ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಎಸ್ ಪಿಯಾಗಿ ಯತೀಶ್ ಎನ್. ಅವರನ್ನು ನೇಮಕ ಮಾಡಲಾಗಿದೆ . ಈಗಿನ ಎಸ್ಪಿ ಸಿ.ಬಿ.ರಿಷ್ಯಂತ್ ಅವರನ್ನು ಬೆಂಗಳೂರಿನ ವೈರ್ಲೆಸ್ ಎಸ್ ಪಿ ಸ್ಥಾನಕ್ಕೆ ವರ್ಗಾವಣೆ ಮಾಡಲಾಗಿದೆ.
2016 ರ ಕರ್ನಾಟಕ ಕೇಡರ್ನ ಐಪಿಎಸ್ ಅಧಿಕಾರಿ ಯತೀಶ್ ಎನ್. ಅವರು ಮಂಡ್ಯ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು.
ಇನ್ನೂ ಹಲವಾರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದ್ದು, ಗುಪ್ತಚರ ವಿಭಾಗದ ಪೊಲೀಸ್ ಮಹಾನಿರೀಕ್ಷಕ ಲಾಭು ರಾಮ್ ಅವರನ್ನು ಬೆಂಗಳೂರಿನ ಕೇಂದ್ರ ಶ್ರೇಣಿಯ ಪೊಲೀಸ್ ಮಹಾನಿರೀಕ್ಷಕರಾಗಿ ವರ್ಗಾವಣೆ ಮಾಡಲಾಗಿದೆ.
ದಾವಣಗೆರೆ ಪೂರ್ವ ವಲಯದ ಪೊಲೀಸ್ ಮಹಾ ನಿರೀಕ್ಷಕ ಡಾ.ಕೆ.ತ್ಯಾಗರಾಜನ್ ಅವರನ್ನು ವರ್ಗಾವಣೆ ಮಾಡಿ ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಮಹಾ ನಿರೀಕ್ಷಕರಾಗಿ ನಿಯೋಜನೆ ಮಾಡಲಾಗಿದೆ.
ಮೈಸೂರು ನಗರ ಪೊಲೀಸ್ ಕಮಿಷನರ್ ಬಿ.ರಮೇಶ್ ಅವರನ್ನು ಉಪ ಪೊಲೀಸ್ ಮಹಾನಿರೀಕ್ಷಕರು, ಪೂರ್ವ ವಲಯ, ದಾವಣಗೆರೆಗೆ ವರ್ಗಾವಣೆ ಮಾಡಲಾಗಿದೆ.
ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ಅವರನ್ನು ವರ್ಗಾವಣೆ ಮಾಡಿ ಮೈಸೂರು ನಗರ ಪೊಲೀಸ್ ಆಯುಕ್ತರನ್ನಾಗಿ ನೇಮಿಸಲಾಗಿದೆ.
ಬೆಂಗಳೂರು ನಗರ ಆಗ್ನೇಯ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಸಿ.ಕೆ.ಬಾಬಾ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.ಹೀಗೇ ಐ
ಪಿ ಎಸ್ ಪೊಲೀಸ್ ಅಧಿಕಾರಿಗಳ ವರ್ಗಾವಣೆ ಬಗ್ಗೆ ರಾಜ್ಯ ಸರಕಾರ ಆದೇಶ ಹೋರಾಡಿಸಿರುವ ಬಗ್ಗೆ ಬೆಂಗಳೂರು ವರದಿ ತಿಳಿಸಿದೆ.


























































































































































































