ಮಕ್ಕಳಿಗಾಗಿ ರಾಮಾಯಣ ಮಹಾಭಾರತದ ಅನಿಮೇಟೆಡ್ ಸೀರೀಸ್ – ವ್ಯಾಸ App ಬಿಡುಗಡೆ

100.2K Views 2 Mar 2024

ಮಕ್ಕಳಿಗಾಗಿ ಮಹಾಭಾರತ ರಾಮಾಯಣದ ಕಥೆಗಳನ್ನು ಅನಿಮೇಷನ್ ಮೂಲಕ ನೀಡುವ ಉದ್ದೇಶದಿಂದ “ವ್ಯಾಸ” ಎಂಬ ಕನ್ನಡದ App ಮಾರ್ಚ್ 8ರಂದು ಲೋಕಾರ್ಪಣೆಗೊಳ್ಳಲಿದೆ. ಪ್ರಥಮ ಸೀರೀಸ್ ನಲ್ಲಿ “ಸರ್ಪಮೇಧ” ಕಥೆ ಇದ್ದು, ಸುಮಾರು 8 ರಿಂದ 10 ಎಪಿಸೋಡ್ಸ್ ಪ್ರತಿ ಭಾನುವಾರ ಬೆಳಿಗ್ಗೆ 10 ಘಂಟೆಗೆ ಪ್ರಸಾರಗೊಳ್ಳಲಿದೆ. ಇದರ ಪ್ರೋಮೋ ಹಾಗೂ App ಚಾಲನೆ ಮೂಡಬಿದಿರೆಯ ಸಮಾಜ ಮಂದಿರದಲ್ಲಿ ಮಾರ್ಚ್ 8ರಂದು ಸಂಜೆ 4 ಗಂಟೆಗೆ ನಡೆಯಲಿದೆ. ಕನ್ನಡದ ಈ ವಿನೂತನ ಪ್ರಯೋಗಕ್ಕೆ ನಾಡಿನ ಗಣ್ಯರು ಅಂದು ಚಾಲನೆ ನೀಡಲಿದ್ದಾರೆ. ಇದು ಸಂಪೂರ್ಣ ಉಚಿತ ಓ ಟಿ ಟಿ ಯಾಗಿದ್ದು, ಜಗತ್ತಿನಲ್ಲೇಡೆ ವೀಕ್ಷಿಸಬಹುದಾಗಿದೆ ಎಂದು ವ್ಯಾಸ ನಿರ್ಮಾಪಕರಾದ ಬಿ. ಮೇಘನಾ ಶೆಣೈ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More News

ಮೇರಿಹಿಲ್ ಪಾಲೆಮಾರ್ ಕನ್ವೆನ್ಷನ್ ಸೆಂಟರ್ ನಲ್ಲಿ ಇಂದು (ಮೇ. 23 ರಂದು) ಮಾಜಿ ಸಚಿವ ಜೆ. ಕೃಷ್ಣ ಪಾಲೆಮಾರ್ ಮಾಲಕತ್ವದ ಲ್ಯಾಂಡ್ ಲಿಂಕ್ಸ್ ಸಂಸ್ಥೆಯು ಮಂಗಳೂರಿನ ಪ್ರಮುಖ ನಾಲ್ಕು ಸ್ಥಳಗಳಲ್ಲಿ ನಿರ್ಮಿಸಿದ ಅತ್ಯಾಧುನಿಕ ಸೌಲಭ್ಯಗಳನ್ನೊಳಗೊಂಡ ಭವ್ಯ ಸಭಾ ಭವನಗಳನ್ನು ಲೋಕಾರ್ಪಣೆ ಮಾಡಿದ ಆಂಧ್ರ ಪ್ರದೇಶದ ರಾಜ್ಯಪಾಲ ಜಸ್ಟಿಸ್ ಎಸ್. ಅಬ್ದುಲ್ ನಜೀರ್. ಪಾಲೆಮಾರ್ ಅವರನ್ನು ಕೋಟಿಗೊಬ್ಬರು ಎಂದು ಗುಣಗಾನ ಮಾಡಿದ ಜಸ್ಟಿಸ್ ಅಬ್ದುಲ್ ನಜೀರ್.

ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್ ಅವರಿಂದ ಕರಾವಳಿ ಜನತೆಗೆ ವಿಶಿಷ್ಟ ಕೊಡುಗೆ: ಕರಾವಳಿ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಮಂಗಳೂರಿನ ನಾಲ್ಕು ಪ್ರಮುಖ ಸ್ಥಳಗಳಲ್ಲಿ ಏಕಕಾಲಕ್ಕೆ ನಾಲ್ಕು ಅತ್ಯಾಧುನಿಕ ಅದ್ದೂರಿ ಸಭಾಭವನಗಳ ಲೋಕಾರ್ಪಣೆ

Scroll to Top