ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಸಂಪುಟದ ನೂತನ ಸಚಿವರಾಗಿ 20 ಮಂದಿ ಇಂದು (ಆಗಸ್ಟ್ 3) ಪ್ರಮಾಣ ವಚನ ಸ್ವೀಕಾರ. ಜಮೀರ್ ಅಹ್ಮದ್ ಗೆ ಸ್ಥಾನ. ದಿನೇಶ್ ಗೂಂಡುರಾವ್ ಗೆ ಮಂತ್ರಿ ಪದವಿ ಇಲ್ಲ. ಸಂಪುಟದ ಗಾತ್ರ ಬರೋಬರಿ 34ಕ್ಕೆ ಏರಿಕೆ. BREAkING LATEST POLITICAL FLASH NEWS BY DR. ASHOK SHETTY BN

102.9K Views 2w ago

ಬೆಂಗಳೂರು – ಕರ್ನಾಟಕದ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಸಂಪುಟದ ನೂತನ ಸಚಿವರಾಗಿ 20 ಮಂದಿ ಲೋಕಭವನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್ ಅವರಿಂದ ಆಗಸ್ಟ್ 3 ರಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ನೂತನ ಸಚಿವ ಸಂಪುಟದಲ್ಲಿ ದಿನೇಶ್ ಗುಂಡೂರಾವ್ ಅವರು ಅವಕಾಶ ವಂಚಿತರಾದರೆ, ಜಮೀರ್ ಅಹ್ಮದ್ ಅವರು ಸ್ಥಾನ ಪಡೆದುಕೊಂಡಿದ್ದಾರೆ. ಇದರೊಂದಿಗೆ ಸಂಪುಟದ ಗಾತ್ರ 34ಕ್ಕೆ ಏರಿದೆ. ನೂತನ ಸಚಿವರ ಆಯ್ಕೆಯಲ್ಲಿ ರಾಹುಲ್ ಗಾಂಧಿ
ಯವರೇ ನೇರವಾಗಿ ಅಂತಿಮ ತೀರ್ಮಾನ ವಹಿಸಿದ್ದು, ಹೊಸ ಮುಖಗಳಿಗೆ ಪ್ರಾಶಸ್ತ್ಯ ನೀಡಲಾಗಿದೆ

Read More News

ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಮತ್ತು ನಮ್ಮ ಟಿವಿ ಚಾನೆಲ್ ನ ಆಡಳಿತ ನಿರ್ದೇಶಕ ಡಾ. ಶಿವಶರಣ್ ಶೆಟ್ಟಿ ಮತ್ತು ಅವರ ಸಹೋದರರಾದ ದೇವಿಚರಣ್ ಶೆಟ್ಟಿ, ಹರಿಕಿಶನ್ ಶೆಟ್ಟಿ ಯವರ ಮಾತೃಶ್ರೀ,ಶಿಕ್ಷಣ ಇಲಾಖೆಯ ನಿವೃತ್ತ ಪ್ರಾದೇಶಿಕ ನಿರ್ದೇಶಕಿ ಹಾಗೂ ಡಾ. ಎ. ಸದಾನಂದ ಶೆಟ್ಟಿಯವರ ಸಹೋದರಿ ಎಂ. ರತ್ನಕಾಂತಿ ಶೆಟ್ಟಿ ಅವರಿಗೆ ಗಣ್ಯರಿಂದ ಶ್ರದ್ದಾಂಜಲಿ

ಕಸ್ತೂರಿ ರಂಗನ್ ವರದಿ ಆಧಾರಿತ ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶಗಳ 7 ನೇ ಕರಡು ಅಧಿಸೂಚನೆ ಬಗ್ಗೆ ಸದನದ ಗಮನ ಸೆಳೆದ ಶಾಸಕ ಗಂಟಿಹೊಳೆ. ಗ್ರಾಮೀಣ ಜನರ ಆತಂಕ ನಿವಾರಣೆ ಹಾಗೂ ಜೀವನೋಪಾಯಗಳಿಗೆ ಆಗಬಹುದಾದ ಸಂಭವನಿಯ ಅಪಾಯಗಳ ಬಗ್ಗೆ ಪ್ರಸ್ತಾಪಿಸಿದ ಬೈಂದೂರು ಶಾಸಕರು. ಜನರಿಗೆ ಸ್ಪಷ್ಟ ಮಾಹಿತಿ ಹಾಗೂ ಅಧಿಸೂಚನೆ ವಿರುದ್ಧ ಸ್ಪಷ್ಟ ವಾದ ಮಂಡನೆ ಸಲುವಾಗಿ ಒಂದು ಬಾರಿ ಅಧಿಸೂಚಿತ ಗ್ರಾಮಗಳನ್ನು ಭೌತಿಕ ಸರ್ವೇಗೆ ಒಳಪಡಿಸಲು ಆಗ್ರಹ. 7 ನೇ ಕರಡು ಅಧಿಸೂಚನೆ ಸರಕಾರದ ಹಂತದಲ್ಲಿ ಪರಿಶೀಲನೆಯಲ್ಲಿದೆ ಎಂದ ಅರಣ್ಯ, ಜೀವಿಶಾಸ್ತ್ರ ಹಾಗೂ ಪರಿಸರ ಸಚಿವರು.

Scroll to Top