ಪ್ರಖ್ಯಾತ ಉದ್ಯಮಿ, ಸಮಾಜ ಸೇವಕ, ಪುಣೆ ಬಂಟರ ಸಂಘದ ಅಧ್ಯಕ್ಷ ಸಂತೋಷ್ ಶೆಟ್ಟಿ ಇನ್ನ ಕುರ್ಕಿಲ್ ಬೆಟ್ಟು ಬಾಳಿಕೆ ಮಾಲಕತ್ವದ ಅತ್ಯಾಧುನಿಕ ಸೌಲಭ್ಯದ ಸುಸಜ್ಜಿತವಾದ ಕೊರೋನೆಟ್ ಬ್ಯೂಟಿಕ್ ಹೋಟೆಲ್ ವಿನೂತನ ವಿನ್ಯಾಸದೊಂದಿಗೆ ಪುಣೆಯ ಆಪೆಯ ರೋಡನಲ್ಲಿ ಶುಭಾರಂಭ

93.5K Views 8 Mar 2024

ಪುಣೆ: ಸಮಾಜ ಸೇವಕ, ಪುಣೆಯ ಹೆಸರಾಂತ ಹೊಟೇಲ್ ಉದ್ಯಮಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ನಿರ್ದೇಶಕ, ಪುಣೆ ಬಂಟರ ಸಂಘದ ಅಧ್ಯಕ್ಷ ಮತ್ತು ಬಂಟ ಸಮಾಜದ ಮುಖಂಡ, ಬಡವರ ಬಂಧು ಸಂತೋಷ್ ಶೆಟ್ಟಿ ಇನ್ನ ಕುರ್ಕಿಲ್‌ಬೆಟ್ಟು ಬಾಳಿಕೆ ಮಾಲಕತ್ವದ ಕೊರೋನೆಟ್ ಬ್ಯೂಟಿಕ್ ಹೊಟೇಲ್ ನೂತನ ವಿನ್ಯಾಸದೊಂದಿಗೆ ಪುಣೆಯ ಆಪ್ಪೆ ರೋಡ್‌ನಲ್ಲಿ ಮಾ. 1ರಂದು ಶುಭಾರಂಭಗೊಂಡಿತು.


ಧಾರ್ಮಿಕ ಕಾರ್ಯಕ್ರಮವಾಗಿ ವಾಸ್ತು ಪೂಜೆ, ಶ್ರೀ ಸತ್ಯನಾರಾಯಣ ಪೂಜೆ ಯೊಂದಿಗೆ ದೇವತಾ ಕಾರ್ಯಗಳು ನಡೆದವು. ಈ ಸಂದರ್ಭ ಗಣ್ಯರಾದ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಎಂ.ಜಿ.ಆರ್ ಗ್ರೂಪ್‌ನ ಸಿಎಂಡಿ ಪ್ರಕಾಶ್ ಶೆಟ್ಟಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪದಾಧಿಕಾರಿಗಳು, ಬಂಟರ ಸಂಘ ಮುಂಬಯಿಯ ಪ್ರಮುಖರು, ಖ್ಯಾತ ಉದ್ಯಮಿಗಳು ಆಗಮಿಸಿ ಸಂತೋಷ್ ಶೆಟ್ಟಿ ಇನ್ನ ಕುರ್ಕಿಲ್‌ಬೆಟ್ಟುಬಾಳಿಕೆ, ದಿವ್ಯಾ ಸಂತೋಷ್ ಶೆಟ್ಟಿ ದಂಪತಿಯನ್ನು ಶಾಲು ಹೊದಿಸಿ, ಪುಷ್ಪಗುಚ್ಚ ಸ್ಮರಣಿಕೆ ನೀಡಿ ಅಭಿನಂದಿಸಿ ಶುಭ ಹಾರೈಸಿದರು.


ಜಾಗತಿಕ ಬಂಟರ ಸಂಘಗಳ ಒಕ್ಕೂ ಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ್ ಶೆಟ್ಟಿ,ಗೌರವ ಕೋಶಾಧಿಕಾರಿ ಉಳ್ತೂರು ಮೋಹನದಾಸ್ ಶೆಟ್ಟಿ, ವಿ. ಕೆ. ಗ್ರೂಪ್ ಆಫ್ ಕಂಪೆನೀಸ್‌ ಸಿಎಂಡಿ ಕೆ. ಎಂ.ಶೆಟ್ಟಿ,ಸಿಎ ಎನ್. ಬಿ. ಶೆಟ್ಟಿ,ಹೊಟೇಲ್ ಸಾಯಿ ಪ್ಯಾಲೇಸ್ ಆಡಳಿತ ನಿರ್ದೇಶಕ ರವಿ ಶೆಟ್ಟಿ, ಬಂಟರ ಸಂಘ ಮುಂಬಯಿ, ಮಾಜಿ ಅಧ್ಯಕ್ಷ ಚಂದ್ರಹಾಸ ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ಡಾ. ಆರ್. ಕೆ. ಶೆಟ್ಟಿ, ಎಸ್‌ಎಂಶೆಟ್ಟಿ ಶಿಕ್ಷಣಸಮೂಹ ಸಂಸ್ಥೆಯ ಕಾರ್ಯಾಧ್ಯಕ್ಷ ರತ್ನಕಾರ್ ಶೆಟ್ಟಿ ಮುಂಡ್ಕೂರು, ಬೆಂಗಳೂರು ಬಂಟರ ಸಂಘದ ಮಾಜಿ ಅಧ್ಯಕ್ಷ ಉಪ್ಪೇಂದ್ರ ಶೆಟ್ಟಿ ಮುಂಬಯಿ ಶ್ರೀ ಸಿದ್ದಿವಿನಾಯಕ ಮಂದಿರದ ಟ್ರಸ್ಟಿ ಭಾಸ್ಕರ್ ಶೆಟ್ಟಿ,ನವಿಮುಂಬಯಿ ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ಸಂಜೀವ ಎಸ್. ಶೆಟ್ಟಿ, ಶ್ರೀ ಗುರುದೇವ ಸೇವಾ ಬಳಗ ಮುಂಬಯಿ ಮಾಜಿ ಅಧ್ಯಕ್ಷ ನ್ಯಾಯವಾದಿ ಪ್ರಕಾಶ್ ಎಲ್. ಶೆಟ್ಟಿ, ಬಾಂಬೆ ಬಂಟ್ಸ್ ಅಸೋಸಿಯೇಶನ್ ಮಾಜಿ ಅಧ್ಯಕ್ಷ ಶ್ಯಾಮ್ ಎನ್. ಶೆಟ್ಟಿ, ಬಾಲಾಜಿ ಗ್ರೂಪ್‌ನ ವಿಜಯ ಶೆಟ್ಟಿ,ತುಂಗಾ ಹಾಸ್ಪಿಟಲ್ ಮುಂಬಯಿ ನಿರ್ದೇಶಕ ಉಮೇಶ್ ಶೆಟ್ಟಿ, ಬಂಟರ ಸಂಘ ಮುಂಬಯಿ ಪಶ್ಚಿಮ ವಲಯ ಸಮನ್ವಯಕ ಖಾಂದೇಶ ಭಾಸ್ಕರ್ ಶೆಟ್ಟಿ, ಮುಂಬಯಿ ಉದ್ಯಮಿಗಳಾದ ಹರೀಶ್ ಶೆಟ್ಟಿ ಗುರ್ಮೆ, ಆಶೋಕ್ ಶೆಟ್ಟಿ, ಪ್ರಭಾಕರ ಶೆಟ್ಟಿ ಇನ್ನ, ದಿವಾಕರ ಶೆಟ್ಟಿ ಕುರ್ಲಾ, ಸಮಾಜ ಸೇವಕ ಸಂಚಿತ್ ಶೆಟ್ಟಿ, ಪುಣೆ ಬಂಟರ ಸಂಘದ ಮಾಜಿ ಅಧ್ಯಕ್ಷರು, ಟ್ರಸ್ಟಿಗಳು, ಕಾರ್ಯಕಾರಿ ಸಮಿತಿಯ ಪದಾ ಧಿಕಾರಿಗಳು, ಪ್ರಾದೇಶಿಕ ಸಮಿತಿ ಪದಾ ಧಿಕಾರಿಗಳು, ಮಹಿಳಾ ವಿಭಾಗ ಪದಾ ಧಿಕಾರಿಗಳು, ವಿವಿಧ ಕ್ಷೇತ್ರಗಳ ಗಣ್ಯರು, ಹಿತೈಷಿಗಳು ಶುಭ ಹಾರೈಸಿದರು.
ಸಂತೋಷ್ ಶೆಟ್ಟಿಯವರು ಅತಿಥಿ- ಗಣ್ಯರನ್ನು ಶಾಲು ಹೊದಿಸಿ, ಪುಷ್ಪ ಗುಚ್ಚವನ್ನಿತ್ತು ಸ್ವಾಗತಿಸಿ ಗೌರವಿಸಿದರು. ಬಂಟರ ಸಂಘ ಮುಂಬಯಿ ಮುಖವಾಣಿ ಬಂಟರವಾಣಿ ಸಮಿತಿ ಕಾರ್ಯಾಧ್ಯಕ್ಷ ಕರ್ನೂರು ಮೋಹನ್ ರೈ ಅವರು ಕಾರ್ಯಕ್ರಮವನ್ನು ನಿರ್ವಹಿಸಿ, ವಂದಿಸಿದರು.

Read More News

ಮೇರಿಹಿಲ್ ಪಾಲೆಮಾರ್ ಕನ್ವೆನ್ಷನ್ ಸೆಂಟರ್ ನಲ್ಲಿ ಇಂದು (ಮೇ. 23 ರಂದು) ಮಾಜಿ ಸಚಿವ ಜೆ. ಕೃಷ್ಣ ಪಾಲೆಮಾರ್ ಮಾಲಕತ್ವದ ಲ್ಯಾಂಡ್ ಲಿಂಕ್ಸ್ ಸಂಸ್ಥೆಯು ಮಂಗಳೂರಿನ ಪ್ರಮುಖ ನಾಲ್ಕು ಸ್ಥಳಗಳಲ್ಲಿ ನಿರ್ಮಿಸಿದ ಅತ್ಯಾಧುನಿಕ ಸೌಲಭ್ಯಗಳನ್ನೊಳಗೊಂಡ ಭವ್ಯ ಸಭಾ ಭವನಗಳನ್ನು ಲೋಕಾರ್ಪಣೆ ಮಾಡಿದ ಆಂಧ್ರ ಪ್ರದೇಶದ ರಾಜ್ಯಪಾಲ ಜಸ್ಟಿಸ್ ಎಸ್. ಅಬ್ದುಲ್ ನಜೀರ್. ಪಾಲೆಮಾರ್ ಅವರನ್ನು ಕೋಟಿಗೊಬ್ಬರು ಎಂದು ಗುಣಗಾನ ಮಾಡಿದ ಜಸ್ಟಿಸ್ ಅಬ್ದುಲ್ ನಜೀರ್.

ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್ ಅವರಿಂದ ಕರಾವಳಿ ಜನತೆಗೆ ವಿಶಿಷ್ಟ ಕೊಡುಗೆ: ಕರಾವಳಿ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಮಂಗಳೂರಿನ ನಾಲ್ಕು ಪ್ರಮುಖ ಸ್ಥಳಗಳಲ್ಲಿ ಏಕಕಾಲಕ್ಕೆ ನಾಲ್ಕು ಅತ್ಯಾಧುನಿಕ ಅದ್ದೂರಿ ಸಭಾಭವನಗಳ ಲೋಕಾರ್ಪಣೆ

Scroll to Top