ಮಂಗಳೂರು : ಖಾಸಗಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಯೊಬ್ಬರಿಗೆ ಎದೆನೋವು ಕಾಣಿಸಿಕೊಂಡಾಗ ತಕ್ಷಣ ಎಚ್ಚೆತ್ತ ಬಸ್ನ ಚಾಲಕ ಮತ್ತು ನಿರ್ವಾಹಕ ಪ್ರಯಾಣಿಕರಿದ್ದ ಬಸ್ ಅನ್ನು ಆಂಬುಲೆನ್ಸ್ ನಂತೆ ಚಲಾಯಿಸಿ ಕೇವಲ ಆರು ನಿಮಿಷದಲ್ಲಿ ಆಸ್ಪತ್ರೆ ಬಾಗಿಲಿಗೆ ತೆಗೆದುಕೊಂಡು ಹೋಗಿ ವಿದ್ಯಾರ್ಥಿನಿ ಯ ಪ್ರಾಣ ರಕ್ಷಣೆ ಮಾಡಿದ ಬಸ್ ಚಾಲಕ ನಿರ್ವಾಕರಾದ ಗಜೇಂದ್ರ ಕುಂದರ್ ಮತ್ತು ಮಹೇಶ್ ಪೂಜಾರಿಯವರನ್ನು ಕಾರ್ಪೊರೇಟರ್ ಎಂ. ಶಶಿಧರ ಹೆಗ್ಡೆಯವರ ನೇತೃತ್ವದಲ್ಲಿ ಚಿಲಿಂಬಿ ಆದರ್ಶನಗರದ ಆದರ್ಶ್ ಫ್ರೆಂಡ್ಸ್ ಅಸೋಸಿಯೇಶನ್ ವಠಾರದಲ್ಲಿ ಸನ್ಮಾನಿಸಲಾಯಿತು.
ಎಂ.ಶಶಿಧರ ಹೆಗ್ಡೆಯವರು ಮಾತನಾಡಿ, 13F ರೂಟ್ ನಂಬರ್ ಕೃಷ್ಣ ಪ್ರಸಾದ್ ಬಸ್ ನಲ್ಲಿ ಪ್ರಯಾಣಿಸುತಿದ್ದ ಕಾಲೇಜು ವಿದ್ಯಾರ್ಥಿನಿ ಯೊಬ್ಬರಿಗೆ ಎದೆ ನೋವು ಕಾಣಿಸಿಕೊಂಡಿತು. ಹೃದಯಾಘಾತದ ಸೂಚನೆ ಅರಿತ ಬಸ್ ಚಾಲಕ ನಿರ್ವಾಹಕರಾದ ಗಜೇಂದ್ರ ಕುಂದರ್ ಮತ್ತು ಮಹೇಶ್ ಪೂಜಾರಿ,ಸುರೇಶ್ ಬಜ್ಪೆ, ಇವರು ಪ್ರಯಾಣಿಕರಿದ್ದ ಬಸ್ ಅನ್ನು ಆಸ್ಪತ್ರೆ ಕಡೆಗೆ ಚಲಾಯಿಸಿ ಮಾನವೀಯ ಕಾರ್ಯ ಮಾಡಿದ್ದಾರೆ. ಬಸ್ಸು ಚಾಲಕ ನಿರ್ವಾಹಕರ ಕಾರ್ಯ ಸಮಾಜ ಮುಖಿಯಾಗಿ ಕಾರ್ಯ ನಿರ್ವಹಿಸುವುದಕ್ಕೆ ಪ್ರತಿಯೊಬ್ಬರಿಗೂ ಸ್ಫೂರ್ತಿ ಎಂದರು. ಕಾರ್ಯಕ್ರಮದಲ್ಲಿ ಬಸ್ಸು ಮಾಲಕರ ಸಂಘದ ಅಧ್ಯಕ್ಷರಾದ ಜಯಶೀಲ ಅಡ್ಯಂತಾಯ, ಮೈಕಲ್ ಡಿಸಿಲ್ವ, ರಾಜೇಂದ್ರ ಚಿಲಿಂಬಿ, ಪ್ರವೀಣ್ ದಡ್ಡಲ್ ಕಾಡ್, ಚಂದ್ರಹಾಸ ಶೆಟ್ಟಿ ಕೊಟ್ಟಾರ ಕ್ರಾಸ್, ಅಶೋಕ್ ಕೋಟ್ಯಾನ್, ಮಿಥುನ್ ಗೌತಮ್, ಹರೀಶ್, ಅಜಿತ ವಸಂತ್, ಶುಭಾ ರಾಜೇಂದ್ರ, ಸಂದೇಶ್ ಕೊಟ್ಟಾರ ಕ್ರಾಸ್,ಅದ್ದು ಸುರತ್ಕಲ್, ಭಾಸ್ಕರ್ ಯು ಮುಂತಾದವರು ಉಪಸ್ಥಿತರಿದ್ದರು.



























































































































































































