ಮಂಗಳೂರು: ರೋಟರಿ ಜಿಲ್ಲೆ 3181 ರ ವಲಯ -1 ರ ನೂತನ ಸಹಾಯಕ ಗವರ್ನರ್ ಆಗಿ ಪತ್ರಕರ್ತ, ರಂಗ ಸಂಘಟಕ ಶರತ್ ಶೆಟ್ಟಿ ಆಯ್ಕೆಯಾಗಿದ್ದಾರೆ. ಇವರು ರಂಗ ನಟ, ಯಕ್ಷಗಾನ ಕಲಾವಿದ, ಕಳೆದ 26 ವರ್ಷಗಳಿಂದ ಕಿನ್ನಿಗೋಳಿಯ ವಿಜಯಾ ಕಲಾವಿದರು ನಾಟಕ ಸಂಸ್ಥೆಯನ್ನು ಮುನ್ನಡೆಸುತ್ತಿದ್ದು, ರಂಗಭೂಮಿ ಸಂಘಟನೆಗೆ 2005 ರಲ್ಲಿ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ. ಹುಟ್ಟೂರು ಸಂಕಲಕರಿಯ ವಿಜಯಾ ಯುವಕ ಸಂಘ, ಸಂಕಲಕರಿಯ ಹಾಲು ಉತ್ಪಾದಕರ ಸಂಘ, ಮುಲ್ಕಿ ವಲಯ ಪತ್ರಕರ್ತರ ಸಂಘ, ಕಿನ್ನಿಗೋಳಿಯ ಸಾರ್ವಜನಿಕ ಗಣೇಶೋತ್ಸವ ಸಮಿತಿ, ಐಕಳ ಪೊಂಪೈ ಕಾಲೇಜು ಹಳೆ ವಿದ್ಯಾರ್ಥಿ ಸಂಘ, ಮುಂಡ್ಕೂರು ವಿದ್ಯಾವರ್ಧಕ ಪದವಿಪೂರ್ವ ಕಾಲೇಜು ಹಳೆ ವಿದ್ಯಾರ್ಥಿ ಸಂಘ, ಶಿರ್ವ ಎಂ.ಎಸ್.ಆರ್.ಎಸ್ ಕಾಲೇಜು ವಿದ್ಯಾರ್ಥಿ ಸಂಘ, ಕಿನ್ನಿಗೋಳಿ ರೋಟರಾಕ್ಟ್ ಗಳಲ್ಲಿ ಅಧ್ಯಕ್ಷರಾಗಿ, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷರಾಗಿ, ಕಿನ್ನಿಗೋಳಿ ರೋಟರಿ ಆಂಗ್ಲ ಮಾಧ್ಯಮ ಶಾಲೆಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ. ಉತ್ತಮ ಕಾರ್ಯಕ್ರಮ ನಿರೂಪಕರಾಗಿ, ಸಮಾಜ ಸೇವಕರಾಗಿರುವ ಇವರಿಗೆ Mp mla’s ನ್ಯೂಸ್ ಶುಭ ಹಾರೈಸುತ್ತದೆ.








































































































































































































