ಅಮರ್ಥ’ ಕನ್ನಡ ಚಲನಚಿತ್ರದ ಲಿರಿಕಲ್‌ ವೀಡಿಯೋ ಬಿಡುಗಡೆ

116.2K Views 4d ago

ಪಡುಬಿದ್ರಿ: ಡಾ.ಕನ್ಯಾನ ಸದಾಶಿವ ಶೆಟ್ಟಿ ಅವರ ಜತೆಯಲ್ಲಿ ಚಿತ್ರ ತಯಾರಿಕೆಯ ಸಾಹಸಕ್ಕಿಳಿದಿರುವ ಕರಾವಳಿ ಕರ್ನಾಟಕದ ಪಡುಬಿದ್ರಿಯ ಹುಟ್ಟು ಪ್ರತಿಭೆ, ಚಿತ್ರರಂಗದಲ್ಲಿ ಈಗಾಗಲೇ ಸಾಕಷ್ಟು ಹೆಸರು ಮಾಡಿರುವ ಗುರು ಹೆಗ್ಡೆ ಅವರು ಮುಂದೆ ಚಿತ್ರ ನಿರ್ಮಾಣದಲ್ಲೂ ಇನ್ನಷ್ಟು ಮಿಂಚಲಿ ಎಂದು ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಜೀಣೋದ್ಧಾರ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಡಾ.ಕೆ. ಪ್ರಕಾಶ್ ಶೆಟ್ಟಿ ಹೇಳಿದರು.
ಅವರು ಪಡುಬಿದ್ರಿ ದೇಗುಲದ ಬ್ರಹ್ಮಕಲಶೋತ್ಸವದಲ್ಲಿ ವಿಜಯಪ್ರಕಾಶ್ ಸಂಗೀತ ರಸಸಂಜೆಯ ಕಾರ್ಯಕ್ರಮದಲ್ಲಿ ‘ಪಂಚರಂಗಿ ಫಿಲಂಸ್’ ಸಂಸ್ಥೆಯಿಂದ ಡಾ. ಕನ್ಯಾನ ಸದಾಶಿವ ಶೆಟ್ಟಿ ಮತ್ತು ಗುರು ಹೆಗ್ಡೆ ನಿರ್ಮಾಣದಲ್ಲಿನ, ಗುರು ಹೆಗ್ಡೆ ಮತ್ತು ವಿನಯ್ ಪ್ರೀತಮ್ ಅವರ ನಿರ್ದೇಶನದಲ್ಲಿ ನಿರ್ಮಾಣಗೊಂಡು ಬಿಡುಗಡೆಯ
ಹಂತದಲ್ಲಿರುವ ಕನ್ನಡ ಚಲನಚಿತ್ರ ‘ಅಮರ್ಥ’ದ ಲಿರಿಕಲ್ ವೀಡಿಯೋ ಬಿಡುಗಡೆ ಸಂದರ್ಭ ಮಾತನಾಡಿದರು. ಈ ಚಿತ್ರದ ಮುಖ್ಯಭೂಮಿಕೆಯಲ್ಲಿ ಶ್ರೀನಗರ್ ಕಿಟ್ಟಿ ಮೇಘನಾ ರಾಜ್, ಗುರು ಹೆಗ್ಡೆ ಮಂಜು ಭಾಷಿಣಿ, ಉಷಾ ಬಂಡಾರಿ, ಹರೀಶ್ ಹಿರಿಯೂರು ಅವರೊಂದಿಗೆ ಕರ್ನಾಟಕ ಕರಾವಳಿಯ ಪ್ರಮುಖ ಕಲಾವಿದರು, ತಂತ್ರಜ್ಞರು ಭಾಗಿಗಳಾಗಿದ್ದಾರೆ. ಖ್ಯಾತ ಗಾಯಕ ವಿಜಯ ಪ್ರಕಾಶ್ ಅವರೇ ಹಾಡಿರುವ ಲಿರಿಕಲ್ ವೀಡಿಯೋವನ್ನು ಸ್ವತಹಾ ವಿಜಯಪ್ರಕಾಶ್ ಬಿಡುಗಡೆಗೊಳಿಸಿದರು. ದೇವಸ್ಥಾನದ ಆನುವಂಶಿಕ ಮೊಕೇಸರ ಭವಾನಿಶಂಕರ ಹೆಗ್ಡೆ ಸಾಂಸ್ಕೃತಿಕ ಸಮಿತಿಯ ಸಂಚಾಲಕ ಡಾ. ವೈ. ಎನ್. ಶೆಟ್ಟಿ ಸಹ ಸಂಚಾಲಕ ನಟರಾಜ್ ಪಿ. ಎಸ್., ಯಶೋದಾ ಪೂಜಾರಿ, ಚಿತ್ರನಟ ಪಡುಬಿದ್ರಿ ಗುರು ಹೆಗ್ಡೆ ಮತ್ತಿತರರಿದ್ದರು.

Read More News

ಮೇರಿಹಿಲ್ ಪಾಲೆಮಾರ್ ಕನ್ವೆನ್ಷನ್ ಸೆಂಟರ್ ನಲ್ಲಿ ಇಂದು (ಮೇ. 23 ರಂದು) ಮಾಜಿ ಸಚಿವ ಜೆ. ಕೃಷ್ಣ ಪಾಲೆಮಾರ್ ಮಾಲಕತ್ವದ ಲ್ಯಾಂಡ್ ಲಿಂಕ್ಸ್ ಸಂಸ್ಥೆಯು ಮಂಗಳೂರಿನ ಪ್ರಮುಖ ನಾಲ್ಕು ಸ್ಥಳಗಳಲ್ಲಿ ನಿರ್ಮಿಸಿದ ಅತ್ಯಾಧುನಿಕ ಸೌಲಭ್ಯಗಳನ್ನೊಳಗೊಂಡ ಭವ್ಯ ಸಭಾ ಭವನಗಳನ್ನು ಲೋಕಾರ್ಪಣೆ ಮಾಡಿದ ಆಂಧ್ರ ಪ್ರದೇಶದ ರಾಜ್ಯಪಾಲ ಜಸ್ಟಿಸ್ ಎಸ್. ಅಬ್ದುಲ್ ನಜೀರ್. ಪಾಲೆಮಾರ್ ಅವರನ್ನು ಕೋಟಿಗೊಬ್ಬರು ಎಂದು ಗುಣಗಾನ ಮಾಡಿದ ಜಸ್ಟಿಸ್ ಅಬ್ದುಲ್ ನಜೀರ್.

ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್ ಅವರಿಂದ ಕರಾವಳಿ ಜನತೆಗೆ ವಿಶಿಷ್ಟ ಕೊಡುಗೆ: ಕರಾವಳಿ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಮಂಗಳೂರಿನ ನಾಲ್ಕು ಪ್ರಮುಖ ಸ್ಥಳಗಳಲ್ಲಿ ಏಕಕಾಲಕ್ಕೆ ನಾಲ್ಕು ಅತ್ಯಾಧುನಿಕ ಅದ್ದೂರಿ ಸಭಾಭವನಗಳ ಲೋಕಾರ್ಪಣೆ

Scroll to Top