ಮಂಗಳೂರು: ನಗರದ ಬೋಳೂರು ಅಮೃತಾನಂದಮಯಿ ಮಠದ ಆಶ್ರಯದಲ್ಲಿ ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ಹಾಗೂ ಬಳಗದವರಿಂದ ಯೋಗತರಬೇತಿ ಶಿಬಿರವನ್ನು ಸೋಮವಾರ ದಿನಾಂಕ 19ರಂದು ಉದ್ಘಾಟಿಸಲಾಯಿತು. ಮಠದ ದೇವಸ್ಥಾನ ಸಮಿತಿ ಸದಸ್ಯರಾದ ಮುರಳೀಧರ್ ಶೆಟ್ಟಿಯವರು ಜ್ಯೋತಿ ಬೆಳಗಿಸಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಶರೀರ ಹಾಗೂ ಮನಸ್ಸಿನ ಸ್ವಾಸ್ಥ್ಯ ರಕ್ಷಣೆಯೊಂದಿಗೆ ದೀರ್ಘಾಯುಷ್ಯ ಹೊಂದಲು ಯೋಗ ಬಹಳ ಸರಳ ವಿಧಾನ. ಗೋಪಾಲಕೃಷ್ಣ ದೇಲಂಪಾಡಿಯವರು ಸಾರ್ವಜನಿಕರ ಹಿತದೃಷ್ಟಿಯಿಂದ ಹಲವಾರು ವರ್ಷಗಳಿಂದ ಶಿಬಿರಗಳನ್ನು ನಡೆಸುತ್ತಿದ್ದಾರೆ. ಅವರ ಈ ಸೇವೆ ಎಲ್ಲರಿಗೂ ಮಾದರಿಯಾಗಲಿ ಎಂದು ಹೇಳಿದರು.
ಪ್ರಾರಂಭದಲ್ಲಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತಾಡಿದ ಸೇವಾ ಸಮಿತಿಯ ಅಧ್ಯಕ್ಷರಾದ ಡಾ.ವಸಂತಕುಮಾರ್ ಪೆರ್ಲ ಅವರು ಮಾತಾ ಅಮೃತಾನಂದಮಯಿ ಮಠವು ಸಾಮಾಜಿಕ ಸ್ವಾಸ್ಥ್ಯ ರಕ್ಷಣೆಯ ಉದ್ದೇಶದಿಂದ ನಡೆಸುತ್ತಿರುವ ಕಾರ್ಯಕ್ರಮಗಳಲ್ಲಿ ಯೋಗವೂ ಪ್ರಮುಖವಾಗಿದೆ. ದೇಲಂಪಾಡಿ ಪ್ರತಿಷ್ಠಾನದ ಜೊತೆಗೆ ನಡೆಸುತ್ತಿರುವ ಈ ಶಿಬಿರದ ಪ್ರಯೋಜನವನ್ನು ಎಲ್ಲರೂ ಪಡೆಯುವಂತಾಗಬೇಕು ಎಂದರು.
ಡಾ.ದೇವದಾಸ್ ಪುತ್ರನ್ ವಂದಿಸಿದರು. ಸೇವಾ ಸಮಿತಿಯ ಪದಾಧಿಕಾರಿಗಳಾದ ಭರತ್ ಕುಮಾರ್ ಎರ್ಮಾಳ್, ನಿರಂಜನ್ ಅಡ್ಯಂತಾಯ, ಆಯುಷ್ ವೈದ್ಯಾಧಿಕಾರಿ ಡಾ.ಶ್ರೀದೇವಿ, ಶ್ರೀಮತಿ ವೀಣಾ ಮಾರ್ಲ, ಭಾರತಿ ಎಸ್.ರಾವ್, ಕುಮಾರ್ ಶೆಣೈ, ಸ್ಕಂದ, ದಾಮೋದರ್ , ಹಾಗೂ ಗೋಪಾಲಕೃಷ್ಣ
ದೇಲಂಪಾಡಿಯವರ ಶಿಷ್ಯರು ಮತ್ತು ಅಮ್ಮನ ಭಕ್ತರು ಭಾಗವಹಿಸಿದ್ದರು.ಯೋಗ ತರಬೇತಿಯನ್ನು ಪಡೆಯಲು ಆಸಕ್ತರಿಗೆ ಪ್ರವೇಶಾವಕಾಶ ಇರುತ್ತದೆ. ಶ್ರೀ ಬ್ರಹ್ಮಸ್ಥಾನ ಕ್ಷೇತ್ರದಲ್ಲಿ ನೋಂದಣಿ ಮಾಡಬಹುದಾಗಿದೆ ಎಂದು ಡಾ.ವಸಂತಕುಮಾರ್ ಪೆರ್ಲ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿರುತ್ತಾರೆ.





















































































































































































