ದ.ಕ. ಜಿಲ್ಲಾ ನಾಮಫಲಕ ಕಲಾಕಾರರ ಸಂಘದ ಸದಸ್ಯರಿಗೆ ಅಪಘಾತ ವಿಮಾ ಪ್ರಮಾಣ ಪತ್ರ ವಿತರಣೆ.

105.3K Views 16 Aug 2024

ಮಂಗಳೂರು: ದ.ಕ. ಜಿಲ್ಲಾ ನಾಮಫಲಕ ಕಲಾಕಾರರ ಸಂಘದ ಸದಸ್ಯರಿಗೆ ಅಪಘಾತ ವಿಮಾ ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮವು ದಿನಾಂಕ ಆಗಸ್ಟ್ 12 ರಂದು ಬಬ್ಬುಸ್ವಾಮಿ ದೈವಸ್ಥಾನ ಕೊಪ್ಪಳ ಹಿತ್ಲು ಕುದ್ರೋಳಿಯಲ್ಲಿ ಜರಗಿತು.
ಈ ಅಪಘಾತ ವಿಮಾ ಸೌಲಭ್ಯವನ್ನು ಪ್ರತಿಯೊಬ್ಬರು ಪಡೆದುಕೊಳ್ಳಬೇಕು ಅಪಘಾತ ಯಾವಾಗ ಸಂಭವಿಬಹುದು ಎಂಬುವುದು ತಿಳಿಯದು, ಆರೋಗ್ಯ ವಿಮೆಯ ಸೌಲಭ್ಯವು ಆಸ್ಪತ್ರೆಯ ವೆಚ್ಚವನ್ನು ಭರಿಸಬಹುದು. ಆದರೆ ಅಪಘಾತ ಸಂಭವಿಸಿ ದುಡಿಯಲಾಗದಿದ್ದರೆ ಅಥವಾ ಮರಣ ಸಂಭವಿಸಿದರೆ ಈ ಅಂಚೆ ಇಲಾಖೆಯ ವಿಮಾ ಸೌಲಭ್ಯವು ತಮ್ಮ ಅವಲಂಬಿತರಿಗೆ ಪ್ರಯೋಜನವಾಗಬಹುದು ಎಂದು ಪ್ರಾಸ್ತಾವಿಕ ಮಾತಿನಲ್ಲಿ ಕೆ.ಮಾಧವ ಕೋಟ್ಯಾನ್‌ರವರು ನುಡಿದರು.
ಉದ್ಯಮಿ ಚಂಪಾಲಾಲ್ (ಮಹಾಲಕ್ಷ್ಮಿ ಸ್ಟಿಕ್ಕರ್ಸ್) ವಿಮಾ ಪ್ರಮಾಣ ಪತ್ರ ವಿತರಿಸಿದರು. ಕಿರಣ್‌ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಗಣೇಶ್ ಆಚಾರ್ಯ ಪ್ರಾರ್ಥಿಸಿದರು. ದಯಾನಂದ್ ಕಾರ್ಯಕ್ರಮ ನಿರೂಪಿಸಿಸಿದರು.

Read More News

Scroll to Top