ಮಂಗಳೂರು ನಗರದ ಬೋಳೂರಿನಲ್ಲಿರುವ
ಶ್ರೀ ಬ್ರಹ್ಮಸ್ಥಾನ ಕ್ಷೇತ್ರಕ್ಕೆ ಖ್ಯಾತ ಬಹುಭಾಷಾ ಹಿನ್ನೆಲೆ ಗಾಯಕ ಅಜಯ್ ವಾರಿಯರ್ ಭೇಟಿ ನೀಡಿದರು.
ಶ್ರೀ ಬ್ರಹ್ಮಸ್ಥಾನ ಕ್ಷೇತ್ರಾಭಿವೃದ್ಧಿ ಸಮಿತಿ ವತಿಯಿಂದ ಅವರನ್ನು ಸ್ವಾಗತಿಸಲಾಯಿತು.


ಶ್ರೀ ಕ್ಷೇತ್ರದ ಪೂಜೆಯಲ್ಲಿ ಭಾಗವಹಿಸಿ “ಕೀರ್ತನ ಸೇವೆ”
ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತಾ ಅಮೃತಾನಂದಮಯಿ ಸೇವಾ ಸಮಿತಿಯ ವತಿಯಿಂದ ಅಧ್ಯಕ್ಷರಾದ ಸುರೇಶ್ ಅಮೀನ್ ಸನ್ಮಾನಿಸಿದರು.ಅಮೃತ ವಿದ್ಯಾಲಯಂ ಪ್ರಾಂಶುಪಾಲೆ ಅಕ್ಷತಾ ಶೆಣೈ ನಿರೂಪಣೆ ಮಾಡಿದರು. ಕ್ಯಾಂಪಸ್ ಡೈರೆಕ್ಟರ್ ಯತೀಶ್ ಬೈಕಂಪಾಡಿ,ದಿಲೀಪ್ ಕುಮಾರ್ ಹಾಗೂ ಅಮ್ಮನ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ಚಿತ್ರಗಳು: ಸತೀಶ್ ಕಾಪಿಕಾಡ್









































































































































































































