ಮಂಗಳೂರು ಬೋಳೂರಿನ ಮಾತಾ ಅಮೃತಾನಂದಮಯಿ ಮಠದ ಶ್ರೀ ಬ್ರಹ್ಮಸ್ಥಾನ ಕ್ಷೇತ್ರದಲ್ಲಿ ದಸರಾ ಹಬ್ಬದ ಶುಭ ಸಂದರ್ಭದಲ್ಲಿ ಜನಪ್ರಿಯ ಗಾಯಕ ಶ್ರೀ ಅಜಯ್ ವಾರಿಯರ್

113.4K Views 12 Oct 2024

ಮಂಗಳೂರು ನಗರದ ಬೋಳೂರಿನಲ್ಲಿರುವ
ಶ್ರೀ ಬ್ರಹ್ಮಸ್ಥಾನ ಕ್ಷೇತ್ರಕ್ಕೆ ಖ್ಯಾತ ಬಹುಭಾಷಾ ಹಿನ್ನೆಲೆ ಗಾಯಕ ಅಜಯ್ ವಾರಿಯರ್ ಭೇಟಿ ನೀಡಿದರು.
ಶ್ರೀ ಬ್ರಹ್ಮಸ್ಥಾನ ಕ್ಷೇತ್ರಾಭಿವೃದ್ಧಿ ಸಮಿತಿ ವತಿಯಿಂದ ಅವರನ್ನು ಸ್ವಾಗತಿಸಲಾಯಿತು.


ಶ್ರೀ ಕ್ಷೇತ್ರದ ಪೂಜೆಯಲ್ಲಿ ಭಾಗವಹಿಸಿ “ಕೀರ್ತನ ಸೇವೆ”
ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತಾ ಅಮೃತಾನಂದಮಯಿ ಸೇವಾ ಸಮಿತಿಯ ವತಿಯಿಂದ ಅಧ್ಯಕ್ಷರಾದ ಸುರೇಶ್ ಅಮೀನ್ ಸನ್ಮಾನಿಸಿದರು.ಅಮೃತ ವಿದ್ಯಾಲಯಂ ಪ್ರಾಂಶುಪಾಲೆ ಅಕ್ಷತಾ ಶೆಣೈ ನಿರೂಪಣೆ ಮಾಡಿದರು. ಕ್ಯಾಂಪಸ್ ಡೈರೆಕ್ಟರ್ ಯತೀಶ್ ಬೈಕಂಪಾಡಿ,ದಿಲೀಪ್ ಕುಮಾರ್ ಹಾಗೂ ಅಮ್ಮನ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ಚಿತ್ರಗಳು: ಸತೀಶ್ ಕಾಪಿಕಾಡ್

Read More News

Scroll to Top