ಮಂಗಳೂರು : Mp mla’s ನ್ಯೂಸ್ 13ನೇ ಸೌಹಾರ್ದ ಸಂಗಮವು ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಅಕ್ಟೋಬರ್ 13ನೇ ಆದಿತ್ಯವಾರ ಸಂಜೆ ಗಂಟೆ 4 ರಿಂದ 9 ರವರೆಗೆ ನಡೆಯಲಿದ್ದು, ಶ್ರೀದೇವಿ ಎಜುಕೇಶನ್ ಟ್ರಸ್ಟ್(ರಿ)ನ ಅಧ್ಯಕ್ಷರಾದ ಡಾ.ಎ. ಸದಾನಂದ ಶೆಟ್ಟಿ ಅವರು ಉದ್ಘಾಟನೆ ಮಾಡಲಿದ್ದಾರೆ. ಈ ಪ್ರಯುಕ್ತ ಸೌಹಾರ್ದ ಸಂಗಮದ ಮೊದಲ ಆಮಂತ್ರಣ ಪತ್ರಿಕೆಯನ್ನು ಕುಡ್ಲದ ಕಛೇರಿಯಲ್ಲಿ ಡಾ.ಎ. ಸದಾನಂದ ಶೆಟ್ಟಿಯವರಿಗೆ ಸೌಹಾರ್ದ ಸಂಗಮದ ಸಂಘಟಕ ಡಾ. ಅಶೋಕ್ ಶೆಟ್ಟಿ ಬಿ. ಎನ್ ಅವರು ನೀಡಿ, ಸೌಹಾರ್ದ ಸಂಗಮದ ಉದ್ಘಾಟಕರಾಗಿ ಆಗಮಿಸುವಂತೆ ಕಾರ್ಯಕ್ರಮಕ್ಕೆ ಆಹ್ವಾನಿಸಿದರು.





















































































































































































