ಮಂಗಳೂರು: ದಕ್ಷಿಣ ಕನ್ನಡ ಸಂಸದ ನಳಿನ್ಕುಮಾರ್ ಕಟೀಲು ಅವರನ್ನು ಜನಸೇವಾ ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಸತತ ಮೂರು ಬಾರಿ ದಕ್ಷಿಣ ಕನ್ನಡದ ಎಂಪಿಯಾಗಿ ಒಂದು ಲಕ್ಷಕ್ಕೂ ಅಧಿಕ ಕೋಟಿ ರೂಪಾಯಿಗಳ ಅನುದಾನವನ್ನು ಕೇಂದ್ರದಿಂದ ತಂದು ದಕ್ಷಿಣ ಕನ್ನಡದ ಸಮಗ್ರ ಅಭಿವೃದ್ಧಿಗೆ ಶ್ರಮಿಸಿದ ನಳಿನ್ಕುಮಾರ್ ಕಟೀಲು ಅವರು ನೇರ ನಡೆ ನುಡಿಯ ನಿಷ್ಕಳಂಕ ವ್ಯಕ್ತಿತ್ವದ ಜನ ಮೆಚ್ಚಿದ ಜನನಾಯಕರಾಗಿದ್ದು, ಅವರ ನಿಷ್ಪಕ್ಷಪಾತೀಯ ಹಾಗೂ ಪ್ರಾಮಾಣಿಕ ಜನಸೇವೆಯನ್ನು ಪರಿಗಣಿಸಿ ಅವರನ್ನು ಜನಸೇವಾ ರಾಷ್ಟ್ರೀಯ ಪ್ರಶಸ್ತಿಗೆ ಅರ್ಹವಾಗಿ ಆಯ್ಕೆ ಮಾಡಲಾಗಿದೆ.
ಜನಸೇವಾ ರಾಷ್ಟ್ರೀಯ ಪ್ರಶಸ್ತಿಯನ್ನು Mp mla’s ನ್ಯೂಸ್ ಪತ್ರಿಕೆ ಮತ್ತು Mp mla’s news tv 24×7ನ್ಯೂಸ್ ಪೋರ್ಟಲ್ ಮಾಧ್ಯಮ ಸಂಸ್ಥೆಯು ಅಕ್ಟೋಬರ್ 13 ರಂದು ಮಂಗಳೂರು ಟೌನ್ ಹಾಲ್ ನಲ್ಲಿ ಆಯೋಜಿಸಿರುವ 13ನೇ ಸೌಹಾರ್ದ ಸಂಗಮದಲ್ಲಿ ಗಣ್ಯರ ಸಮ್ಮುಖದಲ್ಲಿ ಸಂಸದ ನಳಿನ್ಕುಮಾರ್ ಕಟೀಲ್ ಅವರಿಗೆ ಪ್ರದಾನ ಮಾಡಲಿದೆಂದು ಸೌಹಾರ್ದ ಸಂಗಮದ ಸಂಘಟಕ ಡಾ. ಅಶೋಕ್ ಶೆಟ್ಟಿ ಬಿ. ಎನ್ ತಿಳಿಸಿದ್ದಾರೆ

























































































































































































