ಸ್ಥೂಲಕಾಯ ಮಾಹಿತಿ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ

100K Views 12 Feb 2024

ಮೂಡುಬಿದಿರೆ: ಸ್ಥೂಲಕಾಯತೆಯು ಹೆಚ್ಚುವರಿ ದೇಹದ ಕೊಬ್ಬಿನಿಂದ ಗುರುತಿಸಲ್ಪಟ್ಟ ದೀರ್ಘಕಾಲದ ಸ್ಥಿತಿಯಾಗಿದೆ. ಇದು ಕೇವಲ ಸೌಂದರ್ಯ ಖಾಯಿಲೆಯಲ್ಲ. ಇದರಿಂದಾಗಿ ಆರೋಗ್ಯ ಸಂಬAಧಿತ ಅಪಾಯಗಳಾದ ಮಧುಮೇಹ, ರಕ್ತದೊತ್ತಡ, ಹೃದಯ ಸಂಬAಧಿತ ಖಾಯಿಲೆಗಳು, ಕ್ಯಾನ್ಸರ್ ಹಾಗೂ ಮಾನಸಿಕ ಆರೋಗ್ಯದ ಅಸಮತೋಲನ ಉಂಟಾಗುವ ಸಾಧ್ಯತೆ ಇದೆ ಎಂದು ಆಳ್ವಾಸ್ ನಿರಾಮಯ ಮಲ್ಟಿ ಸ್ಪೆಷ್ಯಾಲಿಟಿ ಆಸ್ಪತ್ರೆಯ ನಿರ್ದೇಶಕಿ ಡಾ. ಸುರೇಖ ಪೈ ತಿಳಿಸಿದರು.


ನಿರಾಮಯ ಆಸ್ಪತ್ರೆಯ ತಂಡದಿAದ ಮೂಡಬಿದಿರೆಯ ಸಹಕಾರಿ ಸೇವಾ ಸಂಘ ಸಹಯೋಗದಲ್ಲಿ ಶ್ರೀ ವೆಂಕಟರಮಣ ದೇವಸ್ಥಾನದ ಶ್ರೀ ಸುಕೃತೀಂದ್ರ ಕಲಾ ಮಂದಿರದಲ್ಲಿ ಶನಿವಾರ ಬೆಳಿಗ್ಗೆ 9 ರಿಂದ ಸಂಜೆ 5 ವರೆಗೆ ಸ್ಥೂಲಕಾಯ ಮಾಹಿತಿ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಮಾತನಾಡಿದರು.
ಸ್ಥೂಲಕಾಯ ಚಿಕಿತ್ಸೆಯು ಹಿತಮಿತ ಆಹಾರ, ನಿಯಮಿತ ವ್ಯಾಯಾಮ ಮತ್ತು ಜೀವನಶೈಲಿಯ ಬದಲಾವಣೆಯನ್ನು ಒಳಗೊಂಡಿರುತ್ತದೆ. ಸ್ಥೂಲಕಾಯತೆಯ ಪ್ರಮುಖ ಕಾರಣವನ್ನು ಪರೀಕ್ಷಿಸಿ ಆಯುರ್ವೇದ ಚಿಕಿತ್ಸಾ ವಿಧಾನವಾದ ಪಂಚಕರ್ಮ ಹಾಗೂ ಇನ್ನಿತರ ಚಿಕಿತ್ಸೆಯ ಮೂಲಕ ಇದನ್ನು ನಿಯಂತ್ರಿಸಬಹುದು ಎಂದು ತಿಳಿಸಿದರು.
ದೇವಸ್ಥಾನದ ಪ್ರದಾನ ಅರ್ಚಕರಾದ ಪದ್ಮನಾಭ ಭಟ್, ದೇವಸ್ಥಾನದ ಟ್ರಸ್ಟಿ ಉಮೇಶ್ ಪೈ , ಆಳ್ವಾಸ್ ನಿರಾಮಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ನಿರ್ದೇಶಕಿ ಡಾ. ಸುರೇಖ ಪೈ, ತಜ್ಞ ವೈದ್ಯರಾದ ಡಾ. ರಾಧಿಕ, ಡಾ.ವೀಣಾ ಇದ್ದರು.
ಸ್ನಾತಕೋತ್ತರ ವೈದ್ಯರು ಹಾಗೂ ಕಿರಿಯ ವೈದ್ಯರು ಶಿಬಿರ ನಡೆಸಿಕೊಟ್ಟರು.

Read More News

ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಮತ್ತು ನಮ್ಮ ಟಿವಿ ಚಾನೆಲ್ ನ ಆಡಳಿತ ನಿರ್ದೇಶಕ ಡಾ. ಶಿವಶರಣ್ ಶೆಟ್ಟಿ ಮತ್ತು ಅವರ ಸಹೋದರರಾದ ದೇವಿಚರಣ್ ಶೆಟ್ಟಿ, ಹರಿಕಿಶನ್ ಶೆಟ್ಟಿ ಯವರ ಮಾತೃಶ್ರೀ,ಶಿಕ್ಷಣ ಇಲಾಖೆಯ ನಿವೃತ್ತ ಪ್ರಾದೇಶಿಕ ನಿರ್ದೇಶಕಿ ಹಾಗೂ ಡಾ. ಎ. ಸದಾನಂದ ಶೆಟ್ಟಿಯವರ ಸಹೋದರಿ ಎಂ. ರತ್ನಕಾಂತಿ ಶೆಟ್ಟಿ ಅವರಿಗೆ ಗಣ್ಯರಿಂದ ಶ್ರದ್ದಾಂಜಲಿ

ಕಸ್ತೂರಿ ರಂಗನ್ ವರದಿ ಆಧಾರಿತ ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶಗಳ 7 ನೇ ಕರಡು ಅಧಿಸೂಚನೆ ಬಗ್ಗೆ ಸದನದ ಗಮನ ಸೆಳೆದ ಶಾಸಕ ಗಂಟಿಹೊಳೆ. ಗ್ರಾಮೀಣ ಜನರ ಆತಂಕ ನಿವಾರಣೆ ಹಾಗೂ ಜೀವನೋಪಾಯಗಳಿಗೆ ಆಗಬಹುದಾದ ಸಂಭವನಿಯ ಅಪಾಯಗಳ ಬಗ್ಗೆ ಪ್ರಸ್ತಾಪಿಸಿದ ಬೈಂದೂರು ಶಾಸಕರು. ಜನರಿಗೆ ಸ್ಪಷ್ಟ ಮಾಹಿತಿ ಹಾಗೂ ಅಧಿಸೂಚನೆ ವಿರುದ್ಧ ಸ್ಪಷ್ಟ ವಾದ ಮಂಡನೆ ಸಲುವಾಗಿ ಒಂದು ಬಾರಿ ಅಧಿಸೂಚಿತ ಗ್ರಾಮಗಳನ್ನು ಭೌತಿಕ ಸರ್ವೇಗೆ ಒಳಪಡಿಸಲು ಆಗ್ರಹ. 7 ನೇ ಕರಡು ಅಧಿಸೂಚನೆ ಸರಕಾರದ ಹಂತದಲ್ಲಿ ಪರಿಶೀಲನೆಯಲ್ಲಿದೆ ಎಂದ ಅರಣ್ಯ, ಜೀವಿಶಾಸ್ತ್ರ ಹಾಗೂ ಪರಿಸರ ಸಚಿವರು.

Scroll to Top