ಆ.3ರಿಂದ ಮೂಳೆ ಮತ್ತು ಕೀಲುಗಳ ಆರೋಗ್ಯ ಜಾಗೃತಿ ಸಪ್ತಾಹ -ಕೆಒಎ ಅಧ್ಯಕ್ಷ ಡಾ.ಬಿ.ಸಚ್ಚಿದಾನಂದ ರೈ ಮಾಹಿತಿ

99.9K Views 2w ago

ಮಂಗಳೂರು: ಕರ್ನಾಟಕ ಆರ್ಥೋಪೆಡಿಕ್ ಅಸೋಸಿಯೇಶನ್ (ಕೆಒಎ) ವತಿಯಿಂದ ಸಾರ್ವಜನಿಕರಲ್ಲಿ ಮೂಳೆ ಮತ್ತು ಕೀಲುಗಳ ಆರೋಗ್ಯದ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಆ.3ರಿಂದ 8ರವರೆಗೆ ರಾಜ್ಯಾದ್ಯಂತ ಬೋನ್ ಮತ್ತು ಜಾಯಿಂಟ್ ವೀಕ್ – 2026 ಆಚರಣೆ ವಿವಿಧ ಜಾಗೃತಿ ಕಾರ್ಯಕ್ರಮಗಳ ಮೂಲಕ ನಡೆಯಲಿದೆ
ಜಿಲ್ಲಾ ಆರ್ಥೋಪೆಡಿಕ್ ಅಸೋಸಿಯೇಶನ್‌ಗಳು, ಶಾಲೆಗಳು, ವೈದ್ಯಕೀಯ ಕಾಲೇಜುಗಳು ಮತ್ತು ಆಸ್ಪತ್ರೆಗಳ ಸಹಯೋಗದಲ್ಲಿ ಈ ಕಾರ್ಯಕ್ರಮ ನಡೆಯಲಿದೆ ಎಂದು
ಕೆಒಎ ಅಧ್ಯಕ್ಷ ಡಾ.ಬಿ.ಸಚ್ಚಿದಾನಂದ ರೈ ತಿಳಿಸಿದ್ದಾರೆ.
ಆ.3ರಂದು ಶಾಲಾಮಕ್ಕಳಲ್ಲಿ ಬೆನ್ನುಮೂಳೆ ಮತ್ತು ದೇಹದ ಭಂಗಿ ತಪಾಸಣೆ, ಆ.4ರಂದು ಆಸ್ಟಿಯೋಪೊರೋಸಿಸ್ ತಡೆ ಹಾಗೂ ಹಾರ್ಮೋನ್ ಆರೋಗ್ಯದ ಅರಿವು, ಆ.5ರಂದು ಸರಿಯಾದ ಕುಳಿತುಕೊಳ್ಳುವಿಕೆ, ನಿಲ್ಲುವಿಕೆ ಹಾಗೂ ಕೆಲಸದ ಭಂಗಿಯ ಕುರಿತು ಜಾಗೃತಿ, ಆ.6ರಂದು ಅಪಘಾತ ಮತ್ತು ಗಾಯಗಳ ತಡೆ ಕುರಿತು ಸಾರ್ವಜನಿಕ ಶಿಕ್ಷಣ, ಆ.7ರಂದು
ಹಿರಿಯ ನಾಗರಿಕರಲ್ಲಿ ಬೀಳುವಿಕೆ ತಡೆ ಹಾಗೂ ಸುರಕ್ಷಿತ ಜೀವನ ಶೈಲಿ ಜಾಗೃತಿ ಹಾಗೂ ಆ.8ರಂದು ಅಸ್ಥಿ ಚಿಕಿತ್ಸಕರ ಆರೋಗ್ಯ, ಸುರಕ್ಷತೆ ಹಾಗೂ ವೃತ್ತಿಪರ ಅಭಿವೃದ್ಧಿಗೆ ಸಂಬಂಧಿಸಿದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಮೂಳೆ ಮತ್ತು ಕೀಲುಗಳ ಆರೋಗ್ಯದ ಬಗ್ಗೆ ಅರಿವು ಮೂಡಿಸುವುದು ನಮ್ಮ ಹೊಣೆಗಾರಿಕೆಯಾಗಿದೆ. ಜಿಲ್ಲಾ ಆರ್ಥೋಪೆಡಿಕ್ ಅಸೋಸಿಯೇಶನ್‌ಗಳು,ವೈದ್ಯಕೀಯ ಕಾಲೇಜುಗಳು ಹಾಗೂ ಆಸ್ಪತ್ರೆಗಳು ಸಪ್ತಾಹದ ಅಂಗವಾಗಿ ಸಾರ್ವಜನಿಕ ಜಾಗೃತಿ ಕಾರ್ಯಕ್ರಮ ನಡೆಸುವ ಮೂಲಕ ಆರೋಗ್ಯಕರ ಕರ್ನಾಟಕ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಕೆಒಎ ಅಧ್ಯಕ್ಷ ಡಾ.ಬಿ.ಸಚ್ಚಿದಾನಂದ ರೈ ವಿನಂತಿಸಿದ್ದಾರೆ.

Read More News

ಯುನೈಟೆಡ್ ಅರಬ್ ಎಮಿರೇಟ್ಸ್ ನಲ್ಲಿ ಯಶಸ್ವಿಯಾಗಿ 30ನೇ ವರ್ಷಕ್ಕೆ ಪಾದಾರ್ಪಣೆ ಮಾಡಿರುವ ದುಬೈನಲ್ಲಿ ಪ್ರಧಾನ ಕಚೇರಿ ಹೊಂದಿರುವ ತುಂಬೆ ಸಮೂಹ ಸಂಸ್ಥೆಗಳ ಆರೋಗ್ಯ, ಶಿಕ್ಷಣ, ವೈದ್ಯಕೀಯ ಸಮಾಜಮುಖಿ ಬಹು ಯೋಜನೆಗಳ ಬಗ್ಗೆ ಹುಟ್ಟೂರು ತುಂಬೆ ಹಿಲ್ಸ್ ನಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದ ತುಂಬೆ ಗ್ರೂಪ್ಸ್ ಸಂಸ್ಥಾಪಕ ಡಾ. ತುಂಬೆ ಮೊಯ್ದೀನ್

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಗೆ ಯಾರಾಗಲಿದ್ದಾರೆ ನೂತನ ಅಧ್ಯಕ್ಷ. ಚುನಾವಣೆ ಪ್ರಕ್ರಿಯೆಯಲ್ಲಿ ಕಾರ್ಯಕರ್ತರ ಬೆಂಬಲ ಯಾರಿಗೆ? ಕಾಂಗ್ರೆಸ್ ಹೈಕಮಾಂಡ್ ಮೊತ್ತ ಮೊದಲ ಬಾರಿಗೆ ಅಲ್ಪ ಸಂಖ್ಯಾತ ಸಮುದಾಯದ ಸಮರ್ಥ ನಾಯಕನನ್ನು ಆಯ್ಕೆ ಮಾಡುವ ಸಾಧ್ಯತೆ ಬಗ್ಗೆ Mp MLA’s News exclusive Report

Scroll to Top