ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು ಏಕಾಏಕಿ ಹೆಚ್ಚಳ ಮಾಡಿದ ಕಾಂಗ್ರೆಸ್ ಸರಕಾರ ಜನವಿರೋಧಿ ನೀತಿಯನ್ನು ಅನುಸರಿಸುತ್ತಿದೆಂದು ನಳಿನ್ ಕುಮಾರ್ ಕಟೀಲ್ ವಾಗ್ದಾಳಿ.

105.4K Views 17 Jun 2024

ಮಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು ಏಕಾಏಕಿ ಶೇ.4ರಷ್ಟು ಹೆಚ್ಚಿಸುವ ಮೂಲಕ ತನ್ನ ಜನವಿರೋಧಿ ನೀತಿಯನ್ನು ಮತ್ತೆ ಪ್ರದರ್ಶಿಸಿದೆ. ಅವೈಜ್ಞಾನಿಕ ಗ್ಯಾರಂಟಿ ಯೋಜನೆ ಮತ್ತು ಸಚಿವರುಗಳ ನಡೆಸಿದ
ಭ್ರಷ್ಟಾಚಾರದಿಂದ ರಾಜ್ಯದ ಬೊಕ್ಕಸ ಖಾಲಿಯಾಗಿದ್ದು ಈಗ ತೆರಿಗೆ ಹೆಚ್ಳಳ ಮಾಡುವ ಮೂಲಕ ಜನತೆಗೆ ಶಾಕ್ ನೀಡಿದೆ ಎಂದು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಹೇಳಿದ್ದಾರೆ.
ಕಾಂಗ್ರೆಸ್ ಆಡಳಿತಕ್ಕೆ ಬಂದ ಬಳಿಕ ವಿದ್ಯುತ್ ದರ, ಮುದ್ರಾಂಕ ಶುಲ್ಕ ಸಹಿತ ಎಲ್ಲ ರೀತಿಯ ಶುಲ್ಕಗಳನ್ನು ಏರಿಸಿ ಜನರಿಗೆ ಅನ್ಯಾಯ ಮಾಡಿದೆ. ಇದೀಗ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು ಹೆಚ್ಚಳ ಮಾಡಿರುವುದರಿಂದ ಸಾಗಾಟ ವೆಚ್ಚ ಹೆಚ್ಚಳವಾಗಿ ಎಲ್ಲ ವಸ್ತುಗಳ ಬೆಲೆ ಏರಿಕೆಯಾಗಲಿದೆ. ಇದರಿಂದ ರಾಜ್ಯದ ಜನತೆ ಇನ್ನಷ್ಟು ಸಂಕಷ್ಟಕ್ಕೀಡಾಗಲಿದ್ದಾರೆ. ಇನ್ನೊಂದೆಡೆ, ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು ಜನತೆ ಆತಂಕದಲ್ಲಿದ್ದಾರೆ. ಕಾಂಗ್ರೆಸ್ ಸರ್ಕಾರದಿಂದ ರಾಜ್ಯಕ್ಕೆ ಉಳಿಗಾಲವಿಲ್ಲ ಎನ್ನುವ ಸ್ಥಿತಿ ನಿರ್ಮಾಣವಾಗಿದೆ ಎಂದು ನಳಿನ್‌ಕುಮಾರ್ ಕಟೀಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More News

ಯುನೈಟೆಡ್ ಅರಬ್ ಎಮಿರೇಟ್ಸ್ ನಲ್ಲಿ ಯಶಸ್ವಿಯಾಗಿ 30ನೇ ವರ್ಷಕ್ಕೆ ಪಾದಾರ್ಪಣೆ ಮಾಡಿರುವ ದುಬೈನಲ್ಲಿ ಪ್ರಧಾನ ಕಚೇರಿ ಹೊಂದಿರುವ ತುಂಬೆ ಸಮೂಹ ಸಂಸ್ಥೆಗಳ ಆರೋಗ್ಯ, ಶಿಕ್ಷಣ, ವೈದ್ಯಕೀಯ ಸಮಾಜಮುಖಿ ಬಹು ಯೋಜನೆಗಳ ಬಗ್ಗೆ ಹುಟ್ಟೂರು ತುಂಬೆ ಹಿಲ್ಸ್ ನಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದ ತುಂಬೆ ಗ್ರೂಪ್ಸ್ ಸಂಸ್ಥಾಪಕ ಡಾ. ತುಂಬೆ ಮೊಯ್ದೀನ್

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಗೆ ಯಾರಾಗಲಿದ್ದಾರೆ ನೂತನ ಅಧ್ಯಕ್ಷ. ಚುನಾವಣೆ ಪ್ರಕ್ರಿಯೆಯಲ್ಲಿ ಕಾರ್ಯಕರ್ತರ ಬೆಂಬಲ ಯಾರಿಗೆ? ಕಾಂಗ್ರೆಸ್ ಹೈಕಮಾಂಡ್ ಮೊತ್ತ ಮೊದಲ ಬಾರಿಗೆ ಅಲ್ಪ ಸಂಖ್ಯಾತ ಸಮುದಾಯದ ಸಮರ್ಥ ನಾಯಕನನ್ನು ಆಯ್ಕೆ ಮಾಡುವ ಸಾಧ್ಯತೆ ಬಗ್ಗೆ Mp MLA’s News exclusive Report

Scroll to Top