ಶಿರಸಿ: ಬೆಳಿಗ್ಗೆ ದೇವತಾ ಪ್ರಾರ್ಥನೆ, ಶ್ರೀಗಳವರಿಂದ ವ್ಯಾಸ ಪಂಚಕ, ಆದಿಶಂಕರಚಾರ್ಯರ ಪೂಜೆ ಮೂಲಕ ಚಾತುರ್ಮಾಸ್ಯ ವೃತಾಚರಣೆ ಸಂಕಲ್ಪಿಸಿದರು.
ಬಳಿಕ ದೈವಜ್ಞ ಬ್ರಾಹ್ಮಣ ಸಮಾಜದ ವತಿಯಿಂದ ಕುಲಗುರುಗಳ ಪಾದುಕಾ ಪೂಜೆ, ಸಭಾ ಕಾರ್ಯಕ್ರಮ, ಶ್ರೀಗಳಿಂದ ಆಶೀರ್ವಚನ, ವ್ಯಾಸಕ್ಷತೆ ನಡೆಯಿತು. 12.30ಕ್ಕೆ ಶ್ರೀಗಳ ಪಟ್ಟದ ದೇವರ ಮಹಾಪೂಜೆ, ಪ್ರಸಾದ ವಿತರಣೆ, ಅನ್ನ ಸಂತರ್ಪಣೆ ಕಾರ್ಯಕ್ರಮ ನಡೆಯಿತು.
ಸೆ. 18ರಂದು ಚಾತುರ್ಮಾಸ್ಯದ ಸೀಮೋಲ್ಲಂಘನ ಕಾರ್ಯಕ್ರಮ ನಡೆಯಲಿದೆ ಎಂದು ಶ್ರೀ ಮಠದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಸತೀಶ್ ಕಾಪಿಕಾಡ್.
























































































































































































