ಹಲ್ಲೆಗೊಳಗಾದ ಬಿಜೆಪಿ ಕಾರ್ಯಕರ್ತರನ್ನು ಚಿಕಿತ್ಸೆ ಪಡೆಯುತ್ತಿರುವ ದೇರಳಕಟ್ಟೆ ಕೆ. ಎಸ್. ಹೆಗ್ಡೆ ಆಸ್ಪತ್ರೆಯಲ್ಲಿ ಭೇಟಿ ಮಾಡಿದ ನಳಿನ್ ಕುಮಾರ್ ಕಟೀಲು ಸಹಿತ ಬಿಜೆಪಿ ಮುಖಂಡರು. ತಪ್ಪಿತಸ್ಥರನ್ನು ತಕ್ಷಣ ಬಂಧಿಸಿ ಕಠಿಣ ಕಾನೂನು ಕ್ರಮ ಜರಗಿಸುವಂತೆ ಪೊಲೀಸ್ ಇಲಾಖೆಗೆ, ರಾಜ್ಯ ಸರಕಾರಕ್ಕೆ ಒತ್ತಾಯ.

104.8K Views 11 Jun 2024

ಮಂಗಳೂರು : ಮೋದಿಯವರು ದೇಶದ ಪ್ರಧಾನಿಯಾಗಿ ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸುವ ಸುಸಂದರ್ಭದಲ್ಲಿ ಬೋಳಿಯಾರಿನಲ್ಲಿ ಬಿಜೆಪಿಯ ವಿಜಯೋತ್ಸವದಲ್ಲಿ ಭಾಗಿಯಾಗಿ “ಭಾರತ್ ಮಾತಾ ಕಿ ಜೈ” ಘೋಷಣೆ ಕೂಗಿದ ಕಾರ್ಯಕರ್ತರಿಗೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿದ್ದು ಗಾಯಾಳುಗಳು ದೇರಳಕಟ್ಟೆ ಕೆ.ಎಸ್ ಹೆಗ್ಡೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಅವರನ್ನು ಮಾಜಿ ಸಂಸದ ನಳಿನ್ ಕುಮಾರ್ ಕಟೀಲು,ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ,ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾ, ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಹಾಗೂ ಪ್ರಮುಖರುಗಳು ಭೇಟಿಯಾಗಿ ಧೈರ್ಯ ತುಂಬಿ,ದ.ಕ ಜಿಲ್ಲೆಯಲ್ಲಿ ಅರಾಜಕತೆಯನ್ನು ಸೃಷ್ಟಿಸುವ ಹುನ್ನಾರವಾಗಿದ್ದು ಘಟನೆ ಬಳಿಕ ಪರಾರಿಯಾದ ದುಷ್ಕರ್ಮಿಗಳನ್ನು ಕೂಡಲೇ ಬಂಧಿಸಿ ಹೆಡೆಮುರಿ ಕಟ್ಟುವ ಮೂಲಕ ಕಾನೂನು ಕ್ರಮಗಳನ್ನು ಬಿಗಿಗೊಳಿಸಬೇಕೆಂದು ಪೊಲೀಸ್ ಇಲಾಖೆ ಹಾಗೂ ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.

ಚಿತ್ರಗಳು :ಸತೀಶ್ ಕಾಪಿಕಾಡ್

Read More News

ಮೇರಿಹಿಲ್ ಪಾಲೆಮಾರ್ ಕನ್ವೆನ್ಷನ್ ಸೆಂಟರ್ ನಲ್ಲಿ ಇಂದು (ಮೇ. 23 ರಂದು) ಮಾಜಿ ಸಚಿವ ಜೆ. ಕೃಷ್ಣ ಪಾಲೆಮಾರ್ ಮಾಲಕತ್ವದ ಲ್ಯಾಂಡ್ ಲಿಂಕ್ಸ್ ಸಂಸ್ಥೆಯು ಮಂಗಳೂರಿನ ಪ್ರಮುಖ ನಾಲ್ಕು ಸ್ಥಳಗಳಲ್ಲಿ ನಿರ್ಮಿಸಿದ ಅತ್ಯಾಧುನಿಕ ಸೌಲಭ್ಯಗಳನ್ನೊಳಗೊಂಡ ಭವ್ಯ ಸಭಾ ಭವನಗಳನ್ನು ಲೋಕಾರ್ಪಣೆ ಮಾಡಿದ ಆಂಧ್ರ ಪ್ರದೇಶದ ರಾಜ್ಯಪಾಲ ಜಸ್ಟಿಸ್ ಎಸ್. ಅಬ್ದುಲ್ ನಜೀರ್. ಪಾಲೆಮಾರ್ ಅವರನ್ನು ಕೋಟಿಗೊಬ್ಬರು ಎಂದು ಗುಣಗಾನ ಮಾಡಿದ ಜಸ್ಟಿಸ್ ಅಬ್ದುಲ್ ನಜೀರ್.

ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್ ಅವರಿಂದ ಕರಾವಳಿ ಜನತೆಗೆ ವಿಶಿಷ್ಟ ಕೊಡುಗೆ: ಕರಾವಳಿ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಮಂಗಳೂರಿನ ನಾಲ್ಕು ಪ್ರಮುಖ ಸ್ಥಳಗಳಲ್ಲಿ ಏಕಕಾಲಕ್ಕೆ ನಾಲ್ಕು ಅತ್ಯಾಧುನಿಕ ಅದ್ದೂರಿ ಸಭಾಭವನಗಳ ಲೋಕಾರ್ಪಣೆ

Scroll to Top