪುರದಲ್ಲಿ ಕೂಡಾ ಡಿವೈಎಸ್ಪಿಯಾಗಿ ಜನ ಮನ್ನಣೆ ಗಳಿಸಿದ್ದರು. ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಯಲ್ಲಿ ನಿರ್ಭೀತ ಪೊಲೀಸ್ ಅಧಿಕಾರಿಯಾಗಿ ಪ್ರಾಮಾಣಿಕ, ದಕ್ಷ, ಸಮರ್ಥ ಪೊಲೀಸ್ ಆಫೀಸರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಬೆಳ್ಳಿಯಪ್ಪ ಅವರು ತನಿಖಾಧಿಕಾರಿಯಾಗಿ ಅಪರಾಧ ಜಗತ್ತಿನ ಕ್ಲಿಷ್ಟಕರ ಕೇಸುಗಳನ್ನು ಭೇದಿಸಿದ ಅತ್ಯಂತ ಚುರುಕಿನ ಅನುಭವಿ ಪೊಲೀಸ್ ಅಧಿಕಾರಿಯಾಗಿದ್ದಾರೆ. ಮಾನವೀಯ ಮೌಲ್ಯಗಳಿಗೆ ಜೀವ ತುಂಬುವ ಬೆಳ್ಳಿಯಪ್ಪ ಅವರು ಕರ್ನಾಟಕ ಕಂಡಿರುವ ಹೆಸರಾಂತ, ಹೆಮ್ಮೆಯ ಪೊಲೀಸ್ ಅಧಿಕಾರಿಯಾಗಿದ್ದಾರೆ.

















































































































































































