ಕಾಲೇಜು ಶಿಕ್ಷಣ ಇಲಾಖೆಯ ನಿವೃತ್ತ ಪ್ರಾದೇಶಿಕ ನಿರ್ದೇಶಕಿ ಎಂ.ರತ್ನಕಾಂತಿ ಶೆಟ್ಟಿಯವರ ಶ್ರದ್ಧಾಂಜಲಿ ಸಭೆಯಲ್ಲಿ ಭಾಗವಹಿಸಿದ ಮಾಜಿ ಉಸ್ತುವಾರಿ ಸಚಿವ ಬೆಳ್ಳಿಪಾಡಿ ರಮಾನಾಥ ರೈ.

31.8K Views 8h ago

ಮಂಗಳೂರು: ಶ್ರೀ ದೇವಿ ಎಜ್ಯುಕೇಶನ್ ಟ್ರಸ್ಟ್ ಮತ್ತು ಇಂಟರ್ ನ್ಯಾಷನಲ್ ಬಂಟ್ಸ್ ವೆಲ್ಫೇರ್ ಟ್ರಸ್ಟ್ ನ ಅಧ್ಯಕ್ಷ ಡಾ. ಎ. ಸದಾನಂದ ಶೆಟ್ಟಿಯವರ ಸಹೋದರಿ, ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್,ನಮ್ಮ ಟಿ.ವಿ.ಯ ಆಡಳಿತ ನಿರ್ದೇಶಕ ಡಾ. ಶಿವಚರಣ್ ಶೆಟ್ಟಿ ಮತ್ತು ಸಹೋದರರಾದ ದೇವಿಚರಣ್ ಶೆಟ್ಟಿ, ಹರಿಕಿಶನ್ ಶೆಟ್ಟಿಯವರ ಮಾತೃಶ್ರೀ, ಕಾಲೇಜು ಶಿಕ್ಷಣ ಇಲಾಖೆಯ ಮಾಜಿ ನಿರ್ದೇಶಕಿ, ಪ್ರೇಮಕಾಂತಿ ಎಜ್ಯುಕೇಶನ್ ಮತ್ತು ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷೆ ಎಂ.ರತ್ನಕಾಂತಿ ಶೆಟ್ಟಿಯವರು ಇತ್ತೀಚಿಗೆ ನಿಧನರಾಗಿದ್ದು, ಕೊಡಿಯಾಲ್ ಬೈಲ್ ನಲ್ಲಿರುವ ಡಾ.ಟಿ. ಎಂ.ಎ. ಪೈ ಕನ್ವೆನ್ಷನಲ್ ಸೆಂಟರ್ ನಲ್ಲಿ ಆಗಸ್ಟ್ 21ರಂದು ಅವರ ಉತ್ತರಕ್ರಿಯೆ ಪ್ರಯುಕ್ತ ಶ್ರದ್ಧಾಂಜಲಿ ಸಭೆ ನಡೆದಾಗ ಕರ್ನಾಟಕ ಸರಕಾರದ ಅರಣ್ಯ, ಸಾರಿಗೆ, ಬಂದರು ಮತ್ತು ಮೀನುಗಾರಿಕೆ, ಜೀವವಿಜ್ಞಾನ ಮತ್ತು ಪರಿಸರ ಖಾತೆ ಮಾಜಿ ಮಂತ್ರಿ ಮತ್ತು ದ. ಕ. ಜಿಲ್ಲಾ ಮಾಜಿ ಉಸ್ತುವಾರಿ ಸಚಿವರಾದ ಬೆಳ್ಳಿಪ್ಪಾಡಿ ರಮಾನಾಥ ರೈ ಅವರು ಭಾಗವಹಿಸಿದರು.

ಈ ಸಂದರ್ಭದಲ್ಲಿ ಡಾ. ಎ ಜೆ ಶೆಟ್ಟಿ, ಡಾ.ಎ. ಸದಾನಂದ ಶೆಟ್ಟಿ,ಐಕಳ ಹರೀಶ್ ಶೆಟ್ಟಿ,. ಗಣೇಶ್ ರಾವ್, ಡಾ. ಶಾಂತರಾಮ ಶೆಟ್ಟಿ, ಗಣೇಶ್ ರಾವ್, ಮಾಜಿ ಮೇಯರ್ ಗಳಾದ ಶಶಿಧರ್ ಹೆಗ್ಡೆ, ಭಾಸ್ಕರ್. ಕೆ. ಮೊದಲಾದ ಗಣ್ಯರು ಶ್ರದ್ಧಾಂಜಲಿ ಸಭೆಯಲ್ಲಿ ಉಪಸ್ಥಿತರಿದ್ದರು.
ಚಿತ್ರ :ತಿಲಕ್ ಮಂಚಿ

Read More News

ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಮತ್ತು ನಮ್ಮ ಟಿವಿ ಚಾನೆಲ್ ನ ಆಡಳಿತ ನಿರ್ದೇಶಕ ಡಾ. ಶಿವಶರಣ್ ಶೆಟ್ಟಿ ಮತ್ತು ಅವರ ಸಹೋದರರಾದ ದೇವಿಚರಣ್ ಶೆಟ್ಟಿ, ಹರಿಕಿಶನ್ ಶೆಟ್ಟಿ ಯವರ ಮಾತೃಶ್ರೀ,ಶಿಕ್ಷಣ ಇಲಾಖೆಯ ನಿವೃತ್ತ ಪ್ರಾದೇಶಿಕ ನಿರ್ದೇಶಕಿ ಹಾಗೂ ಡಾ. ಎ. ಸದಾನಂದ ಶೆಟ್ಟಿಯವರ ಸಹೋದರಿ ಎಂ. ರತ್ನಕಾಂತಿ ಶೆಟ್ಟಿ ಅವರಿಗೆ ಗಣ್ಯರಿಂದ ಶ್ರದ್ದಾಂಜಲಿ

ಕಸ್ತೂರಿ ರಂಗನ್ ವರದಿ ಆಧಾರಿತ ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶಗಳ 7 ನೇ ಕರಡು ಅಧಿಸೂಚನೆ ಬಗ್ಗೆ ಸದನದ ಗಮನ ಸೆಳೆದ ಶಾಸಕ ಗಂಟಿಹೊಳೆ. ಗ್ರಾಮೀಣ ಜನರ ಆತಂಕ ನಿವಾರಣೆ ಹಾಗೂ ಜೀವನೋಪಾಯಗಳಿಗೆ ಆಗಬಹುದಾದ ಸಂಭವನಿಯ ಅಪಾಯಗಳ ಬಗ್ಗೆ ಪ್ರಸ್ತಾಪಿಸಿದ ಬೈಂದೂರು ಶಾಸಕರು. ಜನರಿಗೆ ಸ್ಪಷ್ಟ ಮಾಹಿತಿ ಹಾಗೂ ಅಧಿಸೂಚನೆ ವಿರುದ್ಧ ಸ್ಪಷ್ಟ ವಾದ ಮಂಡನೆ ಸಲುವಾಗಿ ಒಂದು ಬಾರಿ ಅಧಿಸೂಚಿತ ಗ್ರಾಮಗಳನ್ನು ಭೌತಿಕ ಸರ್ವೇಗೆ ಒಳಪಡಿಸಲು ಆಗ್ರಹ. 7 ನೇ ಕರಡು ಅಧಿಸೂಚನೆ ಸರಕಾರದ ಹಂತದಲ್ಲಿ ಪರಿಶೀಲನೆಯಲ್ಲಿದೆ ಎಂದ ಅರಣ್ಯ, ಜೀವಿಶಾಸ್ತ್ರ ಹಾಗೂ ಪರಿಸರ ಸಚಿವರು.

Scroll to Top