1 ಲಕ್ಷದ 20 ಸಾವಿರ ಮತಗಳ ಅಂತರದಿಂದ ಗೆಲ್ಲುತ್ತೇನೆ : ಪದ್ಮರಾಜ್ ಆರ್.

113.9K Views 29 Apr 2024

ಮಂಗಳೂರು: ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಎಪ್ರಿಲ್ 27ರ ಶನಿವಾರ ಸಂಜೆ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪದ್ಮರಾಜ್ ಆರ್.ಅವರು ಜಿಲ್ಲಾ ಕಾಂಗ್ರೆಸ್ ನಾಯಕರಿಗೆ, ಕಾರ್ಯಕರ್ತರಿಗೆ ಮತದಾರರಿಗೆ, ಮಾಧ್ಯಮ ಮಿತ್ರರಿಗೆ ಧನ್ಯವಾದ ಸಲ್ಲಿಸಿದರು. ಈ ಸಂದರ್ಭ Mp mla’s ನ್ಯೂಸ್ ಕೇಳಿದ ಪ್ರಶ್ನೆಗೆ ನಾನು 1 ಲಕ್ಷದ 20 ಸಾವಿರ ಮತಗಳ ಅಂತರದಿಂದ ಗೆಲ್ಲುತ್ತೇನೆ. ದ.ಕ. ಜಿಲ್ಲೆಯನ್ನು ಸಾಮರಸ್ಯ, ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯುವಲ್ಲಿ ಸರ್ವ ಪ್ರಯತ್ನ ಮಾಡುತ್ತೇನೆ ಎಂದರು. ಮೊದಲಿಗೆ, ಮಾಜಿ ಮೇಯರ್ ಶಶಿಧರ ಹೆಗ್ಡೆಯವರು ಸ್ವಾಗತಿಸಿದರು. ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ಬಿ. ರಮಾನಾಥ ರೈ, ಅಭಯಚಂದ್ರ ಜೈನ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಶುಭೋದಯ ಆಳ್ವ, ಮೊಹಮ್ಮದ್ ರಾಮಲ್ ಕಟ್ಟೆ ಉಪಸ್ಥಿತರಿದ್ದರು.

Read More News

ಯುನೈಟೆಡ್ ಅರಬ್ ಎಮಿರೇಟ್ಸ್ ನಲ್ಲಿ ಯಶಸ್ವಿಯಾಗಿ 30ನೇ ವರ್ಷಕ್ಕೆ ಪಾದಾರ್ಪಣೆ ಮಾಡಿರುವ ದುಬೈನಲ್ಲಿ ಪ್ರಧಾನ ಕಚೇರಿ ಹೊಂದಿರುವ ತುಂಬೆ ಸಮೂಹ ಸಂಸ್ಥೆಗಳ ಆರೋಗ್ಯ, ಶಿಕ್ಷಣ, ವೈದ್ಯಕೀಯ ಸಮಾಜಮುಖಿ ಬಹು ಯೋಜನೆಗಳ ಬಗ್ಗೆ ಹುಟ್ಟೂರು ತುಂಬೆ ಹಿಲ್ಸ್ ನಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದ ತುಂಬೆ ಗ್ರೂಪ್ಸ್ ಸಂಸ್ಥಾಪಕ ಡಾ. ತುಂಬೆ ಮೊಯ್ದೀನ್

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಗೆ ಯಾರಾಗಲಿದ್ದಾರೆ ನೂತನ ಅಧ್ಯಕ್ಷ. ಚುನಾವಣೆ ಪ್ರಕ್ರಿಯೆಯಲ್ಲಿ ಕಾರ್ಯಕರ್ತರ ಬೆಂಬಲ ಯಾರಿಗೆ? ಕಾಂಗ್ರೆಸ್ ಹೈಕಮಾಂಡ್ ಮೊತ್ತ ಮೊದಲ ಬಾರಿಗೆ ಅಲ್ಪ ಸಂಖ್ಯಾತ ಸಮುದಾಯದ ಸಮರ್ಥ ನಾಯಕನನ್ನು ಆಯ್ಕೆ ಮಾಡುವ ಸಾಧ್ಯತೆ ಬಗ್ಗೆ Mp MLA’s News exclusive Report

Scroll to Top