ಉತ್ತಮ ಸಮಾಜ ನಿರ್ಮಾಣದ ಶಕ್ತಿ ಮಾಧ್ಯಮಗಳಿಗಿದೆ -ಪ್ರೊ.ಪಿ.ಎಲ್ .ಧರ್ಮ

115.8K Views 9 May 2024

ಮಂಗಳೂರು: ಮೇ.9; ಉತ್ತಮ ಸಮಾಜ ನಿರ್ಮಾಣದ ಶಕ್ತಿ ಮಾಧ್ಯಮಗಳಿಗಿದೆ. ಮುಖ್ಯವಾಗಿ ಯುವಜನರಲ್ಲಿ ಶೈಕ್ಷಣಿಕ ಜಾಗೃತಿ ಮೂಡಿಸಬೇಕಾಗಿದೆ ಎಂದು ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಪಿ.ಎಲ್.ಧರ್ಮ ತಿಳಿಸಿದ್ದಾರೆ.


ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾಭವನದಲ್ಲಿ ಗುರುವಾರ ಹಮ್ಮಿಕೊಂಡ ಪ.ಗೋ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕೆ.ಎಂ. ಇಸ್ಮಾಯಿಲ್ ಕಂಡ ಕರೆಯವರಿಗೆ ಪ.ಗೋ ಪ್ರಶಸ್ತಿ ವಿತರಿಸಿ ಮಾತನಾಡುತ್ತಿದ್ದರು.
ಮಾಧ್ಯಮಗಳು ಪರಂಪರೆಯ ಕೊಂಡಿ ಯಾಗಿ ಕಾರ್ಯ ನಿರ್ವಹಿಸುತ್ತಾ ಉತ್ತಮ ಭವಿಷ್ಯ ರೂಪಿಸುವಲ್ಲಿ ಕಾರ್ಯ ನಿರ್ವಹಿಸುತ್ತಾ ಬಂದಿದೆ. ಮಂಗಳೂರು ವಿಶ್ವ ವಿದ್ಯಾನಿಲಯದ ಬೆಳವಣೆಗೆಯಲ್ಲಿ ಮಹತ್ವದ ಪಾತ್ರವಹಿಸಿದೆ.ಯುವ ಜನರಲ್ಲಿ ಕಲಿಕೆಯ ಬಗ್ಗೆ ಇರುವ ನಿರಾಸಕ್ತಿಯನ್ನು ದೂರ ಮಾಡಿ ಜಾಗೃತಿ ಮೂಡಿಸಬೇಕಾಗಿದೆ ಎಂದು ಪಿ.ಎಲ್.ಧರ್ಮ ತಿಳಿಸಿದ್ದಾರೆ.


ಮಾಧ್ಯಮಗಳು ಪದ ಬಳಕೆಯ ಬಗ್ಗೆ ಎಚ್ಚರಿಕೆ ವಹಿಸಬೇಕು.ಸಮಾಜದಲ್ಲಿನ ವಿಕೃತಿಗಳನ್ನು ಮೀರಿ ಮಾಧ್ಯಮಗಳು ಸಮಾಜದ ಉತ್ತಮ ಭವಿಷ್ಯವನ್ನು ರೂಪಿಸುವ ಶಕ್ತಿ ಯನ್ನು ಹೊಂದಿದೆ ಈ ನಿಟ್ಟಿನಲ್ಲಿ ಮಾಧ್ಯಮಗಳು ಗಮನಹರಿಸಲು ಮನವಿ ಮಾಡುವುದಾಗಿ ಪ್ರೊ.ಪಿ. ಎಲ್.ಧರ್ಮ ತಿಳಿಸಿದ್ದಾರೆ.
ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಹಿರಿಯ ಪತ್ರಕರ್ತ ಚಿದಂಬರ ಬೈಕಂಪಾಡಿ,ಹಿರಿಯ ಪತ್ರಕರ್ತ ದಿವಂಗತ ಪದ್ಯಾಣ ಗೋಪಾಲಕೃಷ್ಣರ ಒಡನಾಟದ ಬಗ್ಗೆ ಮಾತನಾಡಿ ಪತ್ರಕರ್ತರು ವರ್ತಮಾನ ಕಾಲದಲ್ಲಿದ್ದು ಭೂತಕಾಲದ ಜ್ಞಾನದೊಂದಿಗೆ ಭವಿಷ್ಯದ ಚಿಂತನೆ ಹೊಂದಿರಬೇಕಾದ ಅಗತ್ಯವಿದೆ ಎಂದರು. ಪ.ಗೋ ಪ್ರಶಸ್ತಿ ವಿಜೇತ ವಾರ್ತಾಭಾರತಿ ಪತ್ರಿಕೆಯ ವಿಶೇಷ ವರದಿಗಾರ ಇಸ್ಮಾಯಿಲ್ ಕಂಡಕೆರೆ ಮಾತನಾಡುತ್ತಾ,ಪತ್ರಿಕೆ ಗಳು ಗ್ರಾಮೀಣ ಪ್ರದೇಶದ ಸಮಸ್ಯೆ ಗಳ ಬಗ್ಗೆ ಹೆಚ್ಚಿನ ಗಮನಹರಿಸಬೇಕಾದ ಅಗತ್ಯವಿದೆ.


ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಅಧ್ಯಕ್ಷತೆವಹಿಸಿದ್ದರು.
ಸಮಾರಂಭದಲ್ಲಿ ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ,ಪತ್ರಿಕಾ ಭವನ ಟ್ರಸ್ಟ್ ನ ಅಧ್ಯಕ್ಷ ರಾಮಕೃಷ್ಣ ಆರ್,ಮಹಾರಾಷ್ಟ್ರ ಕನ್ನಡಿಗ ಪತ್ರಕರ್ತರ ಸಂಘದ ಅಧ್ಯಕ್ಷ ರೋನ್ಸ ಬಂಟ್ವಾಳ,ಪದ್ಯಾಣ ಗೋಪಾಲಕೃಷ್ಣರವರ ಪುತ್ರ ವಿಶ್ವೇಶ್ವರ ಭಟ್ ,ಮ್ಯಾಮ್ ನ ಗೌರವಾಧ್ಯಕ್ಷ ವೇಣು ಶರ್ಮ,ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ,ಕೋಶಾಧಿಕಾರಿ ಪುಷ್ಪ ರಾಜ್ ಬಿ.ಎನ್, ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಡಸ್ಥಳ,ಹಿರಿಯ ಪತ್ರಕರ್ತ ಹಿಲರಿ ಕ್ರಾಸ್ತ,ಹರ್ಷ ಮೊದಲಾದ ವರು ಉಪಸ್ಥಿತರಿದ್ದರು.ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ವಂದಿಸಿದರು.ಪ್ರೆಸ್ ಕ್ಲಬ್ ಉಪಾಧ್ಯಕ್ಷ ಆರಿಫ್ ಪಡುಬಿದ್ರೆ ಕಾರ್ಯಕ್ರಮ ನಿರೂಪಿಸಿದರು.

Read More News

ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಮತ್ತು ನಮ್ಮ ಟಿವಿ ಚಾನೆಲ್ ನ ಆಡಳಿತ ನಿರ್ದೇಶಕ ಡಾ. ಶಿವಶರಣ್ ಶೆಟ್ಟಿ ಮತ್ತು ಅವರ ಸಹೋದರರಾದ ದೇವಿಚರಣ್ ಶೆಟ್ಟಿ, ಹರಿಕಿಶನ್ ಶೆಟ್ಟಿ ಯವರ ಮಾತೃಶ್ರೀ,ಶಿಕ್ಷಣ ಇಲಾಖೆಯ ನಿವೃತ್ತ ಪ್ರಾದೇಶಿಕ ನಿರ್ದೇಶಕಿ ಹಾಗೂ ಡಾ. ಎ. ಸದಾನಂದ ಶೆಟ್ಟಿಯವರ ಸಹೋದರಿ ಎಂ. ರತ್ನಕಾಂತಿ ಶೆಟ್ಟಿ ಅವರಿಗೆ ಗಣ್ಯರಿಂದ ಶ್ರದ್ದಾಂಜಲಿ

ಕಸ್ತೂರಿ ರಂಗನ್ ವರದಿ ಆಧಾರಿತ ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶಗಳ 7 ನೇ ಕರಡು ಅಧಿಸೂಚನೆ ಬಗ್ಗೆ ಸದನದ ಗಮನ ಸೆಳೆದ ಶಾಸಕ ಗಂಟಿಹೊಳೆ. ಗ್ರಾಮೀಣ ಜನರ ಆತಂಕ ನಿವಾರಣೆ ಹಾಗೂ ಜೀವನೋಪಾಯಗಳಿಗೆ ಆಗಬಹುದಾದ ಸಂಭವನಿಯ ಅಪಾಯಗಳ ಬಗ್ಗೆ ಪ್ರಸ್ತಾಪಿಸಿದ ಬೈಂದೂರು ಶಾಸಕರು. ಜನರಿಗೆ ಸ್ಪಷ್ಟ ಮಾಹಿತಿ ಹಾಗೂ ಅಧಿಸೂಚನೆ ವಿರುದ್ಧ ಸ್ಪಷ್ಟ ವಾದ ಮಂಡನೆ ಸಲುವಾಗಿ ಒಂದು ಬಾರಿ ಅಧಿಸೂಚಿತ ಗ್ರಾಮಗಳನ್ನು ಭೌತಿಕ ಸರ್ವೇಗೆ ಒಳಪಡಿಸಲು ಆಗ್ರಹ. 7 ನೇ ಕರಡು ಅಧಿಸೂಚನೆ ಸರಕಾರದ ಹಂತದಲ್ಲಿ ಪರಿಶೀಲನೆಯಲ್ಲಿದೆ ಎಂದ ಅರಣ್ಯ, ಜೀವಿಶಾಸ್ತ್ರ ಹಾಗೂ ಪರಿಸರ ಸಚಿವರು.

Scroll to Top