ಡಾ. ಸುಧಾಕರ್ ಶೆಟ್ಟಿಯವರಿಂದ ವೈದ್ಯಕೀಯ ತಪಾಸಣಾ ಶಿಬಿರ

103.8K Views 10 Apr 2024

ನಮ್ಮ ನಾಡಿನಲ್ಲಿ ಅದೆಷ್ಟೋ ವೈದ್ಯರು ವಿವಿಧ ಬಗೆಯ ರೋಗಿಗಳ ಆರೋಗ್ಯ ಕಾಳಜಿಯಲ್ಲಿ ಹಗಲಿರುಳು ಶ್ರಮಿಸುತ್ತಿದ್ದಾರೆ. ಕೇವಲ ಹಣ ಸಂಪಾದನೆ ಮಾತ್ರ ತಮ್ಮ ವೃತ್ತಿಯ ಲಕ್ಷ್ಯವಲ್ಲವೆಂದು ಸಾಬೀತು ಪಡಿಸಿ ಜನರ ಪ್ರೀತಿ ವಿಶ್ವಾಸ ಗೆದ್ದಿದ್ದಾರೆ. ಅಂಥವರ ಸಾಲಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ. ಸುಧಾಕರ್ ಶೆಟ್ಟಿ ಅವರನ್ನು ಹೆಸರಿಸಬಹುದು.

ಡಾ ಸುಧಾಕರ್ ಶೆಟ್ಟಿಯವರು ಗ್ರಾಮೀಣ ಪ್ರದೇಶದ ಜನರ ಆರೋಗ್ಯ ಸಮಸ್ಯೆಗಳಿಗೆ ಸದಾ ಪರಿಹಾರ ಕಾರ್ಯಗಳಲ್ಲಿ ತಕ್ಷಣ ಸ್ಪಂದಿಸುತ್ತಾರೆ. ಬಡವರು ಆರ್ಥಿಕವಾಗಿ ಹಿಂದುಳಿದ ವರ್ಗಗಳ ಜನರ ಸೇವೆಯಲ್ಲಿ ಸುಖ ಕಾಣುವ ಇವರು ಆಧುನಿಕ ರೀತಿಯ ವೈದ್ಯೋಪಚಾರಗಳಿಂದ ವಂಚಿತರಾಗಿರುವ ಪ್ರದೇಶದ ಜನರ ಬಗ್ಗೆ ಅತೀವ ಕಾಳಜಿ ವಹಿಸುತ್ತಾ ಜನರ ಗಮನ ಸೆಳೆಯುತ್ತಿದ್ದಾರೆ. ಇದೀಗ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳ ಶಿಕ್ಷಕರ ಹಾಗೂ ಶಿಕ್ಷಕೇತರ ಸಿಬ್ಬಂದಿಗಳ ಆರೋಗ್ಯ ಕುರಿತಂತೆ ಅವರನ್ನು ವೈದ್ಯಕೀಯ ಪರೀಕ್ಷೆಗಳಿಗೆ ಒಳಪಡಿಸಿ ಸೂಕ್ತ ಚಿಕಿತ್ಸೆ, ವ್ಯವಸ್ಥೆ ಮಾಡುವಂಥಹ ಒಂದು ನವೀನ ಅಭಿಯಾನವನ್ನು ಡಾ. ಸುಧಾಕರ್ ಶೆಟ್ಟರು ಹಮ್ಮಿಕೊಂಡಿದ್ದು ವೇಣೂರಿನ ಬಜ್ರೆ ಎಂಬಲ್ಲಿಯ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಒಂದು ತಿಂಗಳ ಅಭಿಯಾನವನ್ನು ಎಪ್ರಿಲ್ 2 ರಂದು ಚಾಲನೆ ನೀಡಿದರು.

ಪುಣೆಯ ಖ್ಯಾತ ಮಕ್ಕಳ ವೈದ್ಯರಾಗಿರುವ ಡಾ. ಸುಧಾಕರ ಶೆಟ್ಟಿ ಅವರ ಸೂಕ್ತ ಸಲಹೆ ಸಹಕಾರದೊಂದಿಗೆ ಮೂಡಬಿದಿರೆಯ ಡಾ. ವಿನಯ ಆಳ್ವ ಅವರ ಸಂಯೋಜನೆಯಲ್ಲಿ ಆಳ್ವಾಸ್ ಹೆಲ್ತ್ ಸೆಂಟರ್ ನ ಆಡಳಿತಾಧಿಕಾರಿ ಡಾ ಭಾಸ್ಕರ್ ರಾವ್, ಆಳ್ವಾಸ್ ಆಯುರ್ವೇದ ಕಾಲೇಜಿನ ಪ್ರಾಂಶುಪಾಲ ಡಾ ಸಜಿತ್, ಆಳ್ವಾಸ್ ಹೋಮಿಯೋಪತಿ ಕಾಲೇಜಿನ ಡಾ ರೋಷನ್ ಮೊದಲಾದವರ ಸಹಕಾರದೊಂದಿಗೆ ಕಾರ್ಯೋನ್ಮುಖರಾಗಿದ್ದು ಮೂಡಬಿದಿರೆ ವೇಣೂರು ಪರಿಸರದ ವಿದ್ಯಾರ್ಥಿಗಳು ಹಾಗೂ ಪಾಲಕರು ಇದರ ಸದುಪಯೋಗ ಪಡೆದುಕೊಳ್ಳಬಹುದೆಂದು ಪ್ರಕಟನೆ ತಿಳಿಸಿದೆ.

Read More News

ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಮತ್ತು ನಮ್ಮ ಟಿವಿ ಚಾನೆಲ್ ನ ಆಡಳಿತ ನಿರ್ದೇಶಕ ಡಾ. ಶಿವಶರಣ್ ಶೆಟ್ಟಿ ಮತ್ತು ಅವರ ಸಹೋದರರಾದ ದೇವಿಚರಣ್ ಶೆಟ್ಟಿ, ಹರಿಕಿಶನ್ ಶೆಟ್ಟಿ ಯವರ ಮಾತೃಶ್ರೀ,ಶಿಕ್ಷಣ ಇಲಾಖೆಯ ನಿವೃತ್ತ ಪ್ರಾದೇಶಿಕ ನಿರ್ದೇಶಕಿ ಹಾಗೂ ಡಾ. ಎ. ಸದಾನಂದ ಶೆಟ್ಟಿಯವರ ಸಹೋದರಿ ಎಂ. ರತ್ನಕಾಂತಿ ಶೆಟ್ಟಿ ಅವರಿಗೆ ಗಣ್ಯರಿಂದ ಶ್ರದ್ದಾಂಜಲಿ

ಕಸ್ತೂರಿ ರಂಗನ್ ವರದಿ ಆಧಾರಿತ ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶಗಳ 7 ನೇ ಕರಡು ಅಧಿಸೂಚನೆ ಬಗ್ಗೆ ಸದನದ ಗಮನ ಸೆಳೆದ ಶಾಸಕ ಗಂಟಿಹೊಳೆ. ಗ್ರಾಮೀಣ ಜನರ ಆತಂಕ ನಿವಾರಣೆ ಹಾಗೂ ಜೀವನೋಪಾಯಗಳಿಗೆ ಆಗಬಹುದಾದ ಸಂಭವನಿಯ ಅಪಾಯಗಳ ಬಗ್ಗೆ ಪ್ರಸ್ತಾಪಿಸಿದ ಬೈಂದೂರು ಶಾಸಕರು. ಜನರಿಗೆ ಸ್ಪಷ್ಟ ಮಾಹಿತಿ ಹಾಗೂ ಅಧಿಸೂಚನೆ ವಿರುದ್ಧ ಸ್ಪಷ್ಟ ವಾದ ಮಂಡನೆ ಸಲುವಾಗಿ ಒಂದು ಬಾರಿ ಅಧಿಸೂಚಿತ ಗ್ರಾಮಗಳನ್ನು ಭೌತಿಕ ಸರ್ವೇಗೆ ಒಳಪಡಿಸಲು ಆಗ್ರಹ. 7 ನೇ ಕರಡು ಅಧಿಸೂಚನೆ ಸರಕಾರದ ಹಂತದಲ್ಲಿ ಪರಿಶೀಲನೆಯಲ್ಲಿದೆ ಎಂದ ಅರಣ್ಯ, ಜೀವಿಶಾಸ್ತ್ರ ಹಾಗೂ ಪರಿಸರ ಸಚಿವರು.

Scroll to Top