ನಾಯಕರ ಹೆಸರು ಹೇಳಿ ಓಟು ಕೇಳುವವರು ಗೆದ್ದ ನಂತರ ಕ್ಷೇತ್ರದ ಕಡೆ ಮುಖವೆತ್ತಿಯೂ ನೋಡುವುದಿಲ್ಲ. ನನ್ನ ಬಗ್ಗೆ ಜನರಿಗೆ ಗೊತ್ತಿದೆ. ಖಂಡಿತ ಗೆಲ್ಲಿಸುತ್ತಾರೆ : ಜಯಪ್ರಕಾಶ್ ಹೆಗ್ಡೆ.

107K Views 23 Mar 2024

ಉಡುಪಿ : ಉಡುಪಿ -ಚಿಕ್ಕ ಮಂಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಜಯಪ್ರಕಾಶ್ ಹೆಗ್ಡೆ ಅವರು ಸ್ಪರ್ಧಿಸುತ್ತಿದ್ದಾರೆ. ಮಾಧ್ಯಮಗಳ ಜೊತೆಗೆ ಈ ಬಗ್ಗೆ ಮಾತನಾಡಿದ ಅವರು, ನಾನು ಪ್ರತಿಸ್ಪರ್ಧಿ ಅಭ್ಯರ್ಥಿಯನ್ನು ಟೀಕಿಸುವುದಿಲ್ಲ. ಜನರಿಗೆ ಗೊತ್ತಿದೆ ಯಾರಿಗೆ ಓಟು ಕೊಡಬೇಕು. ಯಾರನ್ನು ಗೆಲ್ಲಿಸಬೇಕೆಂಬ ಸ್ಪಷ್ಟತೆ. ನನಗೆ ನಾಯಕರ ಹೆಸರಲ್ಲಿ ಓಟು ಕೇಳಬೇಕಾದ ಅನಿವಾರ್ಯತೆ ಇಲ್ಲ. ನಾನು ಇಲ್ಲಿ ಒಂದು ಅವಧಿಗೆ ಸಂಸದನಾಗಿದ್ದೆ. ವಾರಾಹಿ ಯೋಜನೆ ಸೇರಿದಂತೆ ಅಭಿವೃದ್ಧಿ ಕೆಲಸ ಮಾಡಿದ್ದೆ. ನಾನು ಬಂಟನೆಂದ ಮಾತ್ರಕ್ಕೆ ಬಂಟರೆಲ್ಲರೂ ಓಟು ಹಾಕುತ್ತಾರೆಂಬ ಗ್ಯಾರಂಟಿ ಇಲ್ಲ. ಅವರಿಗೆ ಬಿಲ್ಲವರೆಲ್ಲರೂ ಓಟು ಹಾಕುತ್ತಾರೆಂದು ಹೇಳಲಾಗುವುದಿಲ್ಲ. ಜಾತಿ ರಾಜಕೀಯ ಇಲ್ಲಿ ನಡೆಯವುದಿಲ್ಲ. ನಾನು ಜಾತ್ಯತೀತ ರಾಜಕಾರಣಿ. ಇಲ್ಲಿನ ಜನ ನನ್ನನ್ನು ಒಪ್ಪಿದ್ದಾರೆ. ನನ್ನ ಬಗ್ಗೆ ಅವರಿಗೆ ಚೆನ್ನಾಗಿ ಗೊತ್ತಿದೆ. ನನಗೆ ಇನ್ನೊಬ್ಬರ ಹೆಸರಲ್ಲಿ ಓಟು ಕೇಳುವ ಅಗತ್ಯತೆ ಬೀಳುವುದಿಲ್ಲ.ನಾಯಕರ ಹೆಸರಲ್ಲಿ ಓಟು ಕೇಳುವವರು ಗೆದ್ದ ನಂತರ ಕ್ಷೇತ್ರದ ಕಡೆಗೆ ಮುಖವೆತ್ತಿಯೂ ನೋಡುವುದಿಲ್ಲವೆಂದು ಜಯಪ್ರಕಾಶ್ ಹೆಗ್ಡೆ ಟೀಕಿಸಿದರು

Read More News

ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಮತ್ತು ನಮ್ಮ ಟಿವಿ ಚಾನೆಲ್ ನ ಆಡಳಿತ ನಿರ್ದೇಶಕ ಡಾ. ಶಿವಶರಣ್ ಶೆಟ್ಟಿ ಮತ್ತು ಅವರ ಸಹೋದರರಾದ ದೇವಿಚರಣ್ ಶೆಟ್ಟಿ, ಹರಿಕಿಶನ್ ಶೆಟ್ಟಿ ಯವರ ಮಾತೃಶ್ರೀ,ಶಿಕ್ಷಣ ಇಲಾಖೆಯ ನಿವೃತ್ತ ಪ್ರಾದೇಶಿಕ ನಿರ್ದೇಶಕಿ ಹಾಗೂ ಡಾ. ಎ. ಸದಾನಂದ ಶೆಟ್ಟಿಯವರ ಸಹೋದರಿ ಎಂ. ರತ್ನಕಾಂತಿ ಶೆಟ್ಟಿ ಅವರಿಗೆ ಗಣ್ಯರಿಂದ ಶ್ರದ್ದಾಂಜಲಿ

ಕಸ್ತೂರಿ ರಂಗನ್ ವರದಿ ಆಧಾರಿತ ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶಗಳ 7 ನೇ ಕರಡು ಅಧಿಸೂಚನೆ ಬಗ್ಗೆ ಸದನದ ಗಮನ ಸೆಳೆದ ಶಾಸಕ ಗಂಟಿಹೊಳೆ. ಗ್ರಾಮೀಣ ಜನರ ಆತಂಕ ನಿವಾರಣೆ ಹಾಗೂ ಜೀವನೋಪಾಯಗಳಿಗೆ ಆಗಬಹುದಾದ ಸಂಭವನಿಯ ಅಪಾಯಗಳ ಬಗ್ಗೆ ಪ್ರಸ್ತಾಪಿಸಿದ ಬೈಂದೂರು ಶಾಸಕರು. ಜನರಿಗೆ ಸ್ಪಷ್ಟ ಮಾಹಿತಿ ಹಾಗೂ ಅಧಿಸೂಚನೆ ವಿರುದ್ಧ ಸ್ಪಷ್ಟ ವಾದ ಮಂಡನೆ ಸಲುವಾಗಿ ಒಂದು ಬಾರಿ ಅಧಿಸೂಚಿತ ಗ್ರಾಮಗಳನ್ನು ಭೌತಿಕ ಸರ್ವೇಗೆ ಒಳಪಡಿಸಲು ಆಗ್ರಹ. 7 ನೇ ಕರಡು ಅಧಿಸೂಚನೆ ಸರಕಾರದ ಹಂತದಲ್ಲಿ ಪರಿಶೀಲನೆಯಲ್ಲಿದೆ ಎಂದ ಅರಣ್ಯ, ಜೀವಿಶಾಸ್ತ್ರ ಹಾಗೂ ಪರಿಸರ ಸಚಿವರು.

Scroll to Top