ಕರಾವಳಿ ಹಿಂದುತ್ವದ ಭದ್ರಕೋಟೆ : -ಹರೀಶ್ ಪೂಂಜ.

101K Views 4 Jun 2024

ಬೆಳ್ತಂಗಡಿ : ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿಜಿಯವರ ನೇತೃತ್ವದ ಎನ್. ಡಿ. ಎ. ಮೈತ್ರಿಕೂಟ ಮೂರನೇ ಬಾರಿಗೆ ಜನಾದೇಶ ಪಡೆದುಕೊಂಡಿದ್ದಕ್ಕೆ ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಪ್ರಚಂಡ ಬಹುಮತದಿಂದ ವಿಜಯಶಾಲಿಗಳಾಗಿರುವುದಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಸಂತಸ ವ್ಯಕ್ತಪಡಿಸಿದ್ದಾರೆ.
ರಾಜ್ಯ ಕಾಂಗ್ರೆಸ್ ಸರ್ಕಾರ ಆಡಳಿತಯಂತ್ರ ದುರುಪಯೋಗಪಡಿಸಿಕೊಂಡು ಅಪವಾದ ಅಪಪ್ರಚಾರಗಳ ನಡುವೆ ನಡೆಸಿದ ಈ ಚುನಾವಣೆಯಲ್ಲಿ ಕರಾವಳಿಯ ಜನತೆ ಈ ಚುನಾವಣೆಯಲ್ಲಿ ಕಾಂಗ್ರೆಸ್ ನ್ನು ಸರಸಗಟಾಗಿ ತಿರಸ್ಕರಿಸಿ ಹಿಂದುತ್ವದ ಭದ್ರಕೋಟೆಯನ್ನು ಪುಡಿಗಟ್ಟಲು ಅಸಾಧ್ಯವೆಂಬ ಸಂದೇಶವನ್ನು ಸ್ಪಷ್ಟವಾಗಿ ನೀಡಿರುತ್ತಾರೆ.
ಪ್ರಥಮ ಬಾರಿಗೆ ಲೋಕಸಭೆಯನ್ನು ಪ್ರವೇಶಸಲಿರುವ ಕ್ಯಾಪ್ಟನ್ ಬ್ರಿಜೇಶ್ ಚೌಟ ಹಾಗೂ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಅಭಿನಂದನೆಗಳನ್ನು ಸಲ್ಲಿಸಿ ಬೆಳ್ತಂಗಡಿಯಲ್ಲಿ 2019,2023 ಹಾಗೂ 2024 ರ ಸಾರ್ವತ್ರಿಕ ಲೋಕಸಭೆ ಚುನಾವಣೆಯಲ್ಲಿ ಸತತವಾಗಿ ಬಿಜೆಪಿಯ ಮತಗಳಿಕೆಯನ್ನು ಒಂದು ಲಕ್ಷಕ್ಕೂ ಮಿಗಿಲಾಗಿ ನೀಡಿ “ತ್ರೀಸ್ ರೀ ಬಾರ್ ಏಕ್ ಲಾಕ್ ಪಾರ್” ಮಾಡಿದ ಮತದಾರ ಬಾಂಧವರಿಗೆ ಶಾಸಕ ಹರೀಶ್ ಪೂಂಜ ಮನದಾಳದ ಕೃತಜ್ಞತೆಯನ್ನು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿರುತ್ತಾರೆ.

Read More News

ಇಂದು ಸಂಜೆ (ಸೆ.13 )ಬಿ.ಸಿ. ರೋಡ್ ನಲ್ಲಿ ನಡೆದ ಮಾಜಿ ಸಚಿವ ಬಿ. ರಮಾನಾಥ ರೈ ಅವರ ಹುಟ್ಟುಹಬ್ಬದ 75ರ ಸಂಭ್ರಮ ಮತ್ತು ಲಾಂಛನ ಬಿಡುಗಡೆ ಕಾರ್ಯಕ್ರಮ.ಜೊತೆಗೆ, ಪ್ರಜ್ಞಾಶ್ರಮದ ವಿದ್ಯಾರ್ಥಿಗಳಿಗೆ ರೋಶನ್ ರೈ ನೇತೃತ್ವದಲ್ಲಿ ಭೋಜನ ವ್ಯವಸ್ಥೆ. ಮಾನವೀಯ ಮೌಲ್ಯಗಳಿಗೆ ಜೀವ ತುಂಬಿದ ಬೇಬಿಯಣ್ಣನ ಬರ್ತ್ ಡೇ.

ದ.ಕ. ಕಾಂಗ್ರೆಸ್ ಗೆ ಪದ್ಮರಾಜ್ ಸಾರಥ್ಯ: ಬಿಲ್ಲವ ಅಸ್ತ್ರ, ಬಂಟ-ಕ್ರೈಸ್ತ-ಮುಸ್ಲಿಂ ಸಮುದಾಯದ ಪ್ರತಿಕ್ರಿಯೆ ಹೇಗಿದೆ ಮತ್ತು 8 ವಿಧಾನ ಸಭಾ ಕ್ಷೇತ್ರದ ಗೆಲುವಿನ ಟಾರ್ಗೆಟ್ ಸೇರಿದಂತೆ ವಿಶೇಷ ಸಂದರ್ಶನದಲ್ಲಿ ಪದ್ಮರಾಜ್ ಪೂಜಾರಿ ಅವರು ಹೇಳಿದ್ದೇನು? MP MLA’S NEWS SPECIAL EXCLUSIVE REPORT by DR ASHOK SHETTY BN.

Scroll to Top