ಇಂದು ನವದೆಹಲಿಯಲ್ಲಿ ಕೇಂದ್ರ ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಸಚಿವರಾದ ಶ್ರೀ ಹರ್ದೀಪ್ ಸಿಂಗ್ ಪೂರಿಯವರನ್ನು ದಕ್ಷಿಣ ಕನ್ನಡ ಸಂಸದರಾದ ಶ್ರೀ ನಳಿನ್ ಕುಮಾರ್ ಕಟೀಲ್ ರವರು ಭೇಟಿಯಾಗಿ ಮಂಗಳೂರಿನ ಜಿಎಂಪಿಎಲ್ ಕಂಪೆನಿಯಲ್ಲಿ ಹಿಂದಿನ ಜೆಬಿಎಫ್ ಕಂಪೆನಿಯಲ್ಲಿ ಉದ್ಯೋಗದಲ್ಲಿದ್ದವರಿಗೆ ನೇರವಾಗಿ ಖಾಯಂ ಉದ್ಯೋಗ ನೀಡುವಂತೆ ಮನವಿ ಸಲ್ಲಿಸಿ ಜೆಬಿಎಫ್ ಉದ್ಯೋಗಿಗಳ ಬೇಡಿಕೆಯನ್ನು ಮಾನ್ಯ ಸಚಿವರಿಗೆ ವಿವರವಾಗಿ ಮನವರಿಕೆ ಮಾಡಲಾಯಿತು.
ಇದಕ್ಕೆ ಸ್ಪಂದಿಸಿದ ಮಾನ್ಯ ಸಚಿವರು ಶೀಘ್ರದಲ್ಲಿಯೇ ಸಕರಾತ್ಮಕ ನಿರ್ಣಯ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಮುಲ್ಕಿ-ಮೂಡಬಿದಿರೆ ಶಾಸಕರಾದ ಶ್ರೀ ಉಮಾನಾಥ್ ಕೋಟ್ಯಾನ್ ಹಾಗೂ ಬಂಟ್ವಾಳ ಶಾಸಕರಾದ ಶ್ರೀ ರಾಜೇಶ್ ನಾಯ್ಕ್ ರವರು ಉಪಸ್ಥಿತರಿದ್ದರು.





















































































































































































