ಅಂಗವೈಕಲ್ಯದಿಂದ ಕೂಡಿದ ಬಡವರಿಗೆ ನೆರವು ಶ್ಲಾಘನೀಯ -ಡಾ.ಎಂ.ಬಿ.ಬೋರ ಲಿಂಗಯ್ಯ

113.4K Views 1 Jun 2024

ಮಂಗಳೂರು : ವೆನ್ಲಾಕ್ ನಲ್ಲಿ ಸುಧಾರಿತ ಎಂಡೊ ಪ್ರೊಸ್ಥೆಟಿಕ್ ಸೆಂಟರ್ ಗೆ ಚಾಲನೆ
ಮಂಗಳೂರು, ಮೇ.31;ದೇಶದಲ್ಲಿ ವಿವಿಧ ಕಾರಣದಿಂದ ಪ್ರತಿ ವರ್ಷ ಲಕ್ಷಾಂತರ ಮಂದಿ ಶಾಶ್ವತ ಅಂಗ ವಿಕಲರಾಗುತ್ತಾರೆ.ಈ ಅಂಗವಿಕಲತೆ ಆರ್ಥಿಕವಾಗಿ ಬಡವರಾಗಿರುವವರನ್ನು ಇನ್ನಷ್ಟು ಕಾಡುತ್ತದೆ ಇಂತಹ ಜನರಿಗೆ ಕೃತಕ ಅಂಗಗಳ ವಿತರಣೆಯನ್ನು ದೀರ್ಘ ಕಾಲದಿಂದ ವೆನ್ಲಾಕ್ ಸರಕಾರಿ ಆಸ್ಪತ್ರೆಯಲ್ಲಿ ಅರ್ಹರಿಗೆ ಉಚಿತವಾಗಿ ನೀಡುತ್ತಿರುವುದು ಮಹತ್ವದ ಶ್ಘಾಘನೀಯ ಕಾರ್ಯ ವೆಂದುಪಶ್ಚಿಮ ವಲಯದ ಪೊಲೀಸ್ ಮಹಾ ನಿರೀಕ್ಷಕ ಡಾ|ಎಂ.ಬಿ. ಬೋರ ಲಿಂಗಯ್ಯ ತಿಳಿಸಿದರು.


ಅವರು ಲಯನ್ಸ್ ಸಂಸ್ಥೆಯ ವತಿಯಿಂದ ನಗರದ ವೆನ್ಲಾಕ್ ಆಸ್ಪತ್ರೆಯ ಲಿಂಬ್ ಸೆಂಟರ್‌ನಲ್ಲಿ ಶುಕ್ರವಾರ ಕೃತಕ ಅಂಗಾಂಗ ತಯಾರಿಯ ಸುಧಾರಿತ ಎಂಡೊ ಪ್ರೊಸ್ಥೆಟಿಕ್ ಸೆಂಟರನ್ನು ಉದ್ಘಾಟಿಸಿ ಮಾತನಾ ಡುತ್ತಿದ್ದರು.
ಈ ಕೆಲಸದಲ್ಲಿ ತೊಡಗಿರುವ ಡಾ.ಶಾಂತರಾಮ ಶೆಟ್ಟಿಯವರ ನೇತೃತ್ವದ ತಂಡ ಹಾಗೂ ವೆನ್ಲಾಕ್ ನ ಲಯನ್ಸ್ ಲಿಂಬ್ ಸೆಂಟರ್ ನ ಕಾರ್ಯವನ್ನು ಅಭಿನಂದಿಸುವು ದಾಗಿ ತಿಳಿಸಿ ನೂತನ ಕೇಂದ್ರಕ್ಕೆ ಶುಭ ಹಾರೈಸಿದರು.
ವೆನ್ಲಾಕ್ ಲಯನ್ಸ್ ಲಿಂಬ್ ಸೆಂಟರ್ ಕೇಂದ್ರದ ಅಧ್ಯಕ್ಷ ಡಾ| ಎಂ. ಶಾಂತಾರಾಮ ಶೆಟ್ಟಿ ಮಾತನಾಡುತ್ತಾ, ದೇಶದಲ್ಲಿ ಮುಂಬಯಿ,ಡೆಲ್ಲಿ, ಕೊಲ್ಕತ್ತಾ, ಬಿಟ್ಟರೆ ಮಂಗಳೂರಿನಲ್ಲಿ ಕೃತಕ ಅವಯವಗಳನ್ನು ನೀಡುವ ಲಿಂಬ್ ಸೆಂಟರ್ ನ್ನು ಲಯನ್ಸ್ ಸಂಸ್ಥೆಯ ಸಹಕಾರದೊಂದಿಗೆ 49 ವರ್ಷಗಳ ಹಿಂದೆ ಆರಂಭಿಸಲಾಗಿದೆ.ಇದುವರೆಗೆ ಸುಮಾರು 80ಸಾವಿರ ಜನರಿಗೆ ಕೃತಕ ಅಂಗಾಂಗಳನ್ನು ನೀಡಲಾಗಿದೆ ಈಗ ಈ ಕೇಂದ್ರ ಮೇಲ್ದರ್ಜೆಗೆ ಏರಿಸುವ ಮೂಲಕ ಇನ್ನಷ್ಟು ಜನರಿಗೆ ನೆರವಾಗಲಿದೆ ಈ ಯೋಜನೆಗೆ ನೆರವು ನೀಡಿದ ಲಯನ್ಸ್ ಸಂಸ್ಥೆಯ ಪದಾಧಿಕಾರಿಗಳೆಗೆ ಕೃತಜ್ಞತೆ ಸಲ್ಲಿಸುವುದಾಗಿ ಶಾಂತರಾ ಶೆಟ್ಟಿ ತಿಳಿಸಿದರು.
ವೆನ್ಲಾಕ್ ಆಸ್ಪತ್ರೆಯ ವೈದ್ಯಾಧಿಕಾರಿ ಡಾ| ಜೆಸಿಂತಾ ಡಿ’ಸೋಜಾ ಮಾತನಾಡುತ್ತಾ, ಡಾ.ಶಾಂತಾ ರಾಮ ಶೆಟ್ಟಿಯವರ ನೇತೃತ್ವದಲ್ಲಿನ ಈ ಲಿಂಬ್ ಸೆಂಟರ್ ಮೂಲಕ ವೆನ್ಲಾಕ್ ನ ಬಹುತೇಕ ಅಂಗಾಂಗ ಕಳೆದು ಕೊಂಡ ಬಡವರು ತಮ್ಮ ಬದುಕಿನಲ್ಲಿ ನವಚೇತನ ಪಡೆಯುವಂತಾಗಿದೆ ಎಂದರು. ಲಯನ್ಸ್ ಗವರ್ನರ್ ಮೆಲ್ವಿನ್ ಡಿ’ಸೋಜಾ, ಮಾಜಿ ಲಯನ್ಸ್ ಗವರ್ನರ್ ಗಳಾದ ವಸಂತ ಶೆಟ್ಟಿ ,ಸಂಜಿತ್ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಸಮಾರಂಭದ ವೇದಿಕೆಯಲ್ಲಿ ಮಂಗಳೂರು ಲಯನ್ಸ್ ಕ್ಲಬ್ ಅಧ್ಯಕ್ಷ ಶೀನ ಪೂಜಾರಿ,ವೆನ್ಲಾಕ್ ಲಯನ್ಸ್ ಲಿಂಬ್ ಸೆಂಟರ್ ನ ಸಂಚಾಲಕ ಡಾ.ಕೆ.ಆರ್. ಕಾಮತ್,ವೆನ್ಲಾಕ್ ಲಿಂಬ್ ಸೆಂಟರ್ ನ ವ್ಯವಸ್ಥಾಪಕ ಸುರೇಶ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. ವೆನ್ಲಾಕ್ವ ಲಯನ್ಸ್ ಲಿಂಬ್ ಸೆಂಟರ್ ನ ಕಾರ್ಯದರ್ಶಿ ಮುರಳೀಧರ ಲಮಾಣಿ ವಂದಿಸಿದರು.
ಇದೇ ಸಂದರ್ಭದಲ್ಲಿ ಫಲಾನುಭವಿಗಳಿಗೆ ವೆನ್ಲಾಕ್ ಲಯನ್ಸ್ ಲಿಂಬ್ ಸೆಂಟರ್ ವತಿಯಿಂದ ಕೃತಕ ಅಂಗಾಂಗಗಳನ್ನು ಅತಿಥಿಗಳು ವಿತರಿಸಿದರು.

Read More News

ಮೇರಿಹಿಲ್ ಪಾಲೆಮಾರ್ ಕನ್ವೆನ್ಷನ್ ಸೆಂಟರ್ ನಲ್ಲಿ ಇಂದು (ಮೇ. 23 ರಂದು) ಮಾಜಿ ಸಚಿವ ಜೆ. ಕೃಷ್ಣ ಪಾಲೆಮಾರ್ ಮಾಲಕತ್ವದ ಲ್ಯಾಂಡ್ ಲಿಂಕ್ಸ್ ಸಂಸ್ಥೆಯು ಮಂಗಳೂರಿನ ಪ್ರಮುಖ ನಾಲ್ಕು ಸ್ಥಳಗಳಲ್ಲಿ ನಿರ್ಮಿಸಿದ ಅತ್ಯಾಧುನಿಕ ಸೌಲಭ್ಯಗಳನ್ನೊಳಗೊಂಡ ಭವ್ಯ ಸಭಾ ಭವನಗಳನ್ನು ಲೋಕಾರ್ಪಣೆ ಮಾಡಿದ ಆಂಧ್ರ ಪ್ರದೇಶದ ರಾಜ್ಯಪಾಲ ಜಸ್ಟಿಸ್ ಎಸ್. ಅಬ್ದುಲ್ ನಜೀರ್. ಪಾಲೆಮಾರ್ ಅವರನ್ನು ಕೋಟಿಗೊಬ್ಬರು ಎಂದು ಗುಣಗಾನ ಮಾಡಿದ ಜಸ್ಟಿಸ್ ಅಬ್ದುಲ್ ನಜೀರ್.

ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್ ಅವರಿಂದ ಕರಾವಳಿ ಜನತೆಗೆ ವಿಶಿಷ್ಟ ಕೊಡುಗೆ: ಕರಾವಳಿ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಮಂಗಳೂರಿನ ನಾಲ್ಕು ಪ್ರಮುಖ ಸ್ಥಳಗಳಲ್ಲಿ ಏಕಕಾಲಕ್ಕೆ ನಾಲ್ಕು ಅತ್ಯಾಧುನಿಕ ಅದ್ದೂರಿ ಸಭಾಭವನಗಳ ಲೋಕಾರ್ಪಣೆ

Scroll to Top