ವಿಶ್ವ ಪರಿಸರ ದಿನಾಚರಣೆಗಾಂಧಿನಗರ ಸರಕಾರಿ ಶಾಲಾ ಮಕ್ಕಳಿಗೆ ಬಟ್ಟೆ ಬ್ಯಾಗ್ ವಿತರಣೆ

92.2K Views 5 Jun 2026

ಮಂಗಳೂರು, ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ನಗರದ ಗಾಂಧಿನಗರದ ಜಿಲ್ಲಾ ಪಂಚಾಯತ್ ಉನ್ನತಿಕರಿಸೀದ ಸರಕಾರಿ ಶಾಲೆಯ ಮಕ್ಕಳಿಗೆ ಏಕ ಬಳಕೆಯ ಪ್ಲಾಸ್ಟಿಕ್ ಬಳಕೆ ವಿರುದ್ಧ ಜಾಗೃತಿ ಮೂಡಿಸಲು ಬಟ್ಟೆ ಚೀಲಗಳನ್ನು ವಿತರಿಸಲಾಯಿತು.
ಗ್ಲೋಬಲ್ ಗ್ರೀನ್ ಇಕೋ ಫೌಂಡೇಶನ್, ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಹಾಗೂ ಗಾಂಧಿ ನಗರ ಜಿಲ್ಲಾ ಪಂಚಾಯತ್ ಉನ್ನತಿಕರಿಸಿದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ವತಿಯಿಂದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಶಾಲಾ ಮಕ್ಕಳಿಗೆ ಆಯೋಜಿಸಲಾದ ಭಾಷಣ ಸ್ಪರ್ಧೆಯ ಬಹುಮಾನವನ್ನು ದಕ್ಷಿಣ ಕನ್ನಡ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಗೋಕುಲದಾಸ್ ನಾಯಕ್ ವಿತರಿಸಿ ಮಾತನಾಡಿದರು.
ವಿದ್ಯಾರ್ಥಿಗಳಲ್ಲಿ ಪ್ಲಾಸ್ಟಿಕ್ ಬಳಕೆಯಿಂದ ಪರಿಸರದ ಮೇಲೆ ಆಗುವ ಹಾನಿಯ ಕುರಿತು ಜಾಗೃತಿ ಮೂಡಿಸುವ ಕಾರ್ಯ ಆಗಬೇಕಾಗಿದೆ. ಈ ನಿಟ್ಟಿನಲ್ಲಿ ಮಕ್ಕಳಿಗೆ ಬಟ್ಟೆಯ ಚೀಲ ನೀಡಿ ಜಾಗೃತಿ ಮೂಡಿಸುವುದು ಉತ್ತಮ ಕಾರ್ಯ ಎಂದು ಹೇಳಿದರು.
ಬಟ್ಟೆ ಚೀಲ ವಿತರಿಸಿ ಮಾತನಾಡಿದ ಮಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ಮಹಾ ಪ್ರಬಂಧಕ ಅರುಣಾ ಪ್ರಭ, ಪರಿಸರದ ಮೇಲೆ ನಿರಂತರ ನಡೆಯುವ. ಮಾಲಿನ್ಯ ದಿಂದದಾಗಿ ಗಾಳಿ ಕೂಡ ವಿಷಯುಕ್ತ ವಾಗುತ್ತಿದೆ. ವಿದ್ಯಾರ್ಥಿಗಳು ತಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಚವಾಗಿಡಲು ಮೊದಲ ಆದ್ಯತೆ ನೀಡಬೇಕಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮಂಗಳೂರು ಮಹಾನಗರ ಪಾಲಿಕೆ ಉಪ ಆಯುಕ್ತ ನರೇಶ್ ಶೆಣೈ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ ಬಿ ಹರೀಶ್. ರೈ, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ ಎನ್, ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಶ್ರೀನಿವಾಸ್ ನಾಯಕ್ ಇಂದಾಜೆ, ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಅಧ್ಯಕ್ಷ ಭಾಸ್ಕರ್ ರೈ ಕಟ್ಟಾ, ಗಾಂಧಿ ನಗರ ಜಿಲ್ಲಾ ಪಂಚಾಯತ್ ಉನ್ನತಿಕರಿಸೀದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯನಿ ಫ್ಲೆವಿ ಫೆರ್ನಾಂಡೀಸ್, ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Read More News

ಸರಕಾರಿ ಆಸ್ಪತ್ರೆಗಳಲ್ಲಿ ರೇಬಿಸ್ ತಡೆಗಟ್ಟಲು ನೀಡುವ ERIG ಇಂಜೆಕ್ಷನ್ ಕಳಪೆ ಗುಣಮಟ್ಟದ ಔಷಧವಲ್ಲ -ಡಿಎಂಒ ಡಾ. ಶಿವಪ್ರಕಾಶ್ ಸ್ಪಷ್ಟನೆ. ಅದು ಓಕೆ, ಖಾಸಗಿ ಆಸ್ಪತ್ರೆಗಳಲ್ಲಿ ನೀಡಲಾಗುವ ಬೆಲೆ ಬಾಳುವ ರಿಸ್ಕ್ ರಹಿತ ಇಮ್ಮುನೋಗ್ಲೋಬುಲಿನ್ ಇಂಜೆಕ್ಷನ್ ಗಳ ಬಳಕೆಗೆ mpmlasnewstv ಒತ್ತಾಯ

Scroll to Top