ಮಂಗಳೂರಿನ ಖ್ಯಾತ ಯುರೋಲಜಿಸ್ಟ್ ಡಾ. ಸದಾನಂದ ಪೂಜಾರಿಯವರಿಗೆ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್.

97.8K Views 11 Jul 2024

ಮಂಗಳೂರು : ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ ಸಾಧಕರ ಸನ್ಮಾನ ಕಾರ್ಯಕ್ರಮದಲ್ಲಿ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಸಂಸದರಾದ ಜಗದೀಶ್ ಶೆಟ್ಟರ್, ಡಾ. ಸಿ.ಎನ್. ಮಂಜುನಾಥ್, ಹಿರಿಯ ಬಾಲಿವುಡ್ ನಟ ಗುಲ್ಶನ್ ಗ್ರೋವರ್ ಮೊದಲಾದವರು ಉಪಸ್ಥಿತರಿದ್ದರು. ಡಾ.ಸದಾನಂದ ಪೂಜಾರಿಯವರು ಮಂಗಳೂರಿನ ವೆನ್ಲಾಕ್ ಜಿಲ್ಲಾ ಸರಕಾರಿ ಆಸ್ಪತ್ರೆಯಲ್ಲಿ ಮೂತ್ರರೋಗ ವಿಭಾಗದ ಮುಖ್ಯಸ್ಥರಾಗಿದ್ದು, ಸಾವಿರಾರು ಬಡರೋಗಿಗಳಿಗೆ ಉಚಿತ ಚಿಕಿತ್ಸೆ ನೀಡಿ ಸಮಾಜಮುಖಿಯಾಗಿ ಸಾಗಿ ಬಡವರ ಪಾಲಿನ ಕರುಣಾಮಯಿ ಎಂದೇ ಜನಜನಿತರಾಗಿದ್ದಾರೆ. ಇವರಿಗೆ Mp mla’s news ಸೌಹಾರ್ದ ಸಂಗಮದಲ್ಲಿ ಬೆಸ್ಟ್ ಡಾಕ್ಟರ್ ಅವಾರ್ಡ್ ನೀಡಿ ಗೌರವಿಸಿದೆ.

Scroll to Top