ದುರ್ಗಾ ಪರಮೇಶ್ವರಿ ಚಿಟ್ಸ್ ಪ್ರೈವೇಟ್ ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಅಭಯ ಸೇವಾ ಫೌಂಡೇಶನ್ ಅಧ್ಯಕ್ಷರಾದ ಎಂ.ಬಿ ಉಮೇಶ್ ಶೆಟ್ಟಿ ಮಂದಾರ್ತಿ ಇವರಿಗೆ ಏಶಿಯಾನೆಟ್ ಸುವರ್ಣ ನ್ಯೂಸ್ ಹಾಗೂ ಕನ್ನಡಪ್ರಭ ಪತ್ರಿಕೆ ಇವರ ಸಮಾಜಸೇವೆ ಗುರುತಿಸಿ 2024ರ ಸಾಧಕ ಪ್ರಶಸ್ತಿಯನ್ನು ನೀಡಿ ಗೌರವಿಸಿತು.


ಶ್ರೀಯುತರು ಸಾಮಾಜಿಕ ಸೇವೆಯ ನೂತನ ಕ್ರಾಂತಿ ಮಾಡುವ ಮೂಲಕ ಹಲವಾರು ಬಡ ಜನತೆಯ ಕುಟುಂಬಕ್ಕೆ ಬೆಳಕಾಗಿ ಸಮಾಜದಲ್ಲಿ ತಮ್ಮ ಸಾಮಾಜಿಕ ಕಾರ್ಯದಲ್ಲಿ ಗುರುತಿಸಿಕೊಂಡವರು. ಈ ಪ್ರಶಸ್ತಿ ಇವರ ಅಭಿಮಾನಿಗಳಿಗೆ ಅತೀವ ಸಂತಸ ತಂದಿದೆ.





















































































































































































