ಬೆಂಗಳೂರು- ಮೂಲ್ಕಿಯ ತುಳುನಾಡು ಪ್ರತಿಷ್ಠಾನದ ಅಧ್ಯಕ್ಷ, ಹಾಯ್ ತುಳುನಾಡು ಪತ್ರಿಕೆಯ ಸಂಪಾದಕ , ಆಯುಷ್ ಇಲಾಖೆಯ ಖಾಯಂ ನೌಕರ, ಸಾಮಾಜಿಕ ಕಾರ್ಯಕರ್ತ ರಾಜೇಶ್ ಅಮೀನ್ ಮೂಲ್ಕಿ ಅವರು ಕಳೆದ ಹಲವು ವರ್ಷಗಳಿಂದ ಸಾಮಾಜಿಕ ಕ್ಷೇತ್ರದಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದು, ಕೊಯಂಬತ್ತೂರಿನ ಏಷ್ಯಾ ಇಂಟರ್ ನ್ಯಾಷನಲ್ ಕಲ್ಚರ್ ರಿಸರ್ಚ್ ಯುನಿವರ್ಸಿಟಿಯು ಬೆಂಗಳೂರಿನ ಹೊಸೂರಿನಲ್ಲಿ ನಡೆದ ಗೌರವ ಡಾಕ್ಟರೇಟ್ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಗಣ್ಯರ ಸಮ್ಮುಖದಲ್ಲಿ ಅವರಿಗೆ ಸಮಾಜ ಸೇವಾ ಕ್ಷೇತ್ರದಲ್ಲಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ. ರಾಜೇಶ್ ಅಮೀನ್ ಅವರಿಗೆ ಈ ಹಿಂದೆ ಅಂಬೇಡ್ಕರ್ ಫೆಲೋ ಶಿಪ್ ರಾಷ್ಟ್ರ ಪ್ರಶಸ್ತಿ ದೊರಕಿದೆ.








































































































































































































