ಕುತ್ಲುರು ಉನ್ನತಿಕರಿಸೀದ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಊಟದ ಸ್ಟೀಲ್ ತಟ್ಟೆ ಹಾಗೂ ಕಪಾಟು ವಿತರಣೆ

108.2K Views 29 Oct 2024

ಮಂಗಳೂರು, ಅಕ್ಟೋಬರ್ 29,ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದಿಂದ ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಸಹಭಾಗಿತ್ವದಲ್ಲಿ ಗ್ರಾಮ ವಾಸ್ತವ್ಯ ಮಾಡಲಾಗಿರುವ ಕುತ್ಲುರು ಉನ್ನತಿಕರಿಸೀದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಮುದಾಯದತ್ತ ಶಾಲೆ ಕಾರ್ಯಕ್ರಮ ನಡೆಯಿತು.
ಇದೇ ವೇಳೆ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ವತಿಯಿಂದ ಶಾಲಾ ಮಕ್ಕಳಿಗೆ ಊಟದ ತಟ್ಟೆ ವಿತರಿಸಲಾಯಿತು.ಸಮೃದ್ದಿ ಎಂಟರ್ಪ್ರೈಸಸ್ ಮಾಲೀಕರಾದ ಕಾಲೀ0 ಅವರು ಶಾಲೆಗೆ ಕಪಾಟು ಹಸ್ತಾಂತರಿಸಿದರು.
ಶಾಲಾ ವಿದ್ಯಾರ್ಥಿಗಳು ಹಣತೆಯೊಂದಿಗೆ ದೀಪಾವಳಿ ಆಚರಿಸಿದರು.
ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಕುತ್ಲುರು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರಾಮಚಂದ್ರ ಭಟ್ ಪತ್ರಕರ್ತರು ಗ್ರಾಮ ವಾಸ್ತವ್ಯ ಮಾಡಿದ ಬಳಿಕ ಈ ಗ್ರಾಮ ಹಾಗೂ ಶಾಲೆ ಬಹಳ ಅಭಿವೃದ್ಧಿ ಕಂಡಿದೆ ಎಂದು ಹೇಳಿದರು.
ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಜಿಲ್ಲಾ ಅಧ್ಯಕ್ಷ ಸಂತೋಷ್ ಕುಮಾರ್ ಕೊಲ್ಯ ಮಾತನಾಡಿ ಗ್ರಾಮೀಣ ಪ್ರದೇಶದ ಈ ಶಾಲೆ ಎಲ್ಲಾ ಶಾಲೆಗಳಿಗೆ ಮಾದರಿ ಯಾಗಿದೆ. ಈ ಶಾಲಾ ಅಭಿವೃದ್ಧಿ ಗೆ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ತಿಳಿಸಿದರು.

ಕಾರ್ಯಕ್ರಮ ದಲ್ಲಿ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಸ್ಥಾಪಕ ಅಧ್ಯಕ್ಷ ದೀಪಕ್. ಜಿ, ಪದಾಧಿಕಾರಿಗಳಾದ ಶ್ರೀನಿವಾಸ್ ಕುಲಾಲ್, ಲಕ್ಷ್ಮಣ ಕೋಟ್ಯಾನ್,ವಿನೀತ್ ಬಂಗೇರ, ಸುಜಾತಾ ಸಾಲ್ಯಾನ್, ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷೆ ಶ್ವೇತಾ ಜಗದೀಶ್, ಶಾಲಾ ಮುಖ್ಯ ಗುರುಗಳಾದ ಶ್ರೀಮತಿ ಜ್ಯೋತಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶ್ರೀ ನಿಮಿತ್ ಜೈನ್,, ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ಮೀನಾ, ಶ್ರೀಮತಿ ಪ್ರೇಮ ಉಪಸ್ಥಿತರಿದ್ದರು.ಶ್ರಮತಿ ರೂಪ ಕುಮಾರಿ ವಂದಿಸಿದರು. ರಾಜಾಕಾಳಪ್ಪ ನವರು ಕಾರ್ಯಕ್ರಮ ನಿರೂಪಿಸಿದರು.

Read More News

ಸರಕಾರಿ ಆಸ್ಪತ್ರೆಗಳಲ್ಲಿ ರೇಬಿಸ್ ತಡೆಗಟ್ಟಲು ನೀಡುವ ERIG ಇಂಜೆಕ್ಷನ್ ಕಳಪೆ ಗುಣಮಟ್ಟದ ಔಷಧವಲ್ಲ -ಡಿಎಂಒ ಡಾ. ಶಿವಪ್ರಕಾಶ್ ಸ್ಪಷ್ಟನೆ. ಅದು ಓಕೆ, ಖಾಸಗಿ ಆಸ್ಪತ್ರೆಗಳಲ್ಲಿ ನೀಡಲಾಗುವ ಬೆಲೆ ಬಾಳುವ ರಿಸ್ಕ್ ರಹಿತ ಇಮ್ಮುನೋಗ್ಲೋಬುಲಿನ್ ಇಂಜೆಕ್ಷನ್ ಗಳ ಬಳಕೆಗೆ mpmlasnewstv ಒತ್ತಾಯ

Scroll to Top